ಆಂಧ್ರ ಪ್ರದೇಶ DGP ಚ ದ್ವಾರಕಾ ತಿರುಮಲ ರಾವ್ 
ದೇಶ

ತಿರುಪತಿ ಲಡ್ಡು ವಿವಾದ: ಎಸ್ ಐಟಿ ತನಿಖೆ ತಾತ್ಕಾಲಿಕ ಸ್ಥಗಿತ- ಆಂಧ್ರ ಪ್ರದೇಶ DGP

ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಗುಂಟೂರು ವಲಯದ ಐಜಿಪಿ ನೇತೃತ್ವದಲ್ಲಿ ಒಂಬತ್ತು ಸದಸ್ಯರ ಎಸ್‌ಐಟಿಯನ್ನು ರಚಿಸಿದ್ದಾರೆ.

ತಿರುಪತಿ: ತಿರುಪತಿ ವೆಂಕಟೇಶ್ವರ ದೇವಾಲಯದ ಪ್ರಸಾದ 'ಲಡ್ಡು'ವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಆರೋಪ ವಿಚಾರ ಸುಪ್ರೀಂಕೋರ್ಟ್ ನಲ್ಲಿರುವುದರಿಂದ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ (SIT) ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಆಂಧ್ರ ಪ್ರದೇಶ DGP ಚ ದ್ವಾರಕಾ ತಿರುಮಲ ರಾವ್ ಮಂಗಳವಾರ ಹೇಳಿದರು.

ಕಳೆದ ಎರಡು ದಿನಗಳಲ್ಲಿ ಎಸ್ ಐಟಿ ಸಂಗ್ರಹ ಮತ್ತು ಮಾದರಿ ಪ್ರಕ್ರಿಯೆಗಳನ್ನು ತನಿಖೆ ಮಾಡಿದ್ದು, ಲಡ್ಡುಗಳಲ್ಲಿ ಕಲಬೆರಕೆ ಮಾಡಲು ಹೇಗೆ ಸಾಧ್ಯ ಎಂಬುದನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಅವರು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ DGP ಎಸ್ ಐಟಿಯವರು ಮೊದಲಿಗೆ ಲಡ್ಡು ತಯಾರಿಕೆ ಪ್ರಕ್ರಿಯೆ ಅರ್ಥ ಮಾಡಿಕೊಳ್ಳಬೇಕು. ಅದನ್ನು ಅಧ್ಯಯನ ಮಾಡಬೇಕು ಮತ್ತು ಎಲ್ಲಾ ಮಾಹಿತಿ ಪಡೆಯಬೇಕು. ಆದರೆ ಈ ಮಧ್ಯೆ ಸುಪ್ರೀಂ ಕೋರ್ಟ್‌ನಿಂದ ಬಂದ ಆದೇಶಕನ್ನುಗುಣವಾಗಿ ತನಿಖೆ ನಿಲ್ಲಿಸಿದ್ದೇವೆ. ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ಹೆಚ್ಚು ಮಾತನಾಡುವುದು ಸೂಕ್ತವಲ್ಲ ಎಂದು ಹೇಳಿದರು.

ಸೋಮವಾರ ಲಡ್ಡು ಪ್ರಕರಣ ಕುರಿತ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ರಾಜ್ಯ ಸರ್ಕಾರ ನೇಮಿಸಿರುವ ಎಸ್‌ಐಟಿಯಿಂದ ತನಿಖೆ ಮುಂದುವರಿಯಬೇಕೇ ಅಥವಾ ಸ್ವತಂತ್ರ ಏಜೆನ್ಸಿಯಿಂದ ತನಿಖೆ ನಡೆಸಬೇಕೆ ಎಂದು ನಿರ್ಧರಿಸಲು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನೆರವಾಗುವಂತೆ ಸೂಚಿಸಿ, ಅಕ್ಟೋಬರ್ 3ಕ್ಕೆ ಪ್ರಕರಣದ ವಿಚಾರಣೆಯನ್ನು ಮುಂದೂಡಿತು.

ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಗುಂಟೂರು ವಲಯದ ಐಜಿಪಿ ನೇತೃತ್ವದಲ್ಲಿ ಒಂಬತ್ತು ಸದಸ್ಯರ ಎಸ್‌ಐಟಿಯನ್ನು ರಚಿಸಿದ್ದಾರೆ. ಕಲಬೆರಕೆ ತುಪ್ಪ ಸರಬರಾಜು ಮಾಡಿದ ಆರೋಪದ ಮೇಲೆ ಎಆರ್ ಡೈರಿ ವಿರುದ್ಧ ತಿರುಪತಿಯ ವೆಂಕಟೇಶ್ವರ ದೇವಸ್ಥಾನದ ಆಡಳಿತ ಮಂಡಳಿ TTD ತಿರುಪತಿ ಪೂರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ SIT ಪ್ರಕರಣವನ್ನು ತನಿಖೆಗೆ ಕೈಗೆತ್ತಿಕೊಂಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತಕ್ಕೆ ಬರುತ್ತಿದ್ದ ಸರಕು ಹಡಗಿನ ಮೇಲೆ ದಾಳಿ- ಹೊಣೆ ಹೊತ್ತ ಇರಾನ್; ಭಾರತದ ಪ್ರತಿಕ್ರಿಯೆ ಏನು?

ತೈಲ ಪೂರೈಕೆಗೆ ರಿಯಾಯಿತಿ ಸ್ಥಗಿತ ಬೆನ್ನಲ್ಲೇ ಎಚ್ಚೆತ್ತ ಭಾರತ; ರಷ್ಯಾ ವಿದೇಶಾಂಗ ಸಚಿವರಿಗೆ ಜೈಶಂಕರ್ ದೂರವಾಣಿ ಕರೆ; ಮಹತ್ವದ ಚರ್ಚೆ!

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು; ಪ್ರತಿಪಕ್ಷಗಳಿಗೆ ಮುಖಭಂಗ

IPL 2026: ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಉದ್ಘಾಟನಾ ಪಂದ್ಯ; ಮಾರ್ಚ್ 28 ರಂದು RCB vs SRH

'ರಕ್ಷಿತ್ ಶೆಟ್ಟಿ-ರಶ್ಮಿಕಾ ನಿಶ್ಚಿತಾರ್ಥ ಮುರಿದುಬೀಳಲು ಇದೇ ಕಾರಣ': ತಾಯಿ ಸುಮನ್ ಮಂದಣ್ಣರದ್ದು ಎನ್ನಲಾದ ಆಡಿಯೋ ವೈರಲ್!

SCROLL FOR NEXT