ಎಸ್ ಜೈಶಂಕರ್ TNIE
ದೇಶ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಳ: ಇಸ್ರೇಲ್ ಮತ್ತು ಇರಾನ್ ಜೊತೆ ಭಾರತ ನಿರಂತರ ಸಂಪರ್ಕದಲ್ಲಿದೆ- ಜೈಶಂಕರ್

ಎರಡು ದೇಶಗಳ ನಡುವಿನ ಸಂಘರ್ಷವನ್ನು ಪರಿಹರಿಸುವ ಪ್ರಯತ್ನದಲ್ಲಿ ಭಾರತವು 'ಸಂಯಮ ಪ್ರದರ್ಶನ್' ಮತ್ತು 'ಶಾಂತಿ ಮಾತುಕತೆಗೆ' ಇಸ್ರೇಲ್ ಮತ್ತು ಇರಾನ್ ಅನ್ನು ನಿಯಮಿತವಾಗಿ ಸಂಪರ್ಕಿಸುತ್ತಿದೆ ಎಂದು ಹೇಳಿದರು.

ರೋಮ್: ರಷ್ಯಾ-ಉಕ್ರೇನ್‌ನಲ್ಲಿ ಶಾಂತಿ ಸ್ಥಾಪನೆಯ ಪ್ರಯತ್ನಗಳ ನಡುವೆ ಭಾರತವು ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧವನ್ನು ಕೊನೆಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

ಇಟಲಿಯಲ್ಲಿ ರೋಮ್-ಮೆಡಿಟರೇನಿಯನ್ ಡೈಲಾಗ್ಸ್ ಸಮ್ಮೇಳನದಲ್ಲಿ ಭಾಗಿಯಾಗಿರುವ ಎಸ್ ಜೈಶಂಕರ್ ಅವರು, ಪಶ್ಚಿಮ ಏಷ್ಯಾದಲ್ಲಿ ಹದಗೆಡುತ್ತಿರುವ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಎರಡು ದೇಶಗಳ ನಡುವಿನ ಸಂಘರ್ಷವನ್ನು ಪರಿಹರಿಸುವ ಪ್ರಯತ್ನದಲ್ಲಿ ಭಾರತವು 'ಸಂಯಮ ಪ್ರದರ್ಶನ್' ಮತ್ತು 'ಶಾಂತಿ ಮಾತುಕತೆಗೆ' ಇಸ್ರೇಲ್ ಮತ್ತು ಇರಾನ್ ಅನ್ನು ನಿಯಮಿತವಾಗಿ ಸಂಪರ್ಕಿಸುತ್ತಿದೆ ಎಂದು ಹೇಳಿದರು.

ತಮ್ಮ ಭಾಷಣದಲ್ಲಿ ವಿದೇಶಾಂಗ ಸಚಿವರು ಮತ್ತೊಮ್ಮೆ ಹಮಾಸ್ ಅಪಹರಣವನ್ನು ಖಂಡಿಸಿದರು. ಕದನ ವಿರಾಮವನ್ನು ತಲುಪಲು ಭಾರತದ ಬೆಂಬಲವನ್ನು ಅವರು ಪುನರುಚ್ಚರಿಸಿದರು. ಆದಾಗ್ಯೂ, ಜೈಶಂಕರ್ ಅವರು ಅಂತರರಾಷ್ಟ್ರೀಯ ಮಾನವೀಯ ಕಾನೂನಿಗೆ ಬದ್ಧರಾಗುವ ಅಗತ್ಯವನ್ನು ಒತ್ತಿ ಹೇಳಿದರು. ದೊಡ್ಡ ಪ್ರಮಾಣದ ನಾಗರಿಕ ಸಾವುನೋವುಗಳು 'ಸ್ವೀಕಾರಾರ್ಹವಲ್ಲ' ಎಂದು ವಿವರಿಸಿದರು.

ಇಂದು ನಾನು ನನ್ನ ಮಾತುಗಳನ್ನು ಸಂಘರ್ಷಗಳ ಮೇಲೆ ಕೇಂದ್ರೀಕರಿಸುತ್ತೇನೆ ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಾರೆ. ಮಧ್ಯಪ್ರಾಚ್ಯದಲ್ಲಿನ ಪರಿಸ್ಥಿತಿಯು ಸ್ಪಷ್ಟವಾಗಿ ಚಿಂತಾಜನಕವಾಗಿದೆ. ಏನಾಯಿತು ಮತ್ತು ಇನ್ನೂ ಏನಾಗಬಹುದು. ಭಾರತವು ಭಯೋತ್ಪಾದನೆ ಮತ್ತು ಅಪಹರಣವನ್ನು ನಿಸ್ಸಂದಿಗ್ಧವಾಗಿ ಖಂಡಿಸುತ್ತದೆ. ಮಿಲಿಟರಿ ಕಾರ್ಯಾಚರಣೆಗಳಲ್ಲಿ ದೊಡ್ಡ ಪ್ರಮಾಣದ ನಾಗರಿಕ ಸಾವುಗಳು ಸ್ವೀಕಾರಾರ್ಹವಲ್ಲ ಎಂದು ಪರಿಗಣಿಸುತ್ತದೆ. ಅಂತರಾಷ್ಟ್ರೀಯ ಮಾನವೀಯ ಕಾನೂನನ್ನು ತಕ್ಷಣವೇ ಕಡೆಗಣಿಸಲಾಗುವುದಿಲ್ಲ. ನಾವೆಲ್ಲರೂ ಕದನ ವಿರಾಮವನ್ನು ಬೆಂಬಲಿಸಬೇಕು ಎಂದರು.

ಭಾರತವು ಎರಡು ದೇಶಗಳ ನಡುವಿನ ಸಂಘರ್ಷವನ್ನು ಪರಿಹಾರಿಸಲು ಬೆಂಬಲಿಸುತ್ತದೆ. ಸಂಘರ್ಷದ ವಿಸ್ತರಣೆಯ ಬಗ್ಗೆ ನಮ್ಮ ಕಾಳಜಿಯೂ ಹೆಚ್ಚುತ್ತಿದೆ. ಸಂಯಮ ಮತ್ತು ಹೆಚ್ಚಿದ ಮಾತುಕತೆಯನ್ನು ಪ್ರತಿಪಾದಿಸಲು ನಾವು ಉನ್ನತ ಮಟ್ಟದಲ್ಲಿ ಇಸ್ರೇಲ್ ಮತ್ತು ಇರಾನ್ ಎರಡರೊಂದಿಗೂ ನಿಯಮಿತ ಸಂಪರ್ಕದಲ್ಲಿದ್ದೇವೆ ಎಂದರು. ಜೈಶಂಕರ್ ಅವರು ಅರ್ಥಪೂರ್ಣ ಅಂತಾರಾಷ್ಟ್ರೀಯ ರಾಜತಾಂತ್ರಿಕ ಪ್ರಯತ್ನಗಳಿಗೆ ಕೊಡುಗೆ ನೀಡಲು ಭಾರತದ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT