ಎರಡು ಗುಂಪುಗಳ ನಡುವೆ ಘರ್ಷಣೆ 
ದೇಶ

ರಾಜಸ್ಥಾನ: ಉದಯಪುರ ಅರಮನೆ ಪ್ರವೇಶಕ್ಕಾಗಿ ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ! ಪರಿಸ್ಥಿತಿ ಉದ್ವಿಗ್ನ

ಮೇವಾರದ 77ನೇ ಮಹಾರಾಣಾ ಆಗಿ ಪಟ್ಟಾಭಿಷೇಕಗೊಂಡ ಬಿಜೆಪಿ ಶಾಸಕ ವಿಶ್ವರಾಜ್ ಸಿಂಗ್ ಮತ್ತು ಅವರ ಬೆಂಬಲಿಗರಿಗೆ ಉದಯಪುರ ನಗರ ಅರಮನೆಗೆ ಪ್ರವೇಶ ನಿರಾಕರಣೆ.

ಜೈಪುರ: ಉದಯಪುರದ ಅರಮನೆ ಪ್ರವೇಶ ವಿಚಾರದಲ್ಲಿ ರಾಜಮನೆತದ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಮೇವಾರದ 77ನೇ ಮಹಾರಾಣಾ ಆಗಿ ಪಟ್ಟಾಭಿಷೇಕಗೊಂಡ ಬಿಜೆಪಿ ಶಾಸಕ ವಿಶ್ವರಾಜ್ ಸಿಂಗ್ ಮತ್ತು ಅವರ ಬೆಂಬಲಿಗರಿಗೆ ಉದಯಪುರ ನಗರ ಅರಮನೆಗೆ ಪ್ರವೇಶ ನಿರಾಕರಿಸಲಾಗಿದೆ. ಇದರಿಂದಾಗಿ ರಾಜಮನೆತನದ ಎರಡು ಗುಂಪುಗಳ ನಡುವೆ ಕಲ್ಲುತೂರಾಟ ನಡೆದಿದ್ದು, ಹಿಂಸಾಚಾರ ನಡೆದಿದೆ.

ರಾಜಮನೆತನದ ವಿಧಿ ವಿಧಾನಗಳ ಪ್ರಕಾರ ಹೊಸದಾಗಿ ಪಟ್ಟ ಅಲಂಕರಿಸಿದ ಮುಖ್ಯಸ್ಥರು ಉದಯಪುರದ ಏಕಲಿಂಗನಾಥ ದೇವಾಲಯ ಮತ್ತು ನಗರದ ಅರಮನೆಗೆ ಭೇಟಿ ನೀಡುವುದು ವಾಡಿಕೆ. ಆದರೆ, ಮಹೇಂದ್ರ ಸಿಂಗ್ ಮೇವಾರ್ ಅವರ ಕಿರಿಯ ಸಹೋದರ ಅರವಿಂದ್ ಸಿಂಗ್ ಮೇವಾರ್ ನಡುವಿನ ದ್ವೇಷದ ಕಾರಣದಿಂದ ವಿಶ್ವರಾಜ್ ಅವರಿಗೆ ಉದಯಪುರ ಅರಮನೆಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ತಿಳಿದುಬಂದಿದೆ.

ಚಿತ್ತೋರ್ ಗಢ ಕೋಟೆಯಲ್ಲಿ ನಡೆದ ಸಮಾರಂಭದ ಬಳಿಕ ವಿಶ್ವರಾಜ್ ಸಿಂಗ್ ಹಾಗೂ ಅವರ ಬೆಂಬಲಿಗರು ಅರಮನೆಗೆ ಭೇಟಿ ನೀಡಲು ಉದಯಪುರಕ್ಕೆ ತೆರಳಿದ್ದರು. ಈ ವೇಳೆ ಅವರನ್ನು ಪೊಲೀಸರು ತಡೆದಿದ್ದು, ಮಾತಿನ ಚಕಮಕಿ ನಡೆದಿದೆ. ಬೆಂಬಲಿಗರು ಬ್ಯಾರಿಗೇಡ್ ಧ್ವಂಸಗೊಳಿಸಲು ಪ್ರಯತ್ನಿಸಿದ್ದು, ಸ್ಥಳದಲ್ಲಿ ಉದ್ನಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಘಟನೆ ಕುರಿತು ಪ್ರತಿಕ್ರಿಯಿಸಿದ ಉದಯಪುರ ಜಿಲ್ಲಾಧಿಕಾರಿ ಅರವಿಂದ್ ಕುಮಾರ್ ಪೋಸ್ವಾಲ್, ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ, ಅರಮನೆ ಪ್ರತಿನಿಧಿಗಳು ಮತ್ತು ಸಮಾಜದ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಯುತ್ತಿದೆ, ಕೆಲವು ವಿಷಯಗಳ ಬಗ್ಗೆ ಒಪ್ಪಿಕೊಂಡಿದ್ದೇವೆ, ಇನ್ನೂ ಕೆಲವು ವಿಷಯಗಳ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT