ಮೇಧಾ ಪಾಟ್ಕಾರ್ 
ದೇಶ

ಹಲವು ದೇಶಗಳಲ್ಲಿ ಇವಿಎಂ ಬಳಕೆ ಸ್ಥಗಿತ: ಮೇಧಾ ಪಾಟ್ಕರ್

ಇತ್ತೀಚೆಗಷ್ಟೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚುನಾವಣಾ ವಿಧಾನದಲ್ಲಿ ಬ್ಯಾಲೆಟ್ ಪೇಪರ್ ನ್ನು ಮರು ಪರಿಚಯಿಸುವಂತೆ ಸಲಹೆ ನೀಡಿದ್ದರು.

ಸಂಭಾಜಿನಗರ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ನಂತರ ಕೆಲವು ವಿರೋಧ ಪಕ್ಷಗಳು ಇವಿಎಂ ವಿಶ್ವಾಸಾರ್ಹತೆಯ ಬಗ್ಗೆ ಮತ್ತೆ ಚರ್ಚೆ ಆರಂಭಿಸಿರುವಂತೆಯೇ, ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕಾರ್ ಕೂಡಾ ಹಲವು ದೇಶಗಳು ಇವಿಎಂ ಬಳಕೆ ಸ್ಥಗಿತಗೊಳಿಸಿರುವುದಾಗಿ ಶನಿವಾರ ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚುನಾವಣಾ ವಿಧಾನದಲ್ಲಿ ಬ್ಯಾಲೆಟ್ ಪೇಪರ್ ನ್ನು ಮರು ಪರಿಚಯಿಸುವಂತೆ ಸಲಹೆ ನೀಡಿದ್ದರು.

ಸುದ್ದಿಗಾರರೊಂದಿಗೆ ಮಾತನಾಡಿದ ಪಾಟ್ಕರ್, "ನಾನು ಇವಿಎಂಗಳ ಬಗ್ಗೆ ಪರಿಣತಿ ಹೊಂದಿಲ್ಲ. ಆದರೆ ಅನೇಕ ದೇಶಗಳು ಅವುಗಳ ಬಳಕೆ ನಿಲ್ಲಿಸಿರುವುದು ನಿಜ. ಕೇವಲ ವಿದ್ಯುತ್ ಸಂಪರ್ಕದೊಂದಿಗೆ ಕೆಲವೊಂದು ವಿದ್ಯುನ್ಮಾನ ಮತಯಂತ್ರಗಳನ್ನು ಬದಲಾಯಿಸಬಹುದು ಎಂಬುದು ಪ್ರಯೋಗಗಳು ತೋರಿಸಿವೆ ಎಂದರು.

ಮಹಾತ್ಮಗಾಂಧಿ ಮಿಷನ್ ವಿಶ್ವವಿದ್ಯಾನಿಲಯದಿಂದ ಅವರಿಗೆ ಗೌರವ ಡಿ.ಲಿಟ್ ನೀಡಲಾಯಿತು. ಚುನಾವಣಾ ಆಯೋಗ ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಪರ್ಕ ಹೊಂದಿದ್ದರೆ ಚುನಾವಣಾ ನೀತಿ ಸಂಹಿತೆಯನ್ನು ನಿಷ್ಪಕ್ಷಪಾತವಾಗಿ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಮಹಾರಾಷ್ಟ್ರ ಸರ್ಕಾರದ "ಮಝಿ ಲಡ್ಕಿ ಬಹಿನ್" ಯೋಜನೆಯಡಿ ಬಡ ಕುಟುಂಬದ ಮಹಿಳೆಯರಿಗೆ ಮಾಸಿಕ 1,500 ರೂ. ಆರ್ಥಿಕ ನೆರವು ನೀಡುವುದರಿಂದ ಅವರ ಸಮಸ್ಯೆಗಳು ಬಗೆಹರಿಯುವುದಿಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

9 ವರ್ಷಗಳ ಬಳಿಕ ಇಸ್ರೇಲ್ ಗೆ ಪ್ರಧಾನಿ ಮೋದಿ ಭೇಟಿ; ಅದ್ದೂರಿ ರೆಡ್ ಕಾರ್ಪೆಟ್ ಸ್ವಾಗತ

Epstein ties ಆರೋಪದ ಕುರಿತು ಮೌನ ಮುರಿದ ಬಿಲ್ ಗೇಟ್ಸ್; ಉದ್ಯಮಿ ಹೇಳಿದ್ದೇನು?

ಹಾರ್ಡ್‌ವೇರ್ ಗೋಡೌನ್ ನಲ್ಲಿ ಅಗ್ನಿದುರಂತ: ನಂದಿಸಲು ಹೋದ ಅಗ್ನಿಶಾಮಕ ಸಿಬ್ಬಂದಿಗೂ ಗಾಯ!

ಬೆಂಗಳೂರು: GST ಅಧಿಕಾರಿಗಳೆಂದು ಹೇಳಿಕೊಂಡು 5 ಲಕ್ಷ ರೂ. ಸುಲಿಗೆ; ಇಬ್ಬರು ಹೌಸ್‌ಕೀಪಿಂಗ್ ಸಿಬ್ಬಂದಿ ಬಂಧನ!

Shikhar Dhawanಗೆ ಬಿಗ್ ರಿಲೀಫ್: 5.7 ಕೋಟಿ ರೂ ಹಣ ಹಿಂದಿರುಗಿಸಿ.. ಮಾಜಿ ಪತ್ನಿ ಆಯೇಷಾ ಮುಖರ್ಜಿಗೆ ಕೋರ್ಟ್ ಸೂಚನೆ!

SCROLL FOR NEXT