ಮೂವರನ್ನು ಬಲಿ ತೆಗೆದುಕೊಂಡ ಅಪೂರ್ಣ ಸೇತುವೆ 
ದೇಶ

ಉತ್ತರ ಪ್ರದೇಶ: ತಪ್ಪಾದ ನಕ್ಷೆ ತೋರಿಸಿ ಮೂವರ ಬಲಿ ತೆಗೆದುಕೊಂಡ ಗೂಗಲ್ ಮ್ಯಾಪ್!

ಗೂಗಲ್ ತೋರಿಸಿದ್ದನ್ನು ನಂಬಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯನ್ನು ಹತ್ತಿದ್ದಾರೆ. ಸ್ವಲ್ಪ ದೂರ ಹೋಗುತ್ತಿದ್ದಂತೆ ಸೇತುವೆ ಕಾಮಗಾರಿ ಅಲ್ಲಿಗೇ ನಿಂತಿದೆ ಅವರಿಗೆ ಇದು ಕಂಡಿಲ್ಲ.

ಲಕ್ನೋ: ಗೂಗಲ್​ ಮ್ಯಾಪ್ ನಂಬಿ ಮೂವರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಕಾರಿನ ಚಾಲಕ ಗೂಗಲ್ ಮ್ಯಾಪ್ ನೋಡಿಕೊಂಡು ಕಾರು ಚಲಾಯಿಸುತ್ತಿದ್ದ, ಜತೆ ಆತನ ಸ್ನೇಹಿತರು ಕೂಡ ಇದ್ದರು.

ಗೂಗಲ್ ತೋರಿಸಿದ್ದನ್ನು ನಂಬಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯನ್ನು ಹತ್ತಿದ್ದಾರೆ. ಸ್ವಲ್ಪ ದೂರ ಹೋಗುತ್ತಿದ್ದಂತೆ ಸೇತುವೆ ಕಾಮಗಾರಿ ಅಲ್ಲಿಗೇ ನಿಂತಿದೆ ಅವರಿಗೆ ಇದು ಕಂಡಿಲ್ಲ, ಅಲ್ಲಿಂದ ನೇರವಾಗಿ ಕಾರು ಕೆಳಗಿರುವ ನದಿಗೆ ಬಿದ್ದ ಪರಿಣಾಮ ಮೂವರು ಪ್ರಾಣ ಕಳೆದುಕೊಂಡಿದ್ದಾರೆ.ಕಾರು 50 ಅಡಿ ಎತ್ತರದಿಂದ ರಾಮಗಂಗಾ ನದಿಗೆ ಬಿದ್ದಿದೆ.

ಉತ್ತರ ಪ್ರದೇಶದ ಬರೇಲಿ ಮತ್ತು ಬುಡೌನ್ ಜಿಲ್ಲೆಗಳ ನಡುವಿನ ಗಡಿಯಲ್ಲಿರುವ ಫರೀದ್‌ಪುರ ಮತ್ತು ದತಗಂಜ್‌ಗೆ ಸಂಪರ್ಕ ಕಲ್ಪಿಸುವ ರಾಮಗಂಗಾ ನದಿಯ ಮೇಲಿನ ಅಪೂರ್ಣ ಸೇತುವೆಯಿಂದ ಕಾರು ಉರುಳಿ ಬಿದ್ದ ಪರಿಣಾಮ ಮೂವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ನಿರ್ಮಾಣ ಹಂತದ ಸೇಲುವೆ ಮೇಲೆ‌ ಬ್ಯಾರಿಕೇಟ್ ಹಾಕದಿರುವುದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂವರು ಹರ್ಯಾಣದ ಗುರುಗ್ರಾಮದಿಂದ ಕಾರಿನಲ್ಲಿ ಬರೇಲಿಗೆ ಹೊರಟಿದ್ದರು. ಇಬ್ಬರ ಮೃತದೇಹಗಳ ಗುರುತನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಸುರಕ್ಷತಾ ಕ್ರಮಗಳ ಕೊರತೆ ಅಥವಾ ಸ್ಥಳದಲ್ಲಿ ಅಡಗಿರುವ ಅಪಾಯದ ಬಗ್ಗೆ ಎಚ್ಚರಿಕೆ ನೀಡುವ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT