ವಿನೇಶ್ ಫೋಗಟ್, ಪ್ರಧಾನಿ ಮೋದಿ ಸಾಂದರ್ಭಿಕ ಚಿತ್ರ 
ದೇಶ

ಪ್ಯಾರಿಸ್ ಒಲಿಂಪಿಕ್ಸ್ ನಿಂದ ಅನರ್ಹಗೊಂಡ ಬಳಿಕ ಪ್ರಧಾನಿ ಕರೆ ಸ್ವೀಕರಿಸದ ವಿನೇಶ್ ಫೋಗಟ್; ಕಾರಣ ಬಹಿರಂಗ!

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಫೈನಲ್ ಪ್ರವೇಶಿಸಿದ್ದ ಕುಸ್ತಿಪಟು ವಿನೇಶ್ ಫೋಗಟ್ ಅಧಿಕ ತೂಕದ ಕಾರಣಕ್ಕಾಗಿ ಮಹಿಳೆಯರ 50 ಕೆಜಿ ಕುಸ್ತಿಯಿಂದ ಅನರ್ಹಗೊಂಡಿದ್ದರು.

ನವದೆಹಲಿ: 2024 ರ ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಅನರ್ಹಗೊಂಡ ನಂತರ ಪ್ರಧಾನಿ ನರೇಂದ್ರ ಮೋದಿ ನನಗೆ ಫೋನ್ ಕರೆ ಮಾಡಿದ್ದರು. ಆದರೆ ನಾನು ಅವರ ಕರೆ ಸ್ವೀಕರಿಸಲಿಲ್ಲ ಎಂದು ಭಾರತ ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ಹೇಳಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಫೈನಲ್ ಪ್ರವೇಶಿಸಿದ್ದ ಕುಸ್ತಿಪಟು ವಿನೇಶ್ ಫೋಗಟ್ ಅಧಿಕ ತೂಕದ ಕಾರಣಕ್ಕಾಗಿ ಮಹಿಳೆಯರ 50 ಕೆಜಿ ಕುಸ್ತಿಯಿಂದ ಅನರ್ಹಗೊಂಡಿದ್ದರು. ಈಗ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಜೂಲಾನಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಫೋಗಟ್, ಪ್ರಧಾನಿಯಿಂದ ಕರೆ ಬಂದಿತ್ತು ಆದರೆ ನಾನು ಮಾತನಾಡಲು ನಿರಾಕರಿಸಿದೆ ಎಂದು ಲಾಲನ್​​ಟಾಪ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಕರೆ ನೇರವಾಗಿ ನನಗೆ ಬಂದಿರಲಿಲ್ಲ ಆದರೆ ಅಲ್ಲಿದ್ದ ಭಾರತೀಯ ಅಧಿಕಾರಿಗಳು ಅವರು (ಪಿಎಂ ಮೋದಿ) ಮಾತನಾಡಲು ಬಯಸಿದ್ದಾರೆ ಎಂದು ನನಗೆ ತಿಳಿಸಿದರು. ನಾನು ಸಿದ್ಧಳಾಗಿದ್ದೆ. ಆದಾಗ್ಯೂ, ಅವರು ಷರತ್ತುಗಳನ್ನು ಹಾಕಿದರು. ಅದೇನೆಂದರೆ ನನ್ನ ತಂಡದಿಂದ ಯಾರೂ ಅಲ್ಲಿರಬಾರದು. ಆದರೆ ಅವರ ಕಡೆಯಿಂದ ಇಬ್ಬರು ಸಾಮಾಜಿಕ ಮಾಧ್ಯಮಕ್ಕಾಗಿ ಸಂಭಾಷಣೆಯನ್ನು ರೆಕಾರ್ಡ್ ಮಾಡುತ್ತಾರೆ ಎಂದು ನನಗೆ ಹೇಳಿದರು. ಹಾಗಾಗಿ ನಾನು ಆ ಕರೆ ಸ್ವೀಕರಿಸಲು ನಿರಾಕರಿಸಿದೆ ಎಂದು ಅವರು ಫೋಗಟ್ ತಿಳಿಸಿದರು.

ನನ್ನ ಭಾವನೆಗಳು ಮತ್ತು ಕಠಿಣ ಪರಿಶ್ರಮವನ್ನು ಸಾಮಾಜಿಕ ಮಾಧ್ಯಮದಲ್ಲಿ ಗೇಲಿ ಮಾಡುವುದು ನನಗೆ ಇಷ್ಟವಿರಲಿಲ್ಲ. ಅವರು ನಿಜವಾಗಿಯೂ ಕ್ರೀಡಾಪಟುಗಳ ಬಗ್ಗೆ ಕಾಳಜಿವಹಿಸಿದ್ದರೆ, ಅದನ್ನು ರೆಕಾರ್ಡ್ ಮಾಡದೆಯೇ ಕರೆ ಮಾಡಬಹುದಿತ್ತು ನಾನು ಕೃತಜ್ಞಳಾಗಿರುತ್ತಿದ್ದೆ. ನಿರೂಪಣೆಯನ್ನು ನಿಯಂತ್ರಿಸಲು ಮೋದಿ ಅವರ ಕಚೇರಿ ಷರತ್ತುಗಳನ್ನು ವಿಧಿಸಿತ್ತು.

ನಾನು ವಿನೇಶ್ ಜೊತೆ ಮಾತನಾಡಿದರೆ ಅವಳು ಕಳೆದ ಎರಡು ವರ್ಷಗಳ ಬಗ್ಗೆ ಕೇಳುತ್ತಾಳೆ ಎಂದು ಅವರಿಗೆ ತಿಳಿದಿರಬಹುದು. ಬಹುಶಃ ಅದಕ್ಕಾಗಿಯೇ ನನ್ನ ಕಡೆಯಿಂದ ಯಾವುದೇ ಫೋನ್ ಇರುವುದಿಲ್ಲ ಎಂದು ನನಗೆ ಸೂಚಿಸಲಾಗಿತ್ತು. ಏಕೆಂದರೆ ಕೊನೆಯಲ್ಲಿ ಅವರು ಎಡಿಟ್ ಮಾಡಬಹುದಿತ್ತು. ಆದರೆ ನಾನು ಎಡಿಟ್ ಮಾಡಲ್ಲ, ನಾನು ಮೂಲ ವಿಡಿಯೊವನ್ನು ಪೋಸ್ಟ್ ಮಾಡುತ್ತೇನೆ. ಹೀಗಾಗಿ ಪ್ರಧಾನಿ ಜೊತೆಗೆ ಮಾತನಾಡಲು ನಿರಾಕರಿಸಿದ್ದಾಗಿ ವಿನೇಶ್ ಫೋಗಟ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT