ದೇವೇಂದ್ರ ಫಡ್ನವೀಸ್  
ದೇಶ

ದೇವೇಂದ್ರ ಫಡ್ನವೀಸ್ ಗೆ ಮಹಾರಾಷ್ಟ್ರ ಸಿಎಂ ಹುದ್ದೆ ಬಹುತೇಕ ಖಚಿತ; ಆದರೂ ಬೇರೆ ಹೆಸರುಗಳು ಮುಂಚೂಣಿಗೆ!

ಮುಂಬೈ: ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯ ಬಗ್ಗೆ ಬಿಜೆಪಿ ನಾಯಕತ್ವದ ಯಾವುದೇ ನಿರ್ಧಾರವನ್ನು ಒಪ್ಪಿಕೊಳ್ಳುವುದಾಗಿ ಏಕನಾಥ್ ಶಿಂಧೆ ಅವರು ಸ್ಪಷ್ಟವಾಗಿ ಹೇಳಿರುವ ಮೂಲಕ, ದೇವೇಂದ್ರ ಫಡ್ನವೀಸ್ ಅವರಿಗೆ ಮುಖ್ಯಮಂತ್ರಿ ಪಟ್ಟ ನೀಡಲು ಇದ್ದ ಗೊಂದಲ ನಿವಾರಣೆಯಾಗಿದೆ. ಆದರೂ ಬಿಜೆಪಿ ಇತರ ಆಯ್ಕೆಗಳನ್ನು ಪರಿಶೀಲಿಸುತ್ತಿದೆ.

ವಿಧಾನಸಭೆ ಚುನಾವಣೆಯಲ್ಲಿ 288ರಲ್ಲಿ 132 ಸ್ಥಾನಗಳನ್ನು ಪಡೆದು ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಮಹಾಯುತಿ ಮೈತ್ರಿಕೂಟ 230 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರೂ ಏಕನಾಥ್ ಶಿಂಧೆ ಅವರನ್ನು ಮತ್ತೆ ಸಿಎಂ ಮಾಡಲು ಸಾಧ್ಯವಿಲ್ಲ ಎಂದು ಪಕ್ಷದ ಉನ್ನತ ನಾಯಕತ್ವ ತಿಳಿಸಿರುವುದಾಗಿ ಬಿಜೆಪಿ ಮೂಲಗಳು ತಿಳಿಸಿವೆ.

ದೇವೇಂದ್ರ ಫಡ್ನವೀಸ್ ಅವರಿಗೆ ಸಿಎಂ ಸ್ಥಾನ ಸಿಗಬಹುದು. ಆದರೆ ಉತ್ತರ ಮಹಾರಾಷ್ಟ್ರದಿಂದ ನಾಯಕತ್ವದ ಆಯ್ಕೆಗಳನ್ನು ಅನ್ವೇಷಿಸುವ ಮೂಲಕ (ಮಹಾಯುತಿ 47 ವಿಧಾನಸಭಾ ಸ್ಥಾನಗಳಲ್ಲಿ 44 ಸ್ಥಾನಗಳನ್ನು ಗೆದ್ದಿದ್ದಾರೆ) ವಿದರ್ಭ ಮತ್ತು ಪಶ್ಚಿಮ ಮಹಾರಾಷ್ಟ್ರದ ಸಾಂಪ್ರದಾಯಿಕ ರಾಜಕೀಯ ಮ್ಯಾಟ್ರಿಕ್ಸ್ ನ್ನು ಮುರಿಯಲು ಉನ್ನತ ನಾಯಕತ್ವ ಬಯಸಿದೆ ಎಂದು ಒಬ್ಬರು ಹೇಳುತ್ತಾರೆ.

ಮುಖ್ಯಮಂತ್ರಿ ಹುದ್ದೆಗೆ ದೇವೇಂದ್ರ ಫಡ್ನವೀಸ್‌ ಮುಂಚೂಣಿಯಲ್ಲಿರುವುದು ನಿಜವಾದರೂ ಉತ್ತರ ಮಹಾರಾಷ್ಟ್ರದ ನಾಯಕರೂ ರೇಸ್ ನಲ್ಲಿದ್ದಾರೆ. ಈ ನಾಯಕರಲ್ಲಿ ಮಾಜಿ ಸಚಿವ ಗಿರೀಶ್ ಮಹಾಜನ್ ಅವರು ದೇವೇಂದ್ರ ಫಡ್ನವಿಸ್ ಅವರಿಗೆ ನಿಕಟರಾಗಿದ್ದಾರೆ. ಕೇಂದ್ರ ಸಚಿವ ಅಮಿತ್ ಶಾ ಅವರ ನಿಕಟವರ್ತಿಯಾಗಿರುವ ಮಾಜಿ ಕಂದಾಯ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಅವರು ಗ್ರಾಮೀಣ ಪ್ರದೇಶದ ಪ್ರಬಲ ನಾಯಕರಾಗಿದ್ದಾರೆ. ಕೆಲವು ಮಹಿಳಾ ಬಿಜೆಪಿ ನಾಯಕರೂ ಉನ್ನತ ಹುದ್ದೆಯ ರೇಸ್‌ ನಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

ಎನ್‌ಸಿಪಿ ಮತ್ತು ಶಿವಸೇನೆ ಶಾಸಕರು ಕ್ರಮವಾಗಿ ಅಜಿತ್ ಪವಾರ್ ಮತ್ತು ಏಕನಾಥ್ ಶಿಂಧೆ ಅವರನ್ನು ತಮ್ಮ ನಾಯಕರನ್ನಾಗಿ ಆಯ್ಕೆ ಮಾಡಿದ್ದಾರೆ ಆದರೆ ಬಿಜೆಪಿ ಇನ್ನೂ ತನ್ನ ಚುನಾಯಿತ ಶಾಸಕರ ಸಭೆಯನ್ನು ಕರೆದು ಮುಖ್ಯಸ್ಥರ ಹಕ್ಕು ಪಡೆಯುವ ಸಾಧ್ಯತೆಯಿರುವ ತಮ್ಮ ನಾಯಕನನ್ನು ಆಯ್ಕೆ ಮಾಡಬೇಕಾಗಿದೆ ಎಂದು ಇನ್ನೊಬ್ಬ ಹಿರಿಯ ಬಿಜೆಪಿ ನಾಯಕರು ಹೇಳುತ್ತಾರೆ.

ನಿರ್ಗಮಿತ ಸಿಎಂ ಶಿಂಧೆ ಸರ್ಕಾರ ರಚನೆಗೆ ಅಡ್ಡಿಯಾಗುವುದಿಲ್ಲ ಎಂದು ಈ ಹಿಂದೆಯೇ ಸ್ಪಷ್ಟಪಡಿಸಿದ್ದರು. ನಾನು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿದ್ದೇನೆ, ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರ ನನಗೆ ಮತ್ತು ನನ್ನ ಪಕ್ಷಕ್ಕೆ ಸ್ವೀಕಾರಾರ್ಹ ಎಂದು ತಿಳಿಸಿದ್ದೇನೆ. ನನ್ನ ಕಡೆಯಿಂದ ಯಾವುದೇ ಅಡೆತಡೆ ಇರುವುದಿಲ್ಲ. ಯಾವುದೇ ನಿರ್ಧಾರವನ್ನು ಸಂತೋಷದಿಂದ ಸ್ವೀಕರಿಸುತ್ತೇನೆ. ನನ್ನನ್ನು ಮತ್ತೆ ಮುಖ್ಯಮಂತ್ರಿಯನ್ನಾಗಿ ಮಾಡದಿದ್ದರೂ, ನಾನು ಅಸಮಾಧಾನಗೊಳ್ಳುವುದಿಲ್ಲ, ಮಹಾರಾಷ್ಟ್ರದ ಕಲ್ಯಾಣ ಮತ್ತು ಅಭಿವೃದ್ಧಿಗಾಗಿ ಕೆಲಸ ಮಾಡುವುದು ನನ್ನ ಗುರಿ ಎಂದಿದ್ದಾರೆ.

ಈ ಮಧ್ಯೆ, ಬಿಜೆಪಿ ಮತ್ತು ಅದರ ಮೈತ್ರಿ ಪಾಲುದಾರರ ನಾಯಕರು ಸರ್ಕಾರ ರಚನೆಯನ್ನು ಅಂತಿಮಗೊಳಿಸಲು ಪಕ್ಷದ ಉನ್ನತ ನಾಯಕತ್ವವನ್ನು ಭೇಟಿ ಮಾಡಲು ದೆಹಲಿಗೆ ತೆರಳುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT