ಸಾಂದರ್ಭಿಕ ಚಿತ್ರ 
ದೇಶ

ಅಮೆರಿಕ: ಪೆಟ್ರೋಲ್ ಬಂಕ್ ನಲ್ಲಿ ತೆಲಂಗಾಣದ ವಿದ್ಯಾರ್ಥಿಗೆ ಗುಂಡಿಕ್ಕಿ ಹತ್ಯೆ

ಭಾರತೀಯ ಕಾಲಮಾನ ಶನಿವಾರ ಬೆಳಗ್ಗೆ ಚಿಕಾಗೋ ಬಳಿಯ ಗ್ಯಾಸ್ ಸ್ಟೇಷನ್‌ನಲ್ಲಿ ಸಾಯಿ ತೇಜ ನೂಕರಾಪು(22) ಎಂಬ ವಿದ್ಯಾರ್ಥಿಯನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಹೈದರಾಬಾದ್: ಯುನೈಟೆಡ್ ಸ್ಟೇಟ್ಸ್‌ನ ಗ್ಯಾಸ್ ಸ್ಟೇಷನ್‌ನಲ್ಲಿ ಕೆಲಸ ಮಾಡುತ್ತಿದ್ದ ತೆಲಂಗಾಣದ ಖಮ್ಮಂ ಜಿಲ್ಲೆಯ ಯುವಕನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಕುಟುಂಬ ಸದಸ್ಯರು ಶನಿವಾರ ತಿಳಿಸಿದ್ದಾರೆ.

ಭಾರತೀಯ ಕಾಲಮಾನ ಶನಿವಾರ ಬೆಳಗ್ಗೆ ಚಿಕಾಗೋ ಬಳಿಯ ಗ್ಯಾಸ್ ಸ್ಟೇಷನ್‌ನಲ್ಲಿ ಸಾಯಿ ತೇಜ ನೂಕರಾಪು(22) ಎಂಬ ವಿದ್ಯಾರ್ಥಿಯನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಬಿಆರ್‌ಎಸ್ ಎಂಎಲ್‌ಸಿ ಮಧುಸೂದನ್ ತಾಥಾ ಅವರು ಅಮೆರಿಕದಿಂದ ಪಡೆದ ಪ್ರಾಥಮಿಕ ಮಾಹಿತಿಯನ್ನು ಉಲ್ಲೇಖಿಸಿ ಹೇಳಿದ್ದಾರೆ.

ಖಮ್ಮಮ್ ಬಳಿಯ ಅವರ ನಿವಾಸದಲ್ಲಿ ಸಂತ್ರಸ್ತೆಯ ಪೋಷಕರನ್ನು ಭೇಟಿ ಮಾಡಿದ ಎಂಎಲ್‌ಸಿ ಮಧುಸೂದನ್ ಅವರು, ಘಟನೆ ಸಂಭವಿಸಿದಾಗ ಸಾಯಿ ತೇಜ ಅವರು ಕರ್ತವ್ಯದಲ್ಲಿ ಇರಲಿಲ್ಲ. ಆದರೆ ಸ್ವಲ್ಪ ಸಮಯದವರೆಗೆ ಇರಲು ಕೇಳಿಕೊಂಡ ಸ್ನೇಹಿತರಿಗೆ ಸಹಾಯ ಮಾಡಲು ಇದ್ದರು. ಸ್ನೇಹಿತ ಯಾವುದೋ ಕೆಲಸದ ಮೇಲೆ ಹೊರಗೆ ಹೋಗಿದ್ದರು ಎಂದು ತಿಳಿಸಿದ್ದಾರೆ.

ಸಾಯಿ ತೇಜ ಭಾರತದಲ್ಲಿ ಬಿಬಿಎ ಮುಗಿಸಿ ಅಮೆರಿಕಾದಲ್ಲಿ ಎಂಬಿಎ ಓದುತ್ತಿದ್ದಾರೆ. ಯುವಕ ಓದಿನ ಜತೆಗೆ ಪಾರ್ಟ್ ಟೈಮ್ ಕೆಲಸ ಮಾಡುತ್ತಿದ್ದ ಎಂದು ಆತನ ಸಂಬಂಧಿಕರೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಸಹಾಯಕ್ಕಾಗಿ ತೆಲುಗು ಅಸೋಸಿಯೇಶನ್ ಆಫ್ ನಾರ್ತ್ ಅಮೆರಿಕಾ(ತಾನಾ) ಸದಸ್ಯರೊಂದಿಗೆ ಮಾತನಾಡಿದ್ದೇನೆ. ಮೃತದೇಹ ಮುಂದಿನ ವಾರ ಭಾರತ ತಲುಪುವ ನಿರೀಕ್ಷೆಯಿದೆ ಎಂದು ಎಂಎಲ್‌ಸಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT