ಕಾರ್ತಿ ಚಿದಂಬರಂ online desk
ದೇಶ

EVM ತಿರುಚಿರುವುದಕ್ಕೆ ಸಾಕ್ಷ್ಯಗಳಿಲ್ಲ: ಸ್ವಪಕ್ಷದ ಆರೋಪಕ್ಕೆ ಕಾರ್ತಿ ಚಿದಂಬರಂ ತದ್ವಿರುದ್ಧ ಹೇಳಿಕೆ

"ನಾನು 2004 ರಿಂದಲೂ ಚುನಾವಣೆಗಳಲ್ಲಿ ಭಾಗಿಯಾಗುತ್ತಿದ್ದೇನೆ, "ವೈಯಕ್ತಿಕವಾಗಿ," ಇವಿಎಂ ಟ್ಯಾಂಪರಿಂಗ್ ಅಥವಾ ತಿರುಚಿರುವುದಕ್ಕೆ ಸಂಬಂಧಿಸಿದ ಪುರಾವೆಗಳನ್ನು ನೋಡಿಲ್ಲ ಎಂದು ಕಾರ್ತಿ ಚಿದಂಬರಂ ಹೇಳಿದ್ದಾರೆ.

ಚೆನ್ನೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಫಲಿತಾಂಶದ ಬಗ್ಗೆ ಕಾಂಗ್ರೆಸ್ ನಲ್ಲಿ ಆತ್ಮಾವಲೋಕನ ನಡೆಯುತ್ತಿದೆ. ಕೆಲವು ನಾಯಕರು ಇವಿಎಂ ತಿರುಚಲಾಗಿದೆ ಎಂಬ ಆರೋಪ ಮಾಡಿದರೆ, ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಇದಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿದ್ದಾರೆ.

"ನಾನು 2004 ರಿಂದಲೂ ಚುನಾವಣೆಗಳಲ್ಲಿ ಭಾಗಿಯಾಗುತ್ತಿದ್ದೇನೆ, "ವೈಯಕ್ತಿಕವಾಗಿ," ಇವಿಎಂ ಟ್ಯಾಂಪರಿಂಗ್ ಅಥವಾ ತಿರುಚಿರುವುದಕ್ಕೆ ಸಂಬಂಧಿಸಿದ ಪುರಾವೆಗಳನ್ನು ನೋಡಿಲ್ಲ ಎಂದು ಕಾರ್ತಿ ಚಿದಂಬರಂ ಹೇಳಿದ್ದಾರೆ.

ಚಿದಂಬರಂ ಎಎನ್‌ಐ ನೊಂದಿಗೆ ಮಾತನಾಡಿದ್ದು "ನಾನು 2004 ರಿಂದ ಇವಿಎಂಗಳನ್ನು ಬಳಸಿರುವ ಚುನಾವಣೆಯಲ್ಲಿ ಭಾಗವಹಿಸುತ್ತಿದ್ದೇನೆ. ನನಗೆ ವೈಯಕ್ತಿಕವಾಗಿ ಯಾವುದೇ ಕೆಟ್ಟ ಅನುಭವವಿಲ್ಲ. ಯಾವುದೇ ರೀತಿಯ ಟ್ಯಾಂಪರಿಂಗ್ ನಡೆದಿದೆ ಎಂದು ಸಾಬೀತುಪಡಿಸಲು ನನ್ನ ಬಳಿ ಯಾವುದೇ ಪುರಾವೆಗಳಿಲ್ಲ." ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಆರೋಪಗಳನ್ನು ವೈಜ್ಞಾನಿಕ ಡೇಟಾದಿಂದ ಸಾಬೀತುಪಡಿಸಬೇಕು ಎಂದು ಕಾರ್ತಿ ಚಿದಂಬರಂ ಹೇಳಿದ್ದಾರೆ.

"ಯಾರಾದರೂ ವಾಸ್ತವವಾಗಿ ಟ್ಯಾಂಪರಿಂಗ್ ನಡೆದಿದೆ ಎಂದು ವೈಜ್ಞಾನಿಕ ದತ್ತಾಂಶದೊಂದಿಗೆ ಸಾಬೀತುಪಡಿಸದ ಹೊರತು, ನನ್ನ ದೃಷ್ಟಿಕೋನವನ್ನು ಬದಲಾಯಿಸಲು ನಾನು ಸಿದ್ಧನಿಲ್ಲ. ನನ್ನ ಪಕ್ಷದ ಅನೇಕರು ವಿಭಿನ್ನ ದೃಷ್ಟಿಕೋನವನ್ನು ಹೊಂದಿದ್ದಾರೆಂದು ನನಗೆ ತಿಳಿದಿದೆ" ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT