ಸಂವಿಧಾನದ ಪುಸ್ತಕ ಹಿಡಿದು ಪ್ರಮಾಣವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ.  
ದೇಶ

ವಯನಾಡು ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ ಸ್ವೀಕಾರ

ಪ್ರಿಯಾಂಕಾ ಗಾಂಧಿ 2019 ರಲ್ಲಿ ಸಕ್ರಿಯ ರಾಜಕೀಯಕ್ಕೆ ಧುಮುಕಿದರು ಮತ್ತು ನಂತರ ಕಾಂಗ್ರೆಸ್‌‍ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡರು.

ನವದೆಹಲಿ: ಕೇರಳದ ವಯನಾಡ್‌ನಿಂದ ನಡೆದ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಕಾಂಗ್ರೆಸ್‌‍ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗುರುವಾರ ಲೋಕಸಭೆಯ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಕೈಯಲ್ಲಿ ಸಂವಿಧಾನದ ಪುಸ್ತಕ ಹಿಡಿದು ಪ್ರಿಯಾಂಕಾ ಅವರು ಪ್ರಮಾಣವಚನ ಸ್ವೀಕಾರ ಮಾಡಿದ್ದು, ಪ್ರಿಯಾಂಕಾ ಅವರಿಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಪ್ರಮಾಣ ವಚನ ಬೋಧಿಸಿದರು.

ಇದೇ ವೇಳೆ ನಾಂದೇಡ್‌ ಉಪಚುನಾವಣೆಯಲ್ಲಿ ಗೆದ್ದಿರುವ ರವೀಂದ್ರ ಚವಾಣ್‌ (ಕಾಂಗ್ರೆಸ್‌) ಕೂಡ ದೇವರ ಹೆಸರಿನಲ್ಲಿ ಮರಾಠಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇತ್ತೀಚೆಗೆ ಅವರ ತಂದೆ ವಸಂತರಾವ್‌ ಚವಾಣ್‌ ಅವರ ನಿಧನದ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆದಿತ್ತು.

ಪ್ರಿಯಾಂಕಾ ಗಾಂಧಿ 2019 ರಲ್ಲಿ ಸಕ್ರಿಯ ರಾಜಕೀಯಕ್ಕೆ ಧುಮುಕಿದರು ಮತ್ತು ನಂತರ ಕಾಂಗ್ರೆಸ್‌‍ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡರು. ಐದು ವರ್ಷಗಳ ನಂತರ, ಪ್ರಿಯಾಂಕಾ ಗಾಂಧಿ ಅವರು ಚುನಾಯಿತ ಜನಪ್ರತಿನಿಧಿಯಾಗಿ ತಮ ಪ್ರಯಾಣವನ್ನು ಪ್ರಾರಂಭಿಸಿದ್ದಾರೆ.

ಪ್ರಮಾಣವಚನ ಸ್ವೀಕಾರದ ವೇಳೆ ಪ್ರಿಯಾಂಕಾ ಅವರು ಕೇರಳದ ಬ್ರೋಕೆಡ್ ಸೀರೆಯನ್ನು ಧರಿಸಿದ್ದರು. ತನ್ನ ತಾಯಿ ಸೋನಿಯಾ ಗಾಂಧಿ, ಸಹೋದರ ರಾಹುಲ್ ಗಾಂಧಿ ಮತ್ತು ಪತಿ ರಾಬರ್ಟ್ ವಾದ್ರಾ ಅವರೊಂದಿಗೆ ಸಂಸತ್ ಭವನಕ್ಕೆ ಆಗಮಿಸಿದ್ದರು. ಅಲ್ಲದೆ, ಪ್ರಿಯಾಂಕಾ ಅವರ ಮಕ್ಕಳಿಬ್ಬರೂ ಸಂಸತ್​ಗೆ ಆಗಮಿಸಿದ್ದರು.

ಇತ್ತೀಚೆಗೆ ಪ್ರಕಟಗೊಂಡ ವಯನಾಡ್ ಲೋಕಸಭಾ ಉಪ ಚುನಾವಣೆಯಲ್ಲಿ 4 ಲಕ್ಷಕ್ಕೂ ಹೆಚ್ಚು ಮತಗಳ ದಾಖಲೆ ಅಂತರದಿಂದ ಗೆಲುವು ಸಾಧಿಸಿರುವ ಪ್ರಿಯಾಂಕಾ ಗಾಂಧಿ, ಆ ಮೂಲಕ ಪ್ರಪ್ರಥಮ ಬಾರಿಗೆ ಚುನಾಯಿತ ಪ್ರತಿನಿಧಿಯಾಗಿದ್ದಾರೆ.

ಇಲ್ಲಿಯವರೆಗೆ ಪಕ್ಷ ಸಂಘಟನೆಯಲ್ಲಿ ತಮ್ಮ ಸಹೋದರ ರಾಹುಲ್ ಗಾಂಧಿಗೆ ನೆರವು ನೀಡುತ್ತಾ ಬಂದಿದ್ದ ಪ್ರಿಯಾಂಕಾ ಗಾಂಧಿ, ಇದೀಗ ಲೋಕಸಭೆಯಲ್ಲೂ ತಮ್ಮ ಸಹೋದರನಿಗೆ ಸಾಥ್ ನೀಡಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

SCROLL FOR NEXT