ದೆಹಲಿಯಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಲೋಕಸಭೆಯಲ್ಲಿ ಅದಾನಿ ಮತ್ತು 'ಸಂಭಾಲ್ ವಿಷಯಗಳ ಕುರಿತು ವಿರೋಧ ಪಕ್ಷದ ಸಂಸದರು ಪ್ರತಿಭಟನೆ ನಡೆಸಿದರು. 
ದೇಶ

ಅದಾನಿ ಲಂಚ ಪ್ರಕರಣ ಗದ್ದಲ: ಸತತ ನಾಲ್ಕನೇ ದಿನ ಸಂಸತ್ತು ಕಲಾಪ ಮುಂದೂಡಿಕೆ

ನೀವು ಕಲಾಪ ಸುಗಮವಾಗಿ ನಡೆಯಲು ಬಿಡದಿದ್ದರೆ ನಿಯಮ 267 ನ್ನು ಅಡ್ಡಿಪಡಿಸುವ ಕಾರ್ಯವಿಧಾನವಾಗಿ ಅಸ್ತ್ರಗೊಳಿಸಲಾಗತ್ತದೆ ಎಂದು ಸಭಾಪತಿಗಳು ಹೇಳಿದರು.

ನವದೆಹಲಿ: ಗೌತಮ್ ಅದಾನಿ ಲಂಚದ ಆರೋಪ ಮತ್ತು ಇತರ ವಿಷಯಗಳ ಕುರಿತು ವಿರೋಧ ಪಕ್ಷದ ಸದಸ್ಯರು ಇಂದು ಶುಕ್ರವಾರವೂ ಪ್ರತಿಭಟನೆಯನ್ನು ಮುಂದುವರೆಸಿದ್ದರಿಂದ ಸಂಸತ್ತಿನ ಉಭಯ ಸದನಗಳಲ್ಲಿ ಚಳಿಗಾಲದ ಅಧಿವೇಶನದ ಕಲಾಪ ಸತತ ನಾಲ್ಕನೇ ದಿನವೂ ಸ್ಥಗಿತಗೊಂಡಿದೆ.

ರಾಜ್ಯಸಭೆಯ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು, ಆದರೆ ಪ್ರತಿಪಕ್ಷಗಳ ಸಂಸದರು ಸಮಸ್ಯೆಗಳ ಬಗ್ಗೆ ಚರ್ಚೆಗೆ ಒತ್ತಾಯಿಸಿ ಪ್ರತಿಭಟನೆಯನ್ನು ಮುಂದುವರೆಸಿದ್ದರಿಂದ ಲೋಕಸಭೆಯನ್ನು ಮಧ್ಯಾಹ್ನದವರೆಗೆ ಮುಂದೂಡಲಾಯಿತು.

ಇಂದು ಬೆಳಗ್ಗೆ ರಾಜ್ಯಸಭೆ ಕಲಾಪ ಆರಂಭಗೊಂಡಾಗ ಸಭಾಪತಿ ಜಗದೀಪ್ ಧನಕರ್ ಅವರು ಸದನದ ನಿಯಮ 267 ರ ಅಡಿಯಲ್ಲಿ ನಿಗದಿತ ವ್ಯವಹಾರವನ್ನು ಮುಂದೂಡಲು 17 ಸೂಚನೆಗಳನ್ನು ಸ್ವೀಕರಿಸಿದ್ದಾರೆ ಎಂದು ಹೇಳಿದರು.

ಅದಾನಿ ಗ್ರೂಪ್ ವಿರುದ್ಧದ ಭ್ರಷ್ಟಾಚಾರ ಮತ್ತು ಅಕ್ರಮಗಳ ಆರೋಪಗಳು, ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ನಡೆದ ಕೋಮು ಹಿಂಸಾಚಾರ ಮತ್ತು ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗಳ ಕುರಿತು ಚರ್ಚೆಗಾಗಿ ಪ್ರತಿಪಕ್ಷಗಳ ಸಂಸದರು ನೊಟೀಸ್ ಜಾರಿ ಮಾಡಿದರು. ಎಲ್ಲಾ ನೋಟಿಸ್‌ಗಳನ್ನು ತಿರಸ್ಕರಿಸುತ್ತಿರುವುದಾಗಿ ಸಭಾಪತಿ ಹೇಳಿದರು. ಇದು ಹಲವು ವಿರೋಧ ಪಕ್ಷದ ಸಂಸದರ ಪ್ರತಿಭಟನೆಗೆ ಕಾರಣವಾಗಿ ಅವರು ಘೋಷಣೆಗಳನ್ನು ಎತ್ತಲು ಪ್ರಾರಂಭಿಸಿದರು.

ನೀವು ಕಲಾಪ ಸುಗಮವಾಗಿ ನಡೆಯಲು ಬಿಡದಿದ್ದರೆ ನಿಯಮ 267 ನ್ನು ಅಡ್ಡಿಪಡಿಸುವ ಕಾರ್ಯವಿಧಾನವಾಗಿ ಅಸ್ತ್ರಗೊಳಿಸಲಾಗತ್ತದೆ ಎಂದು ಸಭಾಪತಿಗಳು ಹೇಳಿದರು. ಈ ಹೇಳಿಕೆಗೆ ಕಾಂಗ್ರೆಸ್ ಸೇರಿದಂತೆ ವಿಪಕ್ಷ ಸಂಸದರು ವಿರೋಧ ವ್ಯಕ್ತಪಡಿಸಿದರು. ಕಲಾಪ ಮುಂದುವರಿಸಲಾಗದೆ ಸಭಾಧ್ಯಕ್ಷರು ಸದನದ ಕಲಾಪವನ್ನು ಡಿಸೆಂಬರ್ 2ಕ್ಕೆ ಮುಂದೂಡಿದರು.

ಅದಾನಿ ವಿವಾದ ಮತ್ತು ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದ ಕುರಿತು ವಿರೋಧ ಪಕ್ಷದ ಸದಸ್ಯರ ಗದ್ದಲದ ನಂತರ ಲೋಕಸಭೆಯ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಲಾಯಿತು.

ಸದನವು ದಿನದ ಮಟ್ಟಿಗೆ ಸಭೆ ಸೇರಿದ ತಕ್ಷಣ, ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಸದಸ್ಯರು ವಿವಿಧ ವಿಷಯಗಳನ್ನು ಪ್ರಸ್ತಾಪಿಸಲು ಪ್ರಯತ್ನಿಸಿದರು. ಬಹುತೇಕ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಕೆಲ ಸದಸ್ಯರು ಕೂಡ ಸದನದ ಬಾವಿಗಿಳಿದು ಘೋಷಣೆಗಳನ್ನು ಕೂಗಿದರು.

ಸಭಾಪತಿ ಓಂ ಬಿರ್ಲಾ ಅವರು ಸದನ ನಡೆಸಲು ಅವಕಾಶ ನೀಡಬೇಕು ಮತ್ತು ಪ್ರಶ್ನೋತ್ತರ ಅವಧಿ ಸದಸ್ಯರ ಸಮಯ ಎಂದು ಹೇಳಿದರು. ಸುಮಾರು 10 ನಿಮಿಷಗಳ ಕಾಲ ನಡೆದ ಪ್ರಶ್ನೋತ್ತರ ಅವಧಿಯಲ್ಲಿ ಎರಡು ಪ್ರಶ್ನೆಗಳನ್ನು ತೆಗೆದುಕೊಳ್ಳಲಾಯಿತು. ಗದ್ದಲ ಮುಂದುವರಿದಿದ್ದರಿಂದ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT