ಸೂಪರ್ ಸ್ಟಾರ್ ರಜನಿಕಾಂತ್ 
ದೇಶ

ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು: ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ, ಶೀಘ್ರಗತಿ ಗುಣಮುಖರಾಗುವಂತೆ ಪ್ರಾರ್ಥನೆ

ಆಸ್ಪತ್ರೆಗೂ ದಾಖಲಾಗುವುದಕ್ಕೂ ಮುನ್ನ ರಜನಿಕಾಂತ್​​​ ಮುಂಬರುವ ವೆಟ್ಟೈಯನ್​​​ ಸಿನಿಮಾದ ಆಡಿಯೋ ಲಾಂಚ್​ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು.

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅವರು ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದು, ಈ ಬೆಳವಣಿಗೆ ಅಭಿಮಾನಿಗಳಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ.

ರಜನಿಕಾಂತ್ ಅವರು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಚಿಕಿತ್ಸೆಗಾಗಿ ಸೋಮವಾರ ತಡರಾತ್ರಿ ಚೆನ್ನೈನ ಆಯರ್ವಿಳಕ್ಕು ಪ್ರದೇಶದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

ರಜನಿಕಾಂತ್​ಗೆ ಕಾರ್ಡಿಯಾಕ್​ ಕ್ಯಾಥ್​ ಕ್ಯಾಬ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗುತ್ತಿದ್ದು, ತಮ್ಮ ನೆಚ್ಚಿನ ನಟ ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಇನ್ನು ರಜನಿಕಾಂತ್​ ಅವರ ಆರೋಗ್ಯದ ಬಗ್ಗೆ ಅಪೋಲೋ ಆಸ್ಪತ್ರೆ ಅಥವಾ ರಜನಿಕಾಂತ್​ ಅವರ ಕುಟುಂಬದವರಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ಇಂದು ಬೆಳಗ್ಗೆ ರಜನಿಕಾಂತ್​ ಅವರ ಆರೋಗ್ಯದ ಬಗ್ಗೆ ಆಸ್ಪತ್ರೆಯಿಂದ ಪತ್ರಿಕಾ ಪ್ರಕಟಣೆ ಹೊರಡಿಸುವ ನಿರೀಕ್ಷೆಯಿದೆ.

ಆಸ್ಪತ್ರೆಗೂ ದಾಖಲಾಗುವುದಕ್ಕೂ ಮುನ್ನ ರಜನಿಕಾಂತ್​​​ ಮುಂಬರುವ ವೆಟ್ಟೈಯನ್​​​ ಸಿನಿಮಾದ ಆಡಿಯೋ ಲಾಂಚ್​ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು.

ಇದು ಆ್ಯಕ್ಷನ್​​​ ಪ್ಯಾಕ್ಡ್​​​ ಮನರಂಜನೆಯ ಸಿನಿಮಾವಾಗಿದ್ದು, ಅಕ್ಟೋಬರ್​​ 10ರಂದು ಥಿಯೇಟರ್​​ಗಳಿಗೆ ಬರಲಿದೆ. ಈ ಸಿನಿಮಾವನ್ನು ಟಿಜೆ ಜ್ಞಾನವೇಲ್​​ ನಿರ್ದೇಶಿಸಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್