ಸೂಪರ್ ಸ್ಟಾರ್ ರಜನಿಕಾಂತ್ 
ದೇಶ

ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು: ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ, ಶೀಘ್ರಗತಿ ಗುಣಮುಖರಾಗುವಂತೆ ಪ್ರಾರ್ಥನೆ

ಆಸ್ಪತ್ರೆಗೂ ದಾಖಲಾಗುವುದಕ್ಕೂ ಮುನ್ನ ರಜನಿಕಾಂತ್​​​ ಮುಂಬರುವ ವೆಟ್ಟೈಯನ್​​​ ಸಿನಿಮಾದ ಆಡಿಯೋ ಲಾಂಚ್​ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು.

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅವರು ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದು, ಈ ಬೆಳವಣಿಗೆ ಅಭಿಮಾನಿಗಳಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ.

ರಜನಿಕಾಂತ್ ಅವರು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಚಿಕಿತ್ಸೆಗಾಗಿ ಸೋಮವಾರ ತಡರಾತ್ರಿ ಚೆನ್ನೈನ ಆಯರ್ವಿಳಕ್ಕು ಪ್ರದೇಶದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

ರಜನಿಕಾಂತ್​ಗೆ ಕಾರ್ಡಿಯಾಕ್​ ಕ್ಯಾಥ್​ ಕ್ಯಾಬ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗುತ್ತಿದ್ದು, ತಮ್ಮ ನೆಚ್ಚಿನ ನಟ ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಇನ್ನು ರಜನಿಕಾಂತ್​ ಅವರ ಆರೋಗ್ಯದ ಬಗ್ಗೆ ಅಪೋಲೋ ಆಸ್ಪತ್ರೆ ಅಥವಾ ರಜನಿಕಾಂತ್​ ಅವರ ಕುಟುಂಬದವರಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ಇಂದು ಬೆಳಗ್ಗೆ ರಜನಿಕಾಂತ್​ ಅವರ ಆರೋಗ್ಯದ ಬಗ್ಗೆ ಆಸ್ಪತ್ರೆಯಿಂದ ಪತ್ರಿಕಾ ಪ್ರಕಟಣೆ ಹೊರಡಿಸುವ ನಿರೀಕ್ಷೆಯಿದೆ.

ಆಸ್ಪತ್ರೆಗೂ ದಾಖಲಾಗುವುದಕ್ಕೂ ಮುನ್ನ ರಜನಿಕಾಂತ್​​​ ಮುಂಬರುವ ವೆಟ್ಟೈಯನ್​​​ ಸಿನಿಮಾದ ಆಡಿಯೋ ಲಾಂಚ್​ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು.

ಇದು ಆ್ಯಕ್ಷನ್​​​ ಪ್ಯಾಕ್ಡ್​​​ ಮನರಂಜನೆಯ ಸಿನಿಮಾವಾಗಿದ್ದು, ಅಕ್ಟೋಬರ್​​ 10ರಂದು ಥಿಯೇಟರ್​​ಗಳಿಗೆ ಬರಲಿದೆ. ಈ ಸಿನಿಮಾವನ್ನು ಟಿಜೆ ಜ್ಞಾನವೇಲ್​​ ನಿರ್ದೇಶಿಸಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT