ರಾಹುಲ್ ಗಾಂಧಿ  
ದೇಶ

ಲಂಚ ಆರೋಪದಡಿ ಗೌತಮ್ ಅದಾನಿ ಬಂಧಿಸಬೇಕು, ಸರ್ಕಾರ ಅವರನ್ನು ರಕ್ಷಿಸುತ್ತಿದೆ: ರಾಹುಲ್ ಗಾಂಧಿ

ಸಂಸತ್ತಿನ ಹೊರಗೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಲೋಕಸಭೆ ವಿರೋಧ ಪಕ್ಷದ ನಾಯಕ ಗಾಂಧಿ, "ದೇಶದಲ್ಲಿ ಸಣ್ಣಪುಟ್ಟ ಆರೋಪಗಳ ಮೇಲೆ ನೂರಾರು ಜನರನ್ನು ಬಂಧಿಸುವಾಗ ಅದಾನಿ ಏಕೆ ಇನ್ನೂ ಜೈಲಿಗೆ ಹೋಗಿಲ್ಲ'' ಎಂದು ಪ್ರಶ್ನಿಸಿದ್ದಾರೆ.

ನವದೆಹಲಿ: ಅಮೆರಿಕದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ ಆರೋಪ ಎದುರಿಸುತ್ತಿರುವ ಉದ್ಯಮಿ ಗೌತಮ್ ಅದಾನಿಯನ್ನು ಬಂಧಿಸಬೇಕು, ಅವರು ತಮ್ಮ ಮೇಲಿನ ತಪ್ಪು ಒಪ್ಪಿಕೊಳ್ಳಲ್ಲ, ಸರ್ಕಾರ ಅವರನ್ನು ರಕ್ಷಿಸುತ್ತಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಸಂಸತ್ತಿನ ಹೊರಗೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಲೋಕಸಭೆ ವಿರೋಧ ಪಕ್ಷದ ನಾಯಕ ಗಾಂಧಿ, "ದೇಶದಲ್ಲಿ ಸಣ್ಣಪುಟ್ಟ ಆರೋಪಗಳ ಮೇಲೆ ನೂರಾರು ಜನರನ್ನು ಬಂಧಿಸುವಾಗ ಅದಾನಿ ಏಕೆ ಇನ್ನೂ ಜೈಲಿಗೆ ಹೋಗಿಲ್ಲ'' ಎಂದು ಪ್ರಶ್ನಿಸಿದ್ದಾರೆ.

ಕೋಟ್ಯಾಧಿಪತಿ ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ವಿರುದ್ಧ ಲಂಚ ಪ್ರಕರಣದಲ್ಲಿ ಯುಎಸ್ ಅಧಿಕಾರಿಗಳು ದೋಷಾರೋಪ ಸಲ್ಲಿಸಿದ್ದಾರೆ. ನ್ಯಾಯಾಲಯದಲ್ಲಿ ಸಲ್ಲಿಸಿದ ದೋಷಾರೋಪಣೆಯಲ್ಲಿ ಯುಎಸ್ ವಿದೇಶಿ ಭ್ರಷ್ಟ ಆಚರಣೆಗಳ ಕಾಯ್ದೆ (FCPA) ಯ ಯಾವುದೇ ಉಲ್ಲಂಘನೆಯ ಆರೋಪ ಹೊರಿಸಿಲ್ಲ ಎಂದು ಅದಾನಿ ಗ್ರೂಪ್ ಹೇಳಿಕೆ ನೀಡಿದೆ. ವಿತ್ತೀಯ ಪೆನಾಲ್ಟಿಗಳನ್ನು ವಿಧಿಸುವುದನ್ನು ಒಳಗೊಂಡಿರುವ ಸೆಕ್ಯುರಿಟೀಸ್ ವಂಚನೆಗೆ ಸಂಬಂಧಿಸಿದಂತೆ ಆರೋಪ ಹೊರಿಸಲಾಗಿದೆ.

"ಅದಾನಿಯವರು ಆರೋಪಗಳನ್ನು ಒಪ್ಪಿಕೊಳ್ಳುತ್ತಾರೆಯೇ. ನೀವು ಯಾವ ಜಗತ್ತಿನಲ್ಲಿ ವಾಸಿಸುತ್ತಿದ್ದೀರಿ, ನಿಸ್ಸಂಶಯವಾಗಿ, ಅವರು ಆರೋಪಗಳನ್ನು ನಿರಾಕರಿಸಲಿದ್ದಾರೆ ಎಂದು ರಾಹುಲ್ ಗಾಂಧಿ ಸುದ್ದಿಗಾರರನ್ನು ಪ್ರಶ್ನಿಸಿದರು.

ಅವರನ್ನು ಬಂಧಿಸಬೇಕು, ನೂರಾರು ಜನರನ್ನು ಸಣ್ಣ ಆರೋಪಗಳ ಮೇಲೆ ಬಂಧಿಸಲಾಗುತ್ತಿದೆ. ಇದೀಗ ಅಮೆರಿಕಾದಲ್ಲಿ ಸಾವಿರಾರು ಕೋಟಿಗಳ ದೋಷಾರೋಪಣೆ ಮಾಡಲಾಗಿದೆ, ಅದಾನಿ ಜೈಲಿನಲ್ಲಿರಬೇಕು. ಸರ್ಕಾರ ಅವರನ್ನು ರಕ್ಷಿಸುತ್ತಿದೆ ಎಂದು ಆರೋಪಿಸಿದರು.

ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಮತ್ತು ಇನ್ನೊಬ್ಬ ಪ್ರಮುಖ ಕಾರ್ಯನಿರ್ವಾಹಕ ವನೀತ್ ಜೈನ್, ಸೌರ ವಿದ್ಯುತ್ ಪೂರೈಕೆಯ ಗುತ್ತಿಗೆಗಳನ್ನು ಪಡೆಯಲು ಭಾರತೀಯ ಅಧಿಕಾರಿಗಳಿಗೆ 265 ಮಿಲಿಯನ್ ಡಾಲರ್ ಲಂಚ ನೀಡುವ ಯೋಜನೆಯ ಭಾಗವಾಗಿದೆ ಎಂದು ಅಮೆರಿಕ ನ್ಯಾಯಾಂಗ ಇಲಾಖೆ ಆರೋಪಿಸಿದೆ.

ಗೌತಮ್ ಅದಾನಿ ಅಥವಾ ಅವರ ಸಹಚರರ ವಿರುದ್ಧ ಯಾವುದೇ ನಿರ್ದಿಷ್ಟ ಆರೋಪಗಳಿಲ್ಲ ಮತ್ತು ಲಂಚದ ಆರೋಪಗಳು ತುಂಬಾ ಸಾಮಾನ್ಯವಾಗಿದೆ ಮತ್ತು ಯಾರಿಗೆ ಲಂಚ ನೀಡಿದರು ಎಂಬುದರ ಕುರಿತು ನಿರ್ದಿಷ್ಟವಾಗಿ ನಿರ್ದಿಷ್ಟಪಡಿಸಲಾಗಿಲ್ಲ ಎಂದು ಅದಾನಿ ಪರ ವಕೀಲ ಮುಕುಲ್ ರೋಹ್ಟಗಿ ಅವರು ವಾದಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT