ಪತ್ರಿಕಾಗೋಷ್ಠಿಯಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ, ಕಾಂಗ್ರೆಸ್ ಮುಖಂಡ ಅಶೋಕ್ ಚವಾಣ್ ಮತ್ತು ಶಿವಸೇನೆಯ ಆದಿತ್ಯ ಠಾಕ್ರೆ. 
ದೇಶ

ಮಹಾರಾಷ್ಟ್ರ ಚುನಾವಣೆ ಸೋಲಿಗೆ ಕಾಂಗ್ರೆಸ್‌ನ ಅತಿಯಾದ ಆತ್ಮವಿಶ್ವಾಸವೇ ಕಾರಣ ಎಂದ ಠಾಕ್ರೆ ಟೀಂ!

MVA ಉದ್ಧವ್ ಠಾಕ್ರೆ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸಬೇಕಿತ್ತು ಎಂದು ಮಹಾರಾಷ್ಟ್ರ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ(LoP) ಅಂಬಾದಾಸ್ ದಾನ್ವೆ ಅವರು ಹೇಳಿದ್ದಾರೆ.

ಮುಂಬೈ: ಸೀಟು ಹಂಚಿಕೆಯ ಮಾತುಕತೆ ಸಂದರ್ಭದಲ್ಲಿ ಕಾಂಗ್ರೆಸ್‌ನ "ಅತಿಯಾದ ಆತ್ಮವಿಶ್ವಾಸ" ಮತ್ತು "ಧೋರಣೆ" ಮಹಾ ವಿಕಾಸ್ ಅಘಾಡಿ(ಎಂವಿಎ) ನಿರೀಕ್ಷೆಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ ಎಂದು ಶಿವಸೇನೆ(ಯುಬಿಟಿ)ಯ ಹಿರಿಯ ನಾಯಕರೊಬ್ಬರು ಟೀಕಿಸಿದ್ದಾರೆ.

MVA ಉದ್ಧವ್ ಠಾಕ್ರೆ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸಬೇಕಿತ್ತು ಎಂದು ಮಹಾರಾಷ್ಟ್ರ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ(LoP) ಅಂಬಾದಾಸ್ ದಾನ್ವೆ ಅವರು ಹೇಳಿದ್ದಾರೆ.

"ಫಲಿತಾಂಶಕ್ಕೂ ಮುಂಚೆಯೇ ಕಾಂಗ್ರೆಸ್ ನಾಯಕರು ಸೂಟ್ ಮತ್ತು ಟೈನೊಂದಿಗೆ ಸಿದ್ಧರಾಗಿದ್ದರು. ಅವರ ಅತಿಯಾದ ಆತ್ಮವಿಶ್ವಾಸವೇ" ಇತ್ತೀಚೆಗೆ ಮುಕ್ತಾಯಗೊಂಡ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಸೋಲಿಗೆ ಕಾರಣ ಶಿವಸೇನಾ ನಾಯಕ ಟೀಕಿಸಿದ್ದಾರೆ.

ಲೋಕಸಭಾ ಚುನಾವಣಾ ಫಲಿತಾಂಶದ ನಂತರ, ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರದಂತೆ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಅತಿಯಾದ ಆತ್ಮವಿಶ್ವಾಸವನ್ನು ಹೊಂದಿತ್ತು. ಅವರ ಈ ವರ್ತನೆ ಚುನಾವಣಾ ಫಲಿತಾಂಶದಲ್ಲಿ ಪ್ರತಿಫಲಿಸುತ್ತಿದೆ ಎಂದು ದಾನ್ವೆ ಹೇಳಿದ್ದಾರೆ.

ಸೀಟು ಹಂಚಿಕೆಯ ಮಾತುಕತೆಯ ಸಂದರ್ಭದಲ್ಲಿ ಕಾಂಗ್ರೆಸ್‌ನ ಧೋರಣೆಯು ಎಂವಿಎ ಭವಿಷ್ಯಕ್ಕೆ ಹಾನಿ ಮಾಡಿದೆ ಎಂದು ದಾನ್ವೆ ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಹಿಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸಮರ್ಥವಾಗಿ ಕಾರ್ಯನಿರ್ವಹಿಸಿತ್ತು ಮತ್ತು 13 ಸ್ಥಾನಗಳನ್ನು ಗಳಿಸಿತು. ಇದು ಎಂವಿಎ ಮಿತ್ರಪಕ್ಷಗಳಲ್ಲಿ ಅತ್ಯಧಿಕವಾಗಿದೆ. ಈ ಯಶಸ್ಸು ರಾಜ್ಯ ಚುನಾವಣಾ ಮಾತುಕತೆಗಳ ಸಮಯದಲ್ಲಿ ಹೆಚ್ಚಿನ ಸ್ಥಾನಗಳನ್ನು ಪಡೆಯಲು ಕಾಂಗ್ರೆಸ್ ಅನ್ನು ಪ್ರೇರೇಪಿಸಿತು. ಇದು ಮೈತ್ರಿಕೂಟದಲ್ಲಿ ಉದ್ವಿಗ್ನತೆಗೆ ಕಾರಣವಾಯಿತು. ಕಾಂಗ್ರೆಸ್ 103 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೂ, 16 ಸ್ಥಾನಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ. ಏತನ್ಮಧ್ಯೆ, ಶಿವಸೇನೆ(ಯುಬಿಟಿ) 89 ಸ್ಥಾನಗಳಲ್ಲಿ ಸ್ಪರ್ಧಿಸಿ 20 ಸ್ಥಾನ ಪಡೆದರೆ, ಶರದ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್‌ಸಿಪಿ) 87 ಸ್ಥಾನಗಳಲ್ಲಿ ಸ್ಪರ್ಧಿಸಿ 10 ಸ್ಥಾನಗಳನ್ನು ಗೆದ್ದಿದೆ.

ಬಿಜೆಪಿ ನೇತೃತ್ವದ ಮಹಾಯುತಿ 288 ಅಸೆಂಬ್ಲಿ ಸ್ಥಾನಗಳಲ್ಲಿ 230 ಸ್ಥಾನಗಳನ್ನು ಪಡೆದುಕೊಂಡು ನಿರ್ಣಾಯಕ ಗೆಲುವು ಸಾಧಿಸಿದರೆ, ಕಾಂಗ್ರೆಸ್‌ನ ಎಂವಿಎ ಮೈತ್ರಿಕೂಟ, ಶರದ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಬಣ ಮತ್ತು ಶಿವಸೇನೆಯ ಉದ್ಧವ್ ಠಾಕ್ರೆ ಪಾಳಯ 46 ಸ್ಥಾನಗಳನ್ನು ಗೆದ್ದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT