ಮಲ್ಲಿಕಾರ್ಜುನ್ ಖರ್ಗೆ 
ದೇಶ

ನಮಗೆ ಇವಿಎಂ ಬೇಡ: ಮಹಾರಾಷ್ಟ್ರ ಹೀನಾಯ ಸೋಲಿನ ಬೆನ್ನಲ್ಲೇ ಬ್ಯಾಲೆಟ್ ಪೇಪರ್‌ಗೆ ಪಟ್ಟು ಹಿಡಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನಮಗೆ ಇವಿಎಂ ಮೂಲಕ ಚುನಾವಣೆ ಬೇಡ. ನಾವು ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆಯನ್ನು ಬಯಸುತ್ತೇವೆ. ನಾವು 'ಭಾರತ್ ಜೋಡೋ ಯಾತ್ರೆ' ನಡೆಸಿದಂತೆಯೇ, ನಾವು ಬ್ಯಾಲೆಟ್ ಪೇಪರ್‌ಗಳನ್ನು ಬಳಸಿಕೊಂಡು ಚುನಾವಣೆಗಾಗಿ ರಾಷ್ಟ್ರವ್ಯಾಪಿ ಪ್ರಚಾರವನ್ನು ನಡೆಸುತ್ತೇವೆ ಎಂದು ಹೇಳಿದ್ದಾರೆ.

ನವದೆಹಲಿ: ನಮಗೆ ವಿದ್ಯುನ್ಮಾನ ಮತಯಂತ್ರಗಳ (EVM) ಮೇಲೆ ನಂಬಿಕೆ ಇಲ್ಲ. ಹೀಗಾಗಿ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್ ನಲ್ಲಿ ನಡೆಸುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಆಗ್ರಹಿಸಿದ್ದಾರೆ.

ರಾಷ್ಟ್ರ ರಾಜಧಾನಿಯ ಟಾಲ್ಕಟೋರಾ ಕ್ರೀಡಾಂಗಣದಲ್ಲಿ ಪಕ್ಷದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಖರ್ಗೆ, ನಮಗೆ ಇವಿಎಂ ಮೂಲಕ ಚುನಾವಣೆ ಬೇಡ. ನಾವು ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆಯನ್ನು ಬಯಸುತ್ತೇವೆ. ನಾವು 'ಭಾರತ್ ಜೋಡೋ ಯಾತ್ರೆ' ನಡೆಸಿದಂತೆಯೇ, ನಾವು ಬ್ಯಾಲೆಟ್ ಪೇಪರ್‌ಗಳನ್ನು ಬಳಸಿಕೊಂಡು ಚುನಾವಣೆಗಾಗಿ ರಾಷ್ಟ್ರವ್ಯಾಪಿ ಪ್ರಚಾರವನ್ನು ನಡೆಸುತ್ತೇವೆ ಎಂದು ಹೇಳಿದ್ದಾರೆ.

ಮತಯಂತ್ರಗಳನ್ನು ಟ್ಯಾಂಪರಿಂಗ್ ಮಾಡಲಾಗುತ್ತಿದೆ ಎಂದು ಆರೋಪಿಸಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವ ಸಾಂಪ್ರದಾಯಿಕ ವಿಧಾನಕ್ಕೆ ಮರಳುವಂತೆ ಕಾಂಗ್ರೆಸ್ ಅಧ್ಯಕ್ಷರು ಒತ್ತಾಯಿಸಿದ ಕೆಲವೇ ಗಂಟೆಗಳ ನಂತರ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಕಟುವಾಗಿ ಟೀಕಿಸಿದ್ದಾರೆ. ಇಂತಹ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ಅಧ್ಯಕ್ಷರು ಸುಪ್ರೀಂ ಕೋರ್ಟ್ ಆದೇಶಕ್ಕೆ ಅಗೌರವ ತೋರಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ಚುನಾವಣೆಯಲ್ಲಿ ಗೆದ್ದಾಗ (ಕರ್ನಾಟಕ, ಜಮ್ಮು-ಕಾಶ್ಮೀರ, ತೆಲಂಗಾಣ, ವಯನಾಡು, ಹಿಮಾಚಲ ಪ್ರದೇಶ, ಜಾರ್ಖಂಡ್‌ನಲ್ಲಿ) ಖರ್ಗೆ ಅವರಿಗೆ ಚುನಾವಣಾ ಆಯೋಗ ಮತ್ತು ಇವಿಎಂಗಳು ಸರಿಯಾಗಿ ಕಾರ್ಯನಿರ್ವಹಿಸುತ್ತವೆ. ಆದರೆ ಬಿಜೆಪಿ ಗೆದ್ದರೆ ಇವಿಎಂಗಳು ಸರಿ ಇರಲ್ಲ. ತಮ್ಮ ಸೋಲನ್ನು ಕಾಂಗ್ರೆಸ್ಸಿಗರು ಪಕ್ಷ ಸಂವಿಧಾನ ಮತ್ತು ಇವಿಎಂಗಳ ಮೇಲೆ ದೂಷಿಸಲು ಪ್ರಯತ್ನಿಸುತ್ತಾರೆ ಎಂದು ಟೀಕಿಸಿದರು.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅತ್ಯಧಿಕ 132 ಸ್ಥಾನಗಳನ್ನು ಗೆದ್ದು ಕೊಂಡರೆ ಶಿಂಧೆ ನೇತೃತ್ವದ ಶಿವಸೇನೆ 57 ಸ್ಥಾನಗಳನ್ನು ಮತ್ತು ಎನ್‌ಸಿಪಿ 41 ಸ್ಥಾನಗಳನ್ನು ಗೆದ್ದು ಮಹಾಯುತಿಯನ್ನು 230 ಸ್ಥಾನಗಳಿಗೆ ಕೊಂಡೊಯ್ಯಿತು. ಎಂವಿಎ ಭಾಗವಾಗಿ ಕಾಂಗ್ರೆಸ್ ಕೇವಲ 16 ಸ್ಥಾನಗಳನ್ನು ಗೆದ್ದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT