ಅಶ್ವಿನಿ ವೈಷ್ಣವ್ 
ದೇಶ

ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯ ಪೋಸ್ಟ್ ಗೆ ಕಡಿವಾಣ ಹಾಕಲು ಕಠಿಣ ಕಾನೂನು ಅಗತ್ಯ: ಅಶ್ವಿನಿ ವೈಷ್ಣವ್

ಸಂಸದೀಯ ಸ್ಥಾಯಿ ಸಮಿತಿಯು ಈ ಸಮಸ್ಯೆಯನ್ನು ಕೈಗೆತ್ತಿಕೊಳ್ಳಬೇಕು ಮತ್ತು ಈ ನಿಟ್ಟಿನಲ್ಲಿ ಹೆಚ್ಚು ಕಠಿಣ ಕಾನೂನುಗಳನ್ನು ರೂಪಿಸಲು ಸಹಾಯ ಮಾಡಬೇಕು ಎಂದು ಹೇಳಿದರು.

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯ ಪೋಸ್ಟ್ ಗಳನ್ನು ತಡೆಯಲು ಅಸ್ತಿತ್ವದಲ್ಲಿರುವ ಕಾನೂನುಗಳನ್ನು ಇನ್ನಷ್ಟು ಕಠಿಣಗೊಳಿಸುವ ಅಗತ್ಯವಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಬುಧವಾರ ಹೇಳಿದ್ದಾರೆ.

ಇಂದು ಲೋಕಸಭೆಯಲ್ಲಿ ಮಾತನಾಡಿದ ಮಾಹಿತಿ ಮತ್ತು ಪ್ರಸಾರ ಸಚಿವರು, ಸಂಸದೀಯ ಸ್ಥಾಯಿ ಸಮಿತಿಯು ಈ ಸಮಸ್ಯೆಯನ್ನು ಕೈಗೆತ್ತಿಕೊಳ್ಳಬೇಕು ಮತ್ತು ಈ ನಿಟ್ಟಿನಲ್ಲಿ ಹೆಚ್ಚು ಕಠಿಣ ಕಾನೂನುಗಳನ್ನು ರೂಪಿಸಲು ಸಹಾಯ ಮಾಡಬೇಕು ಎಂದು ಹೇಳಿದರು.

ಹಿಂದೆ, ಸಂಪಾದಕೀಯ ಪರಿಶೀಲನೆಗಳು ಇದ್ದವು ಮತ್ತು ಅಲ್ಲಿ ಏನಾದರೂ ಸರಿ ಅಥವಾ ತಪ್ಪಾಗಿದೆಯೇ ಎಂಬುದನ್ನು ಚರ್ಚಿಸಲಾಗುತ್ತಿತ್ತು. ಆದರೆ ಆ ಪರಿಶೀಲನೆಗಳು ಈಗ ಇಲ್ಲ.

ಇಂದು, ಸಾಮಾಜಿಕ ಮಾಧ್ಯಮವು ಪತ್ರಿಕಾ ಸ್ವಾತಂತ್ರ್ಯಕ್ಕೆ ವೇದಿಕೆಯಾಗಿದೆ. ಆದರೆ ಅದು ಅನಿಯಂತ್ರಿತವಾಗಿದೆ ಮತ್ತು ಈ ಕಾರಣದಿಂದ ಸಾಮಾಜಿಕ ಮಾಧ್ಯಮ ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದೆ. ಈ ವೇದಿಕೆಯ ಮೂಲಕ ಅಸಭ್ಯ ವಿಚಾರಗಳನ್ನು ಹರಡುತ್ತಿದ್ದಾರೆ ಎಂದು ಸಚಿವರು ಪ್ರಶ್ನೋತ್ತರ ವೇಳೆಯಲ್ಲಿ ಹೇಳಿದರು.

ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಅಸಭ್ಯ ಪೋಸ್ಟ್ ಗಳನ್ನು ತಡೆಯಲು ಅಸ್ತಿತ್ವದಲ್ಲಿರುವ ಕಾನೂನುಗಳನ್ನು ಮತ್ತಷ್ಟು ಕಠಿಣಗೊಳಿಸುವ ಅವಶ್ಯಕತೆಯಿದೆ ಎಂದು ವೈಷ್ಣವ್ ಅವರು ಲೋಕಸಭೆಯಲ್ಲಿ ಪ್ರತಿಪಕ್ಷಗಳ ಗದ್ದಲದ ನಡುವೆ ಹೇಳಿದರು.

ಅಕ್ರಮವಾಗಿ ಸಾಮಾಜಿಕ ಜಾಲತಾಣಗಳ ಮೂಲಕ ಅಸಭ್ಯ ಮತ್ತು ಲೈಂಗಿಕ ವಿಷಯಗಳ ಪ್ರಸಾರವನ್ನು ಪರಿಶೀಲಿಸಲು ಅಸ್ತಿತ್ವದಲ್ಲಿರುವ ಕಾನೂನುಗಳ ಕುರಿತು ಬಿಜೆಪಿ ಸದಸ್ಯ ಅರುಣ್ ಗೋವಿಲ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಅಶ್ವಿನಿ ವೈಷ್ಣವ್ ಅವರು, ಅಸ್ತಿತ್ವದಲ್ಲಿರುವ ಕಾನೂನುಗಳನ್ನು ಇನ್ನಷ್ಟು ಕಠಿಣಗೊಳಿಸಲು ಸರ್ಕಾರ ಪ್ರಸ್ತಾಪಿಸುತ್ತದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel