ಏಕನಾಥ್ ಶಿಂಧೆ  
ದೇಶ

'ಇನ್ನೊಂದೆರಡು ದಿನಗಳೊಳಗೆ ಮಹಾರಾಷ್ಟ್ರ ಸಿಎಂ ನಿರ್ಧಾರ': ಅಮಿತ್ ಶಾ ಭೇಟಿ ಬಳಿಕ ಏಕನಾಥ್ ಶಿಂಧೆ ಪ್ರತಿಕ್ರಿಯೆ

ಅಮಿತ್ ಶಾ ಮತ್ತು ಜೆ ಪಿ ನಡ್ಡಾ ಅವರ ಜೊತೆಗೆ ನಡೆಸಿದ ಮಾತುಕತೆ ಫಲಪ್ರದವಾಗಿತ್ತು. ನಾವೆಲ್ಲರೂ ಸರ್ಕಾರ ರಚನೆಯ ಬಗ್ಗೆ ಚರ್ಚಿಸಿದ್ದೇವೆ.

ನವದೆಹಲಿ: ಮಹಾರಾಷ್ಟ್ರ ಸರ್ಕಾರ ರಚನೆ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಏಕನಾಥ್ ಶಿಂಧೆ ಅವರ ಜೊತೆ ಉತ್ತಮ ಮತ್ತು ಸಕಾರಾತ್ಮಕ ಚರ್ಚೆ ನಡೆದಿದೆ ಎಂದು ಏಕನಾಥ್ ಶಿಂಧೆ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಕುರಿತು ಮುಂಬೈಯಲ್ಲಿ ಮಹಾಯುತಿ ಒಕ್ಕೂಟದ ಮತ್ತೊಂದು ಸುತ್ತಿನ ಸಭೆ ನಡೆಯಲಿದ್ದು, ಇನ್ನೊಂದೆರಡು ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಸಮ್ಮಿಶ್ರವು ಮಹಾರಾಷ್ಟ್ರದಲ್ಲಿ ಭಾರಿ ಬಹುಮತವನ್ನು ದಾಖಲಿಸಿದ ನಂತರ ಮುಂದಿನ ಸರ್ಕಾರಕ್ಕಾಗಿ ಅಧಿಕಾರ ಹಂಚಿಕೆ ಒಪ್ಪಂದ ಮಾಡಿಕೊಳ್ಳಲು ಸಿಎಂ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಅವರೊಂದಿಗೆ ನಿನ್ನೆ ರಾತ್ರಿ ದೆಹಲಿಗೆ ತೆರಳಿ ಅಮಿತ್ ಶಾ ಮತ್ತು ಜೆ ಪಿ ನಡ್ಡಾ ಅವರನ್ನು ಭೇಟಿ ಮಾಡಿದರು.

ಇನ್ನೊಂದೆರಡು ದಿನಗಳಲ್ಲಿ ಮಹಾರಾಷ್ಟ್ರ ಸಿಎಂ ನಿರ್ಧಾರ ತೆಗೆದುಕೊಳ್ಳುತ್ತೇವೆ. ಅಂತಿಮ ನಿರ್ಧಾರವನ್ನು ನಾವೆಲ್ಲರೂ ಒಟ್ಟಾಗಿ ಕುಳಿತು ಚರ್ಚಿಸಿ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು. ರಾಜ್ಯದಲ್ಲಿ ಸರ್ಕಾರ ರಚನೆಗೆ ಅಡ್ಡಿಯಾಗುವುದಿಲ್ಲ ಮತ್ತು ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುತ್ತೇನೆ ಎಂದು ಹೇಳುವ ಮೂಲಕ ಅಧಿಕಾರ ಹಂಚಿಕೆಯಲ್ಲಿ ಭಿನ್ನಾಭಿಪ್ರಾಯ, ಗೊಂದಲವಿದೆ ಎಂಬ ಊಹಾಪೋಹಕ್ಕೆ ತೆರೆಎಳೆದಿದ್ದಾರೆ.

ಅಮಿತ್ ಶಾ ಮತ್ತು ಜೆ ಪಿ ನಡ್ಡಾ ಅವರ ಜೊತೆಗೆ ನಡೆಸಿದ ಮಾತುಕತೆ ಫಲಪ್ರದವಾಗಿತ್ತು. ನಾವೆಲ್ಲರೂ ಸರ್ಕಾರ ರಚನೆಯ ಬಗ್ಗೆ ಚರ್ಚಿಸಿದ್ದೇವೆ. ಮಿತ್ರಪಕ್ಷಗಳ ನಡುವೆ ಉತ್ತಮ ಸಮನ್ವಯವಿದೆ, ಜನರು ನಮಗೆ ನೀಡಿದ ಸ್ಪಷ್ಟ ಆದೇಶವನ್ನು ನಾವು ಗೌರವಿಸುತ್ತೇವೆ. ನಾವು ಶೀಘ್ರದಲ್ಲೇ ಸರ್ಕಾರವನ್ನು ರಚಿಸುತ್ತೇವೆ ಎಂದು ಶಿವಸೇನೆ ನಾಯಕ ಏಕನಾಥ್ ಶಿಂಧೆ ಹೇಳಿದರು.

ಸಭೆಯು ಉತ್ತಮ ಮತ್ತು ಸಕಾರಾತ್ಮಕವಾಗಿತ್ತು. ಇದು ಮೊದಲ ಸಭೆ. ಮುಂಬೈನಲ್ಲಿ ಮಹಾಯುತಿಯ ಮತ್ತೊಂದು ಸಭೆ ನಡೆಯಲಿದೆ ಎಂದರು.

ನವೆಂಬರ್ 20 ರಂದು ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ನಡೆದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

ಜನಸಂಖ್ಯಾ ಬದಲಾವಣೆ ಪರಿಶೀಲಿಸಲು ಸರ್ಕಾರದಿಂದ ಉನ್ನತ ಮಟ್ಟದ ಸಮಿತಿ

ಬೆಂಗಳೂರು: ಕೆಲಸ ಮಾಡುತ್ತಿದ್ದ ಕಂಪನಿಗೆ ಕನ್ನ! ಚಿನ್ನದ ಗಟ್ಟಿ, ಆಭರಣಗಳನ್ನು ಕದ್ದ 9 ಕಾರ್ಮಿಕರ ಬಂಧನ

IPL 2026: ನಾವೇನು ಸಿನಿಮಾ ಸ್ಟಾರ್‌ಗಳಲ್ಲ: ವಿಮಾನ ನಿಲ್ಗಾಣದಲ್ಲಿ Riyan Parag ಗರಂ, ವೈಭವ್ ಸೂರ್ಯವಂಶಿ ಶಾಕ್! Video

SCROLL FOR NEXT