ಲೋಕಸಭೆ  
ದೇಶ

ಸಂಸತ್ ಚಳಿಗಾಲ ಅಧಿವೇಶನ: ವಿಪಕ್ಷಗಳ ಗದ್ದಲ; ಉಭಯ ಸದನಗಳ ಕಲಾಪ ನವೆಂಬರ್ 27ಕ್ಕೆ ಮುಂದೂಡಿಕೆ

ವಿಪಕ್ಷಗಳು ವಕ್ಫ್ ಮಂಡಳಿ ವಿವಾದ ಹಾಗೂ ಮಣಿಪುರ ಗಲಭೆ ಕುರಿತು ಚರ್ಚೆಗೆ ಆಗ್ರಹಿಸಿದವು. ಈ ವಿಷಯದಲ್ಲಿ ವಾಗ್ವಾದ ಆರಂಭಗೊಂಡಿದ್ದರಿಂದ ಲೋಕಸಭೆ ಮತ್ತು ರಾಜ್ಯಸಭೆಯ ಕಲಾಪಗಳನ್ನು ನ.27ಕ್ಕೆ ಮುಂದೂಡಲಾಯಿತು.

ನವದೆಹಲಿ: ಸಂಸತ್ತಿನಲ್ಲಿ ಪ್ರಸಕ್ತ ಸಾಲಿನ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದಂತೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರ ನಡೆದ ಕಾರಣ ಉಭಯ ಸದನಗಳ ಕಲಾಪವನ್ನು ನವೆಂಬರ್ 27ಕ್ಕೆ ಮುಂದೂಡಲಾಗಿದೆ.

ಅಧಿವೇಶನದ ಮೊದಲ ದಿನದಂದು ಸದನವು ಸಭೆ ಸೇರಿದ ತಕ್ಷಣ, ಮಹಾರಾಷ್ಟ್ರದ ನಾಂದೇಡ್ ಕ್ಷೇತ್ರದಿಂದ ಸದನಕ್ಕೆ ಚುನಾಯಿತರಾಗಿದ್ದ ವಸಂತರಾವ್ ಚವಾಣ್ ಮತ್ತು ಪಶ್ಚಿಮ ಬಂಗಾಳದ ಬಸಿರ್ಹತ್ ಕ್ಷೇತ್ರದಿಂದ ಚುನಾಯಿತರಾಗಿದ್ದ ಎಸ್ಕೆ ನೂರುಲ್ ಇಸ್ಲಾಂ ಅವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು.

ಬಳಿಕ ವಿಪಕ್ಷಗಳು ವಕ್ಫ್ ಮಂಡಳಿ ವಿವಾದ ಹಾಗೂ ಮಣಿಪುರ ಗಲಭೆ ಕುರಿತು ಚರ್ಚೆಗೆ ಆಗ್ರಹಿಸಿದವು. ಈ ವಿಷಯದಲ್ಲಿ ವಾಗ್ವಾದ ಆರಂಭಗೊಂಡಿದ್ದರಿಂದ ಲೋಕಸಭೆ ಮತ್ತು ರಾಜ್ಯಸಭೆಯ ಕಲಾಪಗಳನ್ನು ನ.27ಕ್ಕೆ ಮುಂದೂಡಲಾಯಿತು.

ಕೇಂದ್ರ ಸರ್ಕಾರ ಒಂದು ದೇಶ, ಒಂದು ಚುನಾವಣೆ, ಬ್ಯಾಕಿಂಗ್ ಮಸೂದೆ ಮತ್ತು ರೈಲ್ವೆ ವಿಧೇಯಕ ತಿದ್ದುಪಡಿ ಮಸೂದೆ, ವಕ್ಫ್ ಮಂಡಳಿ ಮಸೂದೆ ಮತ್ತು ಪ್ರಕೃತಿ ವಿಕೋಪ ನಿರ್ವಹಣೆ ಮಸೂದೆಗಳನ್ನು ಮಂಡಿಸಲು ಮುಂದಾಗಿತ್ತು.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಗೆಲುವಿನ ಹಿನ್ನೆಲೆಯಲ್ಲಿ ತರಾತರಿಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಮಸೂದೆಗಳನ್ನು ಮಂಡಿಸಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ.

ಈ ನುವೆ ಪ್ರತಿಪಕ್ಷಗಳು ಯಾವುದೇ ಮಸೂದೆ ಮಂಡನೆ ಮಾಡುವ ಮುನ್ನ ಮಣಿಪುರದಲ್ಲಿ ಮರುಕಳಿಸಿರುವ ಹಿಂಸಾಚಾರ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಕುರಿತು ಚರ್ಚೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದವು. ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷ ಸದಸ್ಯರು ಗದ್ಧಲ ಸೃಷ್ಟಿಸಿದ್ದರಿಂದ ಸಭಾಪತಿ ಕಲಾಪವನ್ನು ಮುಂದೂಡಿದರು.

ನವೆಂಬರ್ 26ರ ಸಂವಿಧಾನ ದಿನ ಹಿನ್ನೆಲೆಯಲ್ಲಿ ಅಧಿವೇಶನ ನಡೆಸದಿರಲು ಹಾಗೂ ಉಭಯ ಸದನಗಳ ಸದಸ್ಯರೊಂದಿಗೆ ಸಂವಿದಾನ ಭವನದಲ್ಲಿ ಸಂವಿಧಾನ ದಿನವನ್ನು ಆಚರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್