ಮೇಧಾ ಪಾಟ್ಕಾರ್ 
ದೇಶ

ಹಲವು ದೇಶಗಳಲ್ಲಿ ಇವಿಎಂ ಬಳಕೆ ಸ್ಥಗಿತ: ಮೇಧಾ ಪಾಟ್ಕರ್

ಇತ್ತೀಚೆಗಷ್ಟೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚುನಾವಣಾ ವಿಧಾನದಲ್ಲಿ ಬ್ಯಾಲೆಟ್ ಪೇಪರ್ ನ್ನು ಮರು ಪರಿಚಯಿಸುವಂತೆ ಸಲಹೆ ನೀಡಿದ್ದರು.

ಸಂಭಾಜಿನಗರ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ನಂತರ ಕೆಲವು ವಿರೋಧ ಪಕ್ಷಗಳು ಇವಿಎಂ ವಿಶ್ವಾಸಾರ್ಹತೆಯ ಬಗ್ಗೆ ಮತ್ತೆ ಚರ್ಚೆ ಆರಂಭಿಸಿರುವಂತೆಯೇ, ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕಾರ್ ಕೂಡಾ ಹಲವು ದೇಶಗಳು ಇವಿಎಂ ಬಳಕೆ ಸ್ಥಗಿತಗೊಳಿಸಿರುವುದಾಗಿ ಶನಿವಾರ ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚುನಾವಣಾ ವಿಧಾನದಲ್ಲಿ ಬ್ಯಾಲೆಟ್ ಪೇಪರ್ ನ್ನು ಮರು ಪರಿಚಯಿಸುವಂತೆ ಸಲಹೆ ನೀಡಿದ್ದರು.

ಸುದ್ದಿಗಾರರೊಂದಿಗೆ ಮಾತನಾಡಿದ ಪಾಟ್ಕರ್, "ನಾನು ಇವಿಎಂಗಳ ಬಗ್ಗೆ ಪರಿಣತಿ ಹೊಂದಿಲ್ಲ. ಆದರೆ ಅನೇಕ ದೇಶಗಳು ಅವುಗಳ ಬಳಕೆ ನಿಲ್ಲಿಸಿರುವುದು ನಿಜ. ಕೇವಲ ವಿದ್ಯುತ್ ಸಂಪರ್ಕದೊಂದಿಗೆ ಕೆಲವೊಂದು ವಿದ್ಯುನ್ಮಾನ ಮತಯಂತ್ರಗಳನ್ನು ಬದಲಾಯಿಸಬಹುದು ಎಂಬುದು ಪ್ರಯೋಗಗಳು ತೋರಿಸಿವೆ ಎಂದರು.

ಮಹಾತ್ಮಗಾಂಧಿ ಮಿಷನ್ ವಿಶ್ವವಿದ್ಯಾನಿಲಯದಿಂದ ಅವರಿಗೆ ಗೌರವ ಡಿ.ಲಿಟ್ ನೀಡಲಾಯಿತು. ಚುನಾವಣಾ ಆಯೋಗ ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಪರ್ಕ ಹೊಂದಿದ್ದರೆ ಚುನಾವಣಾ ನೀತಿ ಸಂಹಿತೆಯನ್ನು ನಿಷ್ಪಕ್ಷಪಾತವಾಗಿ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಮಹಾರಾಷ್ಟ್ರ ಸರ್ಕಾರದ "ಮಝಿ ಲಡ್ಕಿ ಬಹಿನ್" ಯೋಜನೆಯಡಿ ಬಡ ಕುಟುಂಬದ ಮಹಿಳೆಯರಿಗೆ ಮಾಸಿಕ 1,500 ರೂ. ಆರ್ಥಿಕ ನೆರವು ನೀಡುವುದರಿಂದ ಅವರ ಸಮಸ್ಯೆಗಳು ಬಗೆಹರಿಯುವುದಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT