ಸಾಯಿಬಾಬಾ ಮೂರ್ತಿ ಸಾಂದರ್ಭಿಕ ಚಿತ್ರ 
ದೇಶ

ವಾರಾಣಸಿ: 14 ಹಿಂದೂ ದೇವಾಲಯಗಳಿಂದ ಸಾಯಿಬಾಬ ಮೂರ್ತಿಗಳ ತೆರವು!

ಸಾಯಿಬಾಬಾ ಮುಸ್ಲಿಂ ವ್ಯಕ್ತಿಯಾಗಿದ್ದು, ಅವರಿಗೂ ಸನಾತನ ಧರ್ಮಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳುವ ಹಿಂದೂ ಸಂಘಟನೆಗಳಿಂದ ಇನ್ನೂ 28 ದೇವಾಲಯಗಳಲ್ಲಿ ಸಾಯಿ ಬಾಬಾ ವಿಗ್ರಹ ತೆರವಿನ ಗುರಿ.

ವಾರಾಣಸಿ: ಹಿಂದೂ ದೇವಾಲಯಗಳಲ್ಲಿ ಸಾಯಿ ಬಾಬಾ ಮೂರ್ತಿಗಳ ಪ್ರತಿಷ್ಠಾಪನೆ ವಿಚಾರದಲ್ಲಿ ಉತ್ತರ ಪ್ರದೇಶದ ವಾರಾಣಸಿಯಲ್ಲಿ ವಿವಾದ ಭುಗಿಲೆದ್ದಿದೆ. ಪ್ರಸಿದ್ಧ ಬಡಾ ಗಣೇಶ ದೇವಸ್ಥಾನ ಸೇರಿದಂತೆ ಈವರೆಗೂ 14ಕ್ಕೂ ಹೆಚ್ಚು ದೇವಾಲಯಗಳಿಂದ ಸಾಯಿಬಾಬಾ ಅವರ ಮೂರ್ತಿಯನ್ನು ತೆರವುಗೊಳಿಸಲಾಗಿದೆ. ಸನಾತನ ರಕ್ಷಕ ದಳದ ನೇತೃತ್ವದಲ್ಲಿ ಈ ತೆರವು ಕಾರ್ಯ ನಡೆದಿದೆ.

ಸಾಯಿಬಾಬಾ ಮುಸ್ಲಿಂ ವ್ಯಕ್ತಿಯಾಗಿದ್ದು, ಅವರಿಗೂ ಸನಾತನ ಧರ್ಮಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳುವ ಹಿಂದೂ ಸಂಘಟನೆಗಳಿಂದ ಇನ್ನೂ 28 ದೇವಾಲಯಗಳಲ್ಲಿ ಸಾಯಿ ಬಾಬಾ ವಿಗ್ರಹ ತೆರವಿನ ಗುರಿ ಹೊಂದಲಾಗಿದೆ ಎಂದು ಮೂಲಗಳು ತಿಳಿಸಿವೆ.

ನಾವು ಸಾಯಿಬಾಬಾ ಅವರ ವಿರೋಧಿಗಳಲ್ಲ.ಆದರೆ ಅವರ ಮೂರ್ತಿಗಳನ್ನು ದೇವಾಲಯಗಳಲ್ಲಿ ಸ್ಥಾಪಿಸಲು ಬಿಡುವುದಿಲ್ಲ ಎಂದು ಸನಾತನ ರಕ್ಷಕ ದಳದ ಅಧ್ಯಕ್ಷ ಅಜಯ್ ಶರ್ಮಾ ಹೇಳಿದ್ದಾರೆ.

ಸಾಯಿಬಾಬಾ ಅನುಯಾಯಿಗಳು ಅವರಿಗಾಗಿಯೇ ಗುಡಿ ನಿರ್ಮಿಸಿ, ಅಲ್ಲಿಯೇ ಪೂಜಿಸಲಿ. ಸನಾತನ ಧರ್ಮದಲ್ಲಿ ಅವರ ಮೂರ್ತಿ ಸ್ಥಾಪನೆಗೆ ಅವಕಾಶವಿಲ್ಲ. ಸನಾತನ ಧರ್ಮದ ದೇಗುಲಗಳಲ್ಲಿ ಐದು ದೇವರ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ಪೂಜೆಗಷ್ಟೇ ಅವಕಾಶವಿದೆ. ಇದರಲ್ಲಿ ಸೂರ್ಯ, ವಿಷ್ಣು, ಶಿವ, ಶಕ್ತಿ ಹಾಗೂ ಗಣೇಶ ಮೂರ್ತಿಗಳ ಆರಾಧನೆಗಷ್ಟೇ ಅವಕಾಶ ಎಂದಿದ್ದಾರೆ.

ಭೂತೇಶ್ವರ ಹಾಗೂ ಅಗಸ್ತೇಶ್ವರ ದೇವಾಲಯಗಳಲ್ಲಿರುವ ಸಾಯಿಬಾಬು ಮೂರ್ತಿಗಳನ್ನು ಮುಂದಿನ ವಾರದೊಳಗೆ ತೆರವುಗೊಳಿಸಲಾಗುವುದು ಎಂದು ಶರ್ಮಾ ಹೇಳಿದ್ದಾರೆ. ಸಾಯಿಬಾಬಾ ಹಿಂದೂ ದೇವರಲ್ಲ. ಪ್ರಾಚೀನ ಪುರಾಣಗಳಲ್ಲಿ ಸಾಯಿಬಾಬಾ ಅವರ ಉಲ್ಲೇಖವಿಲ್ಲ ಎದು ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಕೊನೆಯ ಓವರ್ ನಲ್ಲಿ ಭರ್ಜರಿ ಜಯ, ಪ್ಲೇಆಫ್ ಗೆ RCB ಲಗ್ಗೆ, ರೇಸ್ ನಿಂದ PBKS ಔಟ್, CSK ಆಸೆ ಜೀವಂತ!

IPL 2026: RCB vs PBKS ಪಂದ್ಯದಲ್ಲಿ ಎರಡು ಭಾರೀ ದಾಖಲೆ ನಿರ್ಮಿಸಿದ Virat Kohli

IPL 2026: ರನ್ ಮೆಷಿನ್ Virat Kohli ದಾಖಲೆಯನ್ನೇ ಮುರಿದು ಐತಿಹಾಸಿಕ ದಾಖಲೆ ನಿರ್ಮಿಸಿದ ವೈಭವ್ ಸೂರ್ಯವಂಶಿ!

ಖ್ಯಾತ ತಮಿಳು ನಿರ್ಮಾಪಕ K Rajan ಆತ್ಮಹತ್ಯೆ; ಚೆನ್ನೈನಲ್ಲಿ 85ನೇ ವಯಸ್ಸಿನಲ್ಲಿ ನಿಧನ!

ಸ್ವಾತಂತ್ರ್ಯ ಹೋರಾಟಗಾರ ಗಣೇಶ್ ಶಂಕರ್ ವಿದ್ಯಾರ್ಥಿ ಪ್ರತಿಮೆ ಸ್ಥಾಪನೆಗೆ ವಿಳಂಬ: ಯೋಗಿಗೆ ರಕ್ತದಲ್ಲಿ ಪತ್ರ ಬರೆದ SP ಶಾಸಕ!

SCROLL FOR NEXT