ಶ್ಯಾಮದೇವ್ ರೈ ಚೌಧರಿ-ನರೇಂದ್ರ ಮೋದಿ TNIE
ದೇಶ

ಕಾಶಿಯ 'ದಾದಾ' ಇನ್ನಿಲ್ಲ... 7 ಬಾರಿ ಶಾಸಕ ಶ್ಯಾಮದೇವ್ ರೈ ಚೌಧರಿ ನಿಧನ: ಪ್ರಧಾನಿ ಮೋದಿ, ಸಿಎಂ ಯೋಗಿ ಸಂತಾಪ

ಸಿಎಂ ಯೋಗಿ ಇತ್ತೀಚೆಗಷ್ಟೇ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. 'ದಾದಾ' ಸಾವಿನ ಸುದ್ದಿ ಕೇಳಿ ಕಾಶಿಯಲ್ಲಿ ಅವರ ಬೆಂಬಲಿಗರಲ್ಲಿ ಶೋಕದ ಅಲೆ ಎಬ್ಬಿಸಿದೆ.

ವಾರಣಾಸಿ: ಉತ್ತರ ಪ್ರದೇಶದ ವಾರಣಾಸಿಯ ರಾಜಕೀಯದ ದಾದಾ ಎಂದೇ ಖ್ಯಾತರಾಗಿದ್ದ 7 ಬಾರಿ ಶಾಸಕರಾಗಿದ್ದ ಶ್ಯಾಮದೇವ್ ರೈ ಚೌಧರಿ ನಿಧನರಾಗಿದ್ದಾರೆ. ದಕ್ಷಿಣ ಕ್ಷೇತ್ರದಿಂದ 7 ಬಾರಿ ಶಾಸಕರಾಗಿದ್ದ ಬಿಜೆಪಿಯ ಹಿರಿಯ ನಾಯಕ ಶ್ಯಾಮದೇವ್ ಇಂಜು ನಿಧನರಾದರು.

ದೀರ್ಘಕಾಲದವರೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಸಿಎಂ ಯೋಗಿ ಇತ್ತೀಚೆಗಷ್ಟೇ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. 'ದಾದಾ' ಸಾವಿನ ಸುದ್ದಿ ಕೇಳಿ ಕಾಶಿಯಲ್ಲಿ ಅವರ ಬೆಂಬಲಿಗರಲ್ಲಿ ಶೋಕದ ಅಲೆ ಎಬ್ಬಿಸಿದೆ.

ವಾರಣಾಸಿಯಲ್ಲಿ ಶ್ಯಾಮದೇವ್ ರಾಯ್ ಚೌಧರಿ ದಾದಾ ಎಂದೇ ಪ್ರಸಿದ್ಧರಾಗಿದ್ದರು. 85 ವರ್ಷದ ನಾಯಕ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಮಾಹಿತಿ ಪ್ರಕಾರ ಅವರ ಅಂತಿಮ ಸಂಸ್ಕಾರ ವಾರಣಾಸಿಯಲ್ಲಿ ನಡೆಯಲಿದೆ. ಬಿಜೆಪಿಯ ಸ್ಥಾಪಕ ನಾಯಕರಲ್ಲಿ ಒಬ್ಬರಾದ ಶ್ಯಾದೇವ್ ರೈ ಚೌಧರಿ ಅವರು ಪ್ರಾಮಾಣಿಕ ನಾಯಕನ ಇಮೇಜ್ ಹೊಂದಿದ್ದರು. 2017ರಲ್ಲಿ ಟಿಕೆಟ್ ನಿರಾಕರಿಸಿದ ನಂತರ ಅವರು ಸಕ್ರಿಯ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದರು.

ಜೀವನದುದ್ದಕ್ಕೂ ಸಾರ್ವಜನಿಕ ಸೇವೆಗೆ ಮುಡಿಪಾಗಿಟ್ಟಿದ್ದ ಬಿಜೆಪಿಯ ಹಿರಿಯ ನಾಯಕ ಶ್ಯಾಮದೇವ್ ರಾಯ್ ಚೌಧರಿ ಅವರ ನಿಧನದಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ನಾವೆಲ್ಲರೂ ಅವರನ್ನು ಪ್ರೀತಿಯಿಂದ ‘ದಾದಾ’ ಎಂದು ಕರೆಯುತ್ತಿದ್ದೆವು. ಅವರು ಪಕ್ಷದ ಪೋಷಣೆ ಮತ್ತು ವರ್ಧನೆಯಲ್ಲಿ ಗಮನಾರ್ಹ ಕೊಡುಗೆಗಳನ್ನು ನೀಡಿದ್ದು ಮಾತ್ರವಲ್ಲದೆ ಕಾಶಿಯ ಅಭಿವೃದ್ಧಿಗೆ ಪೂರ್ಣ ಹೃದಯದಿಂದ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅವರ ಅಗಲಿಕೆ ಕಾಶಿಗೆ ಹಾಗೂ ಇಡೀ ರಾಜಕೀಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ದುಃಖದ ಈ ಕ್ಷಣದಲ್ಲಿ ಅವರ ಕುಟುಂಬಕ್ಕೆ ಮತ್ತು ಬೆಂಬಲಿಗರಿಗೆ ದೇವರು ಶಕ್ತಿ ನೀಡಲಿ. ಓಂ ಶಾಂತಿ! ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT