ಕಾನೂನು ಸುವ್ಯವಸ್ಥೆ ಕಪಾಡಲು ನಿಯೋಜಿಸಲಾಗಿರುವ ಭದ್ರತಾ ಸಿಬ್ಬಂದಿ online desk
ದೇಶ

ಸಂಭಾಲಾ ಹಿಂಸಾಚಾರ: ಉತ್ಖನನದ ವದಂತಿಯಿಂದ ಹಿಂಸಾಚಾರ; ಎಸ್ ಡಿಎಂ, ಸಿಒ ಇದಕ್ಕೆ ಹೊಣೆ- ಮಸೀದಿ ನಿರ್ವಹಣೆ ಸಮಿತಿ

ಹಿಂಸಾಚಾರದಲ್ಲಿ ಈವರೆಗೂ ನಾಲ್ವರು ಮೃತಪಟ್ಟಿದ್ದಾರೆ. ಶಾಹಿ ಜಾಮಾ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಜಾಫರ್ ಅಲಿ ಪತ್ರಿಕಾಗೋಷ್ಠಿಯಲ್ಲಿ ಈ ಆರೋಪ ಮಾಡಿದ್ದು, ಸಭೆ ಮುಗಿಯುತ್ತಿದ್ದಂತೆಯೇ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.

ಸಂಭಾಲಾ: ಸಂಭಾಲ್‌ನಲ್ಲಿ ಉಂಟಾಗಿರುವ ಹಿಂಸಾಚಾರದ ಬಗ್ಗೆ ಜಾಮಾ ಮಸೀದಿಯ ಆಡಳಿತ ಸಮಿತಿ ಪ್ರತಿಕ್ರಿಯೆ ನೀಡಿದ್ದು, ಹಿಂಸಾಚಾರಕ್ಕೆ ಸ್ಥಳೀಯ ಅಧಿಕಾರಿಗಳು ಮತ್ತು ಪೊಲೀಸರೇ ಕಾರಣ ಎಂದು ದೂಷಿಸಿದೆ.

ಹಿಂಸಾಚಾರದಲ್ಲಿ ಈವರೆಗೂ ನಾಲ್ವರು ಮೃತಪಟ್ಟಿದ್ದಾರೆ. ಶಾಹಿ ಜಾಮಾ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಜಾಫರ್ ಅಲಿ ಪತ್ರಿಕಾಗೋಷ್ಠಿಯಲ್ಲಿ ಈ ಆರೋಪ ಮಾಡಿದ್ದು, ಸಭೆ ಮುಗಿಯುತ್ತಿದ್ದಂತೆಯೇ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.

"ಮಸೀದಿಯ ಇತ್ತೀಚಿನ ಸಮೀಕ್ಷೆಯನ್ನು ನ್ಯಾಯಾಲಯದ ಆದೇಶದ ಅಡಿಯಲ್ಲಿ ನಡೆಸಲಾಗಿಲ್ಲ ಆದರೆ ಜಿಲ್ಲಾ ಮ್ಯಾಜಿಸ್ಟ್ರೇಟ್ ನಿರ್ದೇಶನದ ಮೇರೆಗೆ ನಡೆಸಲಾಗಿದೆ. ಈ ಸಮೀಕ್ಷೆಯನ್ನು ಕಾನೂನುಬಾಹಿರವಾಗಿ ನಡೆಸಲಾಗಿದೆ" ಎಂದು ಅಲಿ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

"ಈ ಘಟನೆಯಲ್ಲಿ ಸಂಭಾಲ್‌ನ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ವಂದನಾ ಮಿಶ್ರಾ ಮತ್ತು ಸರ್ಕಲ್ ಆಫೀಸರ್ ಅನುಜ್ ಕುಮಾರ್ ತಪ್ಪಿತಸ್ಥ ಅಧಿಕಾರಿಗಳಾಗಿದ್ದಾರೆ" ಎಂದು ಅವರು ಹೇಳಿದರು.

ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಪೊಲೀಸ್ ಅಧೀಕ್ಷಕರು ಕೋಲಿನಿಂದ ಆಳವನ್ನು ಅಳೆಯಲು ಸೂಚಿಸಿದ್ದರೂ ಸಹ, ಶುಚಿಗೊಳಿಸುವ ತೊಟ್ಟಿಯಿಂದ (ವಾಜುಖಾನಾ) ನೀರನ್ನು ಹರಿಸುವಂತೆ ಎಸ್‌ಡಿಎಂ ಒತ್ತಾಯಿಸಿದರು ಎಂದು ಅಲಿ ಆರೋಪಿಸಿದರು.

"ನೀರನ್ನು ಹರಿಸುವುದರಿಂದ ಹೊರಗೆ ಜಮಾಯಿಸಿದವರಲ್ಲಿ ಗೊಂದಲ ಉಂಟಾಯಿತು, ಅವರು ಉತ್ಖನನ ನಡೆಯುತ್ತಿದೆ ಎಂದು ನಂಬಿದರು ಇದು ಗುಂಪನ್ನು ಕೆರಳಿಸಿತು" ಎಂದು ಅಲಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT