ಹುಲಿ ದಾಳಿಯಿಂದ ಪಾರಾದ ಸಿಬ್ಬಂದಿ 
ದೇಶ

Viral Video: ಕ್ಷಣಮಾತ್ರದಲ್ಲಿ ಮರವೇರಿ ಹುಲಿ ದಾಳಿಯಿಂದ ಪಾರಾದ ಅರಣ್ಯ ಸಿಬ್ಬಂದಿ

ಸತ್ಪುರ ಮೀಸಲು ಅರಣ್ಯ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಈ ಘಟನೆ ನಡೆದಿದ್ದು, ಕರ್ತವ್ಯ ನಿರ್ವಹಣೆ ವೇಳೆ ಹುಲಿ ಆಗಮನ ಗ್ರಹಿಸಿದ ಇಬ್ಬರು ಸಿಬ್ಬಂದಿಗಳು ಕೂಡಲೇ ಪಕ್ಕದಲ್ಲೇ ಇದ್ದ ಮರವನ್ನು ಏರಿದ್ದಾರೆ.

ಭೋಪಾಲ್: ಅರಣ್ಯ ಸಿಬ್ಬಂದಿಯೊಬ್ಬರು ಹುಲಿ ದಾಳಿಯಿಂದ ಕ್ಷಣ ಮಾತ್ರದಲ್ಲಿ ಪಾರಾಗಿರುವ ಘಟನೆ ಮಧ್ಯಪ್ರದೇಶ ಸತ್ಪುರ ಮೀಸಲು ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಸತ್ಪುರ ಮೀಸಲು ಅರಣ್ಯ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಈ ಘಟನೆ ನಡೆದಿದ್ದು, ಕರ್ತವ್ಯ ನಿರ್ವಹಣೆ ವೇಳೆ ಹುಲಿ ಆಗಮನ ಗ್ರಹಿಸಿದ ಇಬ್ಬರು ಸಿಬ್ಬಂದಿಗಳು ಕೂಡಲೇ ಪಕ್ಕದಲ್ಲೇ ಇದ್ದ ಮರವನ್ನು ಏರಿದ್ದಾರೆ. ಈ ವೇಳೆ ಓರ್ವ ಸಿಬ್ಬಂದಿ ತಮ್ಮ ಮೊಬೈಲ್ ನಿಂದ ವಿಡಿಯೋ ರೆಕಾರ್ಡ್ ಮಾಡಿದ್ದು, ಮರವೇರಿದ ಬಳಿಕ ಭಾರಿ ಗಾತ್ರದ ಹುಲಿಯೊಂದು ಅದೇ ಪ್ರದೇಶದಲ್ಲಿ ತನ್ನ ಬೇಟೆ ಅರಸುತ್ತಾ ಬರುತ್ತದೆ.

ಈ ವೇಳೆ ಮರದ ಮೇಲಿದ್ದ ಸಿಬ್ಬಂದಿ ಹುಲಿಯ ವಿಡಿಯೋ ರೆಕಾರ್ಡ್ ಮಾಡಿದ್ದು, ಕೆಲ ನಿಮಿಷಗಳ ಕಾಲ ಅಲ್ಲಿಯೇ ವಾಸನೆ ಗ್ರಹಿಸುತ್ತಿದ್ದ ಹುಲಿ ಬಳಿಕ ಅಲ್ಲಿಂದ ಹೊರಟು ಹೋಗುತ್ತದೆ. ಎದೆ ಝಲ್ ಎನ್ನಿಸುವ ಈ ವಿಡಿಯೋವನ್ನು ಅರಣ್ಯ ಅಧಿಕಾರಿ ಪ್ರವೀಣ್ ಕಸ್ವಾನ್ ತಮ್ಮ ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿದ್ದು, ಈ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

ಅಲ್ಲದೆ ಅರಣ್ಯ ಸಿಬ್ಬಂದಿಗಳ ಅಪಾಯದ ಗ್ರಹಿಕೆ ಮತ್ತು ಮುಂದಾಗಬಹುದಾದ ಅಪಾಯದಿಂದ ಪಾರಾದ ಬಗೆಯನ್ನು ಶ್ಲಾಘಿಸಿದ್ದಾರೆ. ಈ ವಿಡಿಯೋವನ್ನು ಅನ್ನು ಲಾಲ್ ಎಂಬ ಸಿಬ್ಬಂದಿ ರೆಕಾರ್ಡ್ ಮಾಡಿದ್ದು, ಇಬ್ಬರೂ ಇದೀಗ ಸುರಕ್ಷಿತವಾಗಿ ಮನೆಗೆ ತಲುಪಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT