ಮಲ್ಲಿಕಾರ್ಜುನ್ ಖರ್ಗೆ online desk
ದೇಶ

ಪಕ್ಷ ಬಲವರ್ಧನೆಗೆ ಕಠಿಣ ನಿರ್ಧಾರಗಳು ಅಗತ್ಯ: ಎಐಸಿಸಿ ಅಧಿವೇಶನದಲ್ಲಿ ಅಧ್ಯಕ್ಷ ಖರ್ಗೆ

ತಳಮಟ್ಟದಿಂದ ಪಕ್ಷ ಬಲವರ್ಧನೆಯಾಗಬೇಕು, ಉತ್ತರದಾಯಿತ್ವ ಇರಬೇಕು ಎಂದು ಹೇಳಿರುವ ಖರ್ಗೆ ಒಗ್ಗಟ್ಟಿನಿಂದ ಇರುವಂತೆ, ಒಬ್ಬರ ವಿರುದ್ಧ ಮತ್ತೊಬ್ಬರು ಮಾತನಾಡದಂತೆ ಕಾಂಗ್ರೆಸ್ ನಾಯಕರಿಗೆ ಕರೆ ನೀಡಿದ್ದಾರೆ.

ನವದೆಹಲಿ: ಇಂದು ನವದೆಹಲಿಯಲ್ಲಿ ನಡೆದ ಎಐಸಿಸಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಕ್ಷ ಬಲವರ್ಧನೆಗೆ ಕಠಿಣ ನಿರ್ಧಾರಗಳು ಅಗತ್ಯ ಎಂದು ಹೇಳಿದ್ದಾರೆ.

ತಳಮಟ್ಟದಿಂದ ಪಕ್ಷ ಬಲವರ್ಧನೆಯಾಗಬೇಕು, ಉತ್ತರದಾಯಿತ್ವ ಇರಬೇಕು ಎಂದು ಹೇಳಿರುವ ಖರ್ಗೆ ಒಗ್ಗಟ್ಟಿನಿಂದ ಇರುವಂತೆ, ಒಬ್ಬರ ವಿರುದ್ಧ ಮತ್ತೊಬ್ಬರು ಮಾತನಾಡದಂತೆ ಕಾಂಗ್ರೆಸ್ ನಾಯಕರಿಗೆ ಕರೆ ನೀಡಿದ್ದಾರೆ.

ಇವಿಎಂಗಳ ಬಗ್ಗೆಯೂ ಮಾತನಾಡಿರುವ ಖರ್ಗೆ, ಇವಿಎಂಗಳು ಚುನಾವಣಾ ಪ್ರಕ್ರಿಯೆಗಳ ಮೇಲೆ ಸಂದೇಹ ಮೂಡಿಸಿದೆ, ದೇಶದಲ್ಲಿ ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆಗಳನ್ನು ನಡೆಸುವ ಹೊಣೆಗಾರಿಗೆ ಚುನಾವಣಾ ಆಯೋಗದ ಮೇಲೆ ಇದೆ ಎಂದು ಹೇಳಿದ್ದಾರೆ.

ಪಕ್ಷದಲ್ಲಿನ ಆಂತರಿಕ ಕಚ್ಚಾಟದ ಬಗ್ಗೆಯೂ ಖರ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಖರ್ಗೆ, ಒಗ್ಗಟ್ಟಿನ ಕೊರತೆ ಮತ್ತು ಸ್ವಂತ ಪಕ್ಷದ ನಾಯಕರ ವಿರುದ್ಧ ಹೇಳಿಕೆಗಳು ಪಕ್ಷಕ್ಕೆ ಬಹಳಷ್ಟು ಹಾನಿಯನ್ನುಂಟುಮಾಡುತ್ತವೆ ಎಂದು ಪ್ರತಿಪಾದಿಸಿದರು.

ನಾವು ಒಗ್ಗಟ್ಟಿನಿಂದ ಚುನಾವಣೆಯಲ್ಲಿ ಹೋರಾಡದಿದ್ದರೆ ಮತ್ತು ಪರಸ್ಪರರ ವಿರುದ್ಧ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸದಿದ್ದರೆ, ನಾವು ನಮ್ಮ ವಿರೋಧಿಗಳನ್ನು ರಾಜಕೀಯವಾಗಿ ಹೇಗೆ ಸೋಲಿಸಲು ಸಾಧ್ಯವಾಗುತ್ತದೆ? ”ಎಂದು ಕಾಂಗ್ರೆಸ್ ಅಧ್ಯಕ್ಷರು ಪ್ರಶ್ನಿಸಿದ್ದಾರೆ.

ಚುನಾವಣಾ ಫಲಿತಾಂಶಗಳಿಂದ ಪಾಠ ಕಲಿಯುವ ಮೂಲಕ ಪಕ್ಷದಲ್ಲಿನ ನ್ಯೂನತೆಗಳನ್ನು ಹೋಗಲಾಡಿಸಲು ಕರೆ ನೀಡಿದ ಖರ್ಗೆ, ಪ್ರತಿಸ್ಪರ್ಧಿಗಳಿಂದ "ಅಪ್ರಚಾರ ಮತ್ತು ತಪ್ಪು ಮಾಹಿತಿ" ಯನ್ನು ಪರಿಣಾಮಕಾರಿಯಾಗಿ ಎದುರಿಸಲು ಪಕ್ಷವು ಕಾರ್ಯತಂತ್ರವನ್ನು ರೂಪಿಸಬೇಕಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!