ಬಿಜೆಪಿ ಹಂಚಿಕೊಂಡಿರುವ ಸಂವಿಧಾನ ದಿನ ಕಾರ್ಯಕ್ರಮದ ವಿಡಿಯೋ ತುಣುಕು online desk
ದೇಶ

ಸಂವಿಧಾನ ದಿನ ಕಾರ್ಯಕ್ರಮ: ರಾಷ್ಟ್ರಪತಿಗಳಿಗೆ ನಾಯಕರಿಂದ ಗೌರವ, ರಾಹುಲ್ ಗಾಂಧಿಯಿಂದ ಅವಮಾನ!: ಬಿಜೆಪಿ ಟ್ವೀಟ್ ವಿಡಿಯೋ ವೈರಲ್

ಕಾರ್ಯಕ್ರಮದಲ್ಲಿ ರಾಹುಲ್ ರಾಷ್ಟ್ರಪತಿಗಳಿಗೆ ಶುಭಕೋರದ ವಿಡಿಯೋವನ್ನು ಹಂಚಿಕೊಂಡಿರುವ ಬಿಜೆಪಿ, ರಾಹುಲ್ ಗಾಂಧಿ ರಾಷ್ಟ್ರಪತಿಗಳಿಗೆ ಶುಭಕೋರದಷ್ಟು ಅಹಂಕಾರಿ ಎಂದು ಟೀಕಾ ಪ್ರಹಾರ ನಡೆಸಿದೆ.

ನವದೆಹಲಿ: ಸಂವಿಧಾನದ ದಿನಾಚರಣೆಯಂದು ಬಿಜೆಪಿ- ಕಾಂಗ್ರೆಸ್ ನಡುವೆ ಆರೋಪ-ಪ್ರತ್ಯಾರೋಪಗಳು ನಡೆದಿವೆ. ಸಂಸತ್ ನಲ್ಲಿ ಸಂವಿಧಾನ ದಿನದ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಶುಭಾಶಯ ಕೋರಿಲ್ಲ ಎಂದು ಬಿಜೆಪಿ ಆರೋಪಿಸಿದೆ.

ಕಾರ್ಯಕ್ರಮದಲ್ಲಿ ರಾಹುಲ್ ರಾಷ್ಟ್ರಪತಿಗಳಿಗೆ ಶುಭಕೋರದ ವಿಡಿಯೋವನ್ನು ಹಂಚಿಕೊಂಡಿರುವ ಬಿಜೆಪಿ, ರಾಹುಲ್ ಗಾಂಧಿ ರಾಷ್ಟ್ರಪತಿಗಳಿಗೆ ಶುಭಕೋರದಷ್ಟು ಅಹಂಕಾರಿ ಎಂದು ಟೀಕಾ ಪ್ರಹಾರ ನಡೆಸಿದೆ.

ರಾಷ್ಟ್ರಪತಿಗಳು ಮಹಿಳೆಯಾಗಿದ್ದು ಬುಡಕಟ್ಟು ಸಮುದಾಯದವರಾಗಿದ್ದಾರೆ, ರಾಹುಲ್ ಗಾಂಧಿ ಕಾಂಗ್ರೆಸ್ ನ ಯುವರಾಜ ಎಂಬ ಧೋರಣೆಯೇ? ಇದೆಂತಹ ಅಗ್ಗದ ಮನಸ್ಥಿತಿ ಎಂದು ಬಿಜೆಪಿ ಪ್ರಶ್ನಿಸಿದೆ.

ಬಿಜೆಪಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊವೊಂದರಲ್ಲಿ, ರಾಷ್ಟ್ರಪತಿಗಳು ಕುಳಿತುಕೊಳ್ಳುವ ಮೊದಲೇ ಗಾಂಧಿಯವರು ವೇದಿಕೆಯ ಮೇಲೆ ತಮ್ಮ ಆಸನದಲ್ಲಿ ಕುಳಿತುಕೊಂಡಿದ್ದಾರೆ.

ಗಾಂಧಿಯವರ ಪಕ್ಕದಲ್ಲಿ ನಿಂತಿದ್ದ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಎದ್ದೇಳುವಂತೆ ಮನವಿ ಮಾಡುತ್ತಿರುವುದು ಕಂಡುಬಂದಿದೆ. ಬಿಜೆಪಿ ಪೋಸ್ಟ್ ಮಾಡಿದ ಮತ್ತೊಂದು ವೀಡಿಯೊ ಕ್ಲಿಪ್‌ನಲ್ಲಿ, ಉಪರಾಷ್ಟ್ರಪತಿ ಜಗದೀಪ್ ಧನ್ಖರ್, ಪ್ರಧಾನಿ ನರೇಂದ್ರ ಮೋದಿ ಮತ್ತು ಖರ್ಗೆ ರಾಷ್ಟ್ರಪತಿಗಳಿಗೆ ಎದ್ದು ನಿಂತು ಶುಭಾಶಯ ಕೋರುತ್ತಿರುವುದು ಕಂಡುಬಂದಿದೆ ಆದರೆ ಗಾಂಧಿ ರಾಷ್ಟ್ರಪತಿಗಳಿಗೆ ಶುಭಾಶಯ ಕೋರುತ್ತಿರುವುದು ಕಾಣುತ್ತಿಲ್ಲ.

'ಕಾಂಗ್ರೆಸ್ ಯಾವಾಗಲೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಅಗೌರವಿಸುತ್ತದೆ. ರಾಷ್ಟ್ರಪತಿಗಳು ನಿಂತಿದ್ದರೆ, ಯುವರಾಜ ಕುಳಿತಿದ್ದರು. ರಾಷ್ಟ್ರಪತಿಗಳಿಗೆ ಶುಭಾಶಯ ಕೋರಿಲ್ಲ' ಎಂದು ಬಿಜೆಪಿ ಪೋಸ್ಟ್ ಮಾಡಿರುವ ವಿಡಿಯೋ ತುಣುಕುಗಳಿಗೆ ಶೀರ್ಷಿಕೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT