ಪವನ್ ಕಲ್ಯಾಣ್ ಹಾಗೂ ಪುತ್ರಿ 
ದೇಶ

ತಿಮ್ಮಪ್ಪನ ಮೇಲೆ ನಂಬಿಕೆ ಇದೆ: ತಿರುಪತಿ ದೇವಸ್ಥಾನ ಪ್ರವೇಶಕ್ಕೂ ಮುನ್ನ ಪವನ್ ಕಲ್ಯಾಣ್ ಪುತ್ರಿ ಘೋಷಣೆ

ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುವ ಹಿಂದೂಯೇತರರು ಮೊದಲು ದೇವರಲ್ಲಿ ನಂಬಿಕೆ ಇದೆ ಘೋಷಿಸುವುದು ಕಡ್ಡಾಯವಾಗಿದೆ.

ತಿರುಪತಿ: ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಪುತ್ರಿ ಬುಧವಾರ ತಿರುಮಲ ದೇವಸ್ಥಾನ ಪ್ರವೇಶಿಸುವ ಮುನ್ನ ವೆಂಕಟೇಶ್ವರನ ಮೇಲೆ ನಂಬಿಕೆ ಇದೆ ಎಂದು ಘೋಷಿಸಿದ್ದಾರೆ.

ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುವ ಹಿಂದೂಯೇತರರು ಮೊದಲು ದೇವರಲ್ಲಿ ನಂಬಿಕೆ ಇದೆ ಘೋಷಿಸುವುದು ಕಡ್ಡಾಯವಾಗಿದೆ. ಹೀಗಾಗಿ ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಅವರ ಕಿರಿಯ ಪುತ್ರಿ ಪಲಿನಾ ಅಂಜನಿ ಕೊನಿಡೆಲಾ ಅವರು ಹಿಂದೂಯೇತರರಾಗಿದ್ದು, ತಮ್ಮ ನಂಬಿಕೆ ಘೋಷಣೆ ಮಾಡಿದ್ದಾರೆ ಎಂದು ವರದಿಯಾಗಿದೆ.

ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) ಸಿಬ್ಬಂದಿ ನೀಡಿದ ದಾಖಲೆಗಳಿಗೆ ಸಹಿ ಹಾಕುವ ಮೂಲಕ ಪಲಿನಾ ವೆಂಕಟೇಶ್ವರನಲ್ಲಿ ಭಕ್ತಿ ಹಾಗೂ ನಂಬಿಕೆ ಇರುವುದಾಗಿ ಘೋಷಿಸಿದ್ದಾರೆ.

ಪಲಿನಾ ಅಂಜನಿ ಅವರು ಅಪ್ರಾಪ್ತರಾಗಿರುವುದರಿಂದ ಅವರ ತಂದೆ ಪವನ್ ಕಲ್ಯಾಣ್ ಅವರು ದಾಖಲೆಗಳನ್ನು ಅನುಮೋದಿಸಿದ್ದಾರೆ" ಎಂದು ಜನಸೇನಾ ಪಕ್ಷ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಸ್ತುತ, ಪವನ್ ಕಲ್ಯಾಣ್ ಅವರು ತಿರುಪತಿ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಬಳಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ದೇವಸ್ಥಾನ ಶುದ್ಧೀಕರಣಕ್ಕಾಗಿ ಮತ್ತು ಪಾಪಗಳಿಗೆ ಪ್ರಾಯಶ್ಚಿತ್ತಕ್ಕಾಗಿ 11 ದಿನಗಳ ದೀಕ್ಷೆಯ ಭಾಗವಾಗಿ ದೇವಾಲಯಕ್ಕೆ ಮೂರು ದಿನಗಳ ಭೇಟಿಯಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT