ಮುಷ್ತಾಕ್ ಅಹ್ಮದ್ ಬುಖಾರಿ  
ದೇಶ

ಜಮ್ಮು ಮತ್ತು ಕಾಶ್ಮೀರ: ಬಿಜೆಪಿ ಅಭ್ಯರ್ಥಿ ಮುಷ್ತಾಕ್ ಅಹ್ಮದ್ ಬುಖಾರಿ ಹೃದಯಾಘಾತದಿಂದ ನಿಧನ

ಮುಷ್ತಾಕ್ ಅಹ್ಮದ್ ಬುಖಾರಿ ಅವರು ಇಂದು ಪೂಂಚ್ ಜಿಲ್ಲೆಯ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸುರನ್‌ಕೋಟೆಯಿಂದ ಎರಡು ಬಾರಿ ಶಾಸಕರಾಗಿದ್ದ ಮತ್ತು ಇದೇ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಅಭ್ಯರ್ಥಿಯಾಗಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಮಾಜಿ ಶಾಸಕ ಮುಷ್ತಾಕ್ ಅಹ್ಮದ್ ಶಾ ಬುಖಾರಿ ಅವರು ಬುಧವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮುಷ್ತಾಕ್ ಅಹ್ಮದ್ ಬುಖಾರಿ ಅವರು ಇಂದು ಪೂಂಚ್ ಜಿಲ್ಲೆಯ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಬುಖಾರಿ ಅವರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಬಿಜೆಪಿ ನಾಯಕರ ಪ್ರಕಾರ, ಬುಖಾರಿ ಅವರು ಕೆಲವು ಸಮಯದಿಂದ ಅಸ್ವಸ್ಥರಾಗಿದ್ದರು ಮತ್ತು ಇಂದು ಬೆಳಗ್ಗೆ 7 ಗಂಟೆಗೆ ಅವರಿಗೆ ಹೃದಯಾಘಾತವಾಗಿದೆ. ಅವರ ನಿಧನದಿಂದ ಪಕ್ಷ ಮತ್ತು ಸಮುದಾಯಕ್ಕೆ ಗಮನಾರ್ಹ ನಷ್ಟವಾಗಿದೆ ಎಂದು ಹೇಳಿದ್ದಾರೆ.

ಬುಖಾರಿ ಅವರು ಕಳೆದ ಫೆಬ್ರವರಿಯಲ್ಲಿ ಬಿಜೆಪಿ ಸೇರಿದ್ದರು ಮತ್ತು ಸುರನ್‌ಕೋಟೆಯಿಂದ ಕೇಸರಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಸೆಪ್ಟೆಂಬರ್ 25 ರಂದು ಸುರನ್‌ಕೋಟೆ ಸೇರಿದಂತೆ 25 ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!