ಸೃಷ್ಟಿ 
ದೇಶ

ಮುಂಬೈ: ಬಾಯ್​ಫ್ರೆಂಡ್ ನಾನ್​ವೆಜ್ ತಿನ್ನಬೇಡ ಎಂದಿದ್ದಕ್ಕೆ ಏರ್ ಇಂಡಿಯಾ ಪೈಲಟ್ ಆತ್ಮಹತ್ಯೆ!

ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಸೃಷ್ಟಿ ಬಾಯ್​ಫ್ರೆಂಡ್, 27 ವರ್ಷದ ಆದಿತ್ಯ ಪಂಡಿತ್‌ನನ್ನು ಪೊವೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಮುಂಬೈ: 25 ವರ್ಷದ ಏರ್ ಇಂಡಿಯಾ ಪೈಲಟ್ ಸೃಷ್ಟಿ ತುಲಿ ಅವರು ಸೋಮವಾರ ಅಂಧೇರಿಯ ಮರೋಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಸೃಷ್ಟಿ ಬಾಯ್​ಫ್ರೆಂಡ್, 27 ವರ್ಷದ ಆದಿತ್ಯ ಪಂಡಿತ್‌ನನ್ನು ಪೊವೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಸೋಮವಾರ ಬೆಳಗ್ಗೆ ಅಂಧೇರಿ(ಪೂರ್ವ)ಯಲ್ಲಿರುವ ಮರೋಲ್ ಪೊಲೀಸ್ ಕ್ಯಾಂಪ್‌ನ ಹಿಂಭಾಗದ ಬಾಡಿಗೆ ನಿವಾಸದಲ್ಲಿ ತುಲಿ ಶವವಾಗಿ ಪತ್ತೆಯಾಗಿದ್ದಾಳೆ. ತನ್ನ ಬಾಯ್ ಫ್ರೆಂಡ್ ಜೊತೆಗಿನ ಜಗಳದ ನಂತರ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

ಆದಿತ್ಯ ಪಂಡಿತ್ ಸೃಷ್ಟಿಯನ್ನು ಕೊಲೆ ಮಾಡಿ ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಗೋರಖ್‌ಪುರ ಮೂಲದ ಸೃಷ್ಟಿ ತುಲಿ ಅವರ ಕುಟುಂಬ ಆರೋಪಿಸಿದೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ಆದಿತ್ಯ ಪಂಡಿತ್, ಮಾಂಸಾಹಾರಿ ಆಹಾರವನ್ನು ಸೇವಿಸದಂತೆ ಸೃಷ್ಟಿಯನ್ನು ಸಾರ್ವಜನಿಕವಾಗಿ ನಿಂದಿಸಿದ್ದಾರೆ ಎಂದು ಆಕೆಯ ಕುಟುಂಬ ಆರೋಪಿಸಿದೆ. ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸುವಂತೆ ಕುಟುಂಬಸ್ಥರು ಮುಂಬೈ ಪೊಲೀಸರನ್ನು ಒತ್ತಾಯಿಸಿದ್ದಾರೆ.

ಎರಡು ವರ್ಷಗಳ ಹಿಂದೆ ಕಮರ್ಷಿಯಲ್ ಪೈಲಟ್ ಲೈಸೆನ್ಸ್‌ಗಾಗಿ ತರಬೇತಿ ಪಡೆಯುತ್ತಿರುವಾಗ ಆದಿತ್ಯ ಮತ್ತು ಸೃಷ್ಟಿ ದೆಹಲಿಯಲ್ಲಿ ಭೇಟಿಯಾಗಿದ್ದರು. ತರಬೇತಿಯ ನಂತರ, ಸೃಷ್ಟಿ ಏರ್ ಇಂಡಿಯಾದಲ್ಲಿ ಕೆಲಸಕ್ಕೆ ಸೇರಿದರು. ಆದರೆ ಆಗಿತ್ಯ ಪಂಡಿತ್ ಪೈಲಟ್ ಪರೀಕ್ಷೆಯಲ್ಲಿ ಫೇಲ್ ಆಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT