ನಿರ್ಮಾಣ ಹಂತದ ಸೇತುವೆ 
ದೇಶ

ನಿರ್ಮಾಣ ಹಂತದ ಸೇತುವೆಯಿಂದ ಕಾರು ಉರುಳಿ ಮೂವರ ಸಾವು: Google Maps ತನಿಖೆ!

ಭಾನುವಾರ ಮುಂಜಾನೆ ಉತ್ತರ ಪ್ರದೇಶದ ಮದುವೆಗೆ ತೆರಳುತ್ತಿದ್ದ ಯುವಕರಿದ್ದ ಕಾರು ರಾಮಗಂಗಾ ನದಿಗೆ ಉರುಳಿಬಿದ್ದಿತ್ತು. ಗೂಗಲ್ ಮ್ಯಾಪ್ ನೋಡಿಕೊಂಡು ಚಾಲಕ ಕಾರು ಚಲಾಯಿಸುತ್ತಿದ್ದ ಎಂದು ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ಹಿಂದೂಸ್ತಾನ್ ಟೈಮ್ಸ್ ಪತ್ರಿಕೆ ಮಂಗಳವಾರ ಹೇಳಿದೆ.

ನವದೆಹಲಿ: ಗೂಗಲ್ ಮ್ಯಾಪ್‌ ನೋಡಿಕೊಂಡು ಪ್ರಯಾಣಿಸುವಾಗ ನಿರ್ಮಾಣ ಹಂತದ ಸೇತುವೆಯಿಂದ ಕಾರು ಕೆಳಗೆ ಬಿದ್ದು, ಮೂವರು ಯುವಕರು ಸಾವನ್ನಪ್ಪಿದ್ದ ಪ್ರಕರಣದ ತನಿಖೆಗೆ ಸಹಕಾರ ನೀಡುವುದಾಗಿ ಗೂಗಲ್ ಮಂಗಳವಾರ ಹೇಳಿದೆ.

ಭಾನುವಾರ ಮುಂಜಾನೆ ಉತ್ತರ ಪ್ರದೇಶದ ಮದುವೆಗೆ ತೆರಳುತ್ತಿದ್ದ ಯುವಕರಿದ್ದ ಕಾರು ರಾಮಗಂಗಾ ನದಿಗೆ ಉರುಳಿಬಿದ್ದಿತ್ತು. ಗೂಗಲ್ ಮ್ಯಾಪ್ ನೋಡಿಕೊಂಡು ಚಾಲಕ ಕಾರು ಚಲಾಯಿಸುತ್ತಿದ್ದ ಎನ್ನಲಾಗಿದೆ.

ನ್ಯಾವಿಗೇಷನ್ ಆ್ಯಪ್ ನ ಹೆಸರಿಸದ ಅಧಿಕಾರಿ ಮತ್ತು ಸರ್ಕಾರಿ ಲೋಕೋಪಯೋಗಿ ಇಲಾಖೆಯ ಇತರರನ್ನು ಪೊಲೀಸರು ಪ್ರಶ್ನಿಸಿದ್ದಾರೆ ಎಂದು ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಮೃತರ ಕುಟುಂಬದವರಿಗೆ Google ಸಂತಾಪ ಸೂಚಿಸಿದ್ದು, ಅಧಿಕಾರಿಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದ್ದೇವೆ ಮತ್ತು ಘಟನೆ ಕುರಿತ ತನಿಖೆಗೆ ನಮ್ಮ ಬೆಂಬಲ ನೀಡಲಾಗುವುದು ಎಂದು ಅದರ ವಕ್ತಾರರು ಇಮೇಲ್ ಹೇಳಿಕೆಯಲ್ಲಿ AFP ಗೆ ತಿಳಿಸಿದ್ದಾರೆ.

ಕಳೆದ ವರ್ಷ ಪ್ರವಾಹದಲ್ಲಿ ಸೇತುವೆಯ ಒಂದು ಭಾಗ ಹಾನಿಗೊಳಗಾಗಿತ್ತು ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇತ್ತೀಚಿಗೆ ಕೇರಳದಲ್ಲಿ ಕೇರಳದಲ್ಲಿ ಗೂಗಲ್ ಮ್ಯಾಪ್ ನೋಡಿಕೊಂಡು ಕಾರು ಚಲಾಯಿಸಿಕೊಂಡು ಹೋಗಿ ಪೆರಿಯಾರ್ ನದಿಯಲ್ಲಿ ಬಿದ್ದು ಇಬ್ಬರು ವೈದ್ಯರು ಮೃತಪಟ್ಟಿದ್ದರು. ಇದೀಗ ಬಿಹಾರದಲ್ಲಿಯೂ ಗೂಗಲ್ ಮ್ಯಾಪ್ ಎಡವಟ್ಟಿನಿಂದ ಅಂತಹುದೇ ಮತ್ತೊಂದು ದುರ್ಘಟನೆ ಸಂಭವಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT