ಜೈಶಂಕರ್ TNIE
ದೇಶ

ಶ್ರೀಲಂಕಾ ನೂತನ ಅಧ್ಯಕ್ಷ ಡಿಸಾನಾಯಕೆ ಭೇಟಿಯಾಗಲಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್!

ವಿದೇಶಾಂಗ ವ್ಯವಹಾರಗಳ ಸಚಿವ (ಇಎಎಂ) ಡಾ. ಎಸ್. ಜೈಶಂಕರ್ ಅವರು ಅಕ್ಟೋಬರ್ 4ರಂದು ಶ್ರೀಲಂಕಾಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ.

ನವದೆಹಲಿ: ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಶುಕ್ರವಾರ ದ್ವೀಪ ರಾಷ್ಟ್ರಕ್ಕೆ ತಮ್ಮ ಅಧಿಕೃತ ಭೇಟಿಯ ಸಂದರ್ಭದಲ್ಲಿ ಹೊಸದಾಗಿ ಚುನಾಯಿತರಾದ ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ಡಿಸಾನಾಯಕೆ ಮತ್ತು ದೇಶದ ಪ್ರಧಾನಿ ಹರಿಣಿ ಅಮರಸೂರ್ಯ ಅವರನ್ನು ಭೇಟಿಯಾಗಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.

ವಿದೇಶಾಂಗ ವ್ಯವಹಾರಗಳ ಸಚಿವ (ಇಎಎಂ) ಡಾ. ಎಸ್. ಜೈಶಂಕರ್ ಅವರು ಅಕ್ಟೋಬರ್ 4ರಂದು ಶ್ರೀಲಂಕಾಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ. ಭಾರತದ 'ನೆರೆಹೊರೆಯ ಮೊದಲ ನೀತಿ' ಮತ್ತು 'ವಿಷನ್ ಸಾಗರ್'ಗೆ ಅನುಗುಣವಾಗಿ, ಪರಸ್ಪರ ಲಾಭಕ್ಕಾಗಿ ತಮ್ಮ ದೀರ್ಘಾವಧಿಯ ಪಾಲುದಾರಿಕೆಯನ್ನು ಇನ್ನಷ್ಟು ಆಳಗೊಳಿಸಲು ಎರಡೂ ದೇಶಗಳ ಹಂಚಿಕೆಯ ಬದ್ಧತೆಯನ್ನು ಈ ಭೇಟಿ ಒತ್ತಿಹೇಳುತ್ತದೆ. ಶ್ರೀಲಂಕಾದಲ್ಲಿ ಹೊಸ ಸರ್ಕಾರ ರಚನೆಯಾದ ನಂತರ ನೆರೆಯ ದೇಶಕ್ಕೆ ಜೈಶಂಕರ್ ಅವರ ಮೊದಲ ಭೇಟಿ ಇದಾಗಿದೆ.

ಸೆಪ್ಟೆಂಬರ್ 23ರಂದು ಅಧ್ಯಕ್ಷೀಯ ಚುನಾವಣೆಯಲ್ಲಿ ಅವರ ಮೈತ್ರಿಕೂಟದ ವಿಜಯದ ನಂತರ, ಅನುರ ಕುಮಾರ ಡಿಸಾನಾಯಕೆ ಶ್ರೀಲಂಕಾದ ಒಂಬತ್ತನೇ ಹಂಗಾಮಿ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದರು. ಒಂದು ದಿನದ ನಂತರ, ನ್ಯಾಷನಲ್ ಪೀಪಲ್ಸ್ ಪವರ್ (ಎನ್‌ಪಿಪಿ) ಸಂಸದೆ ಹರಿಣಿ ಅಮರಸೂರ್ಯ ಅವರು ದೇಶದ ಹೊಸ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಚಂದ್ರಿಕಾ ಬಂಡಾರನಾಯಕೆ ಕುಮಾರತುಂಗಾ ಮತ್ತು ಸಿರಿಮಾವೋ ಬಂಡಾರನಾಯಕೆ ನಂತರ ಪ್ರಧಾನಿ ಸ್ಥಾನವನ್ನು ಅಲಂಕರಿಸಿದ ಮೂರನೇ ಮಹಿಳೆಯಾಗಿದ್ದಾರೆ.

ಈ ಭೇಟಿಯ ವೇಳೆ ಶ್ರೀಲಂಕಾದ ವಿದೇಶಾಂಗ ವ್ಯವಹಾರಗಳ ಸಚಿವೆ ವಿಜಿತಾ ಹೆರಾತ್ ಅವರೊಂದಿಗೂ ಸಭೆ ನಡೆಸಲಿದೆ. ಸಚಿವ ಜೈಶಂಕರ್ ಅವರೊಂದಿಗೆ ಭಾರತೀಯ ವಿದೇಶಾಂಗ ಸಚಿವಾಲಯದ ಹಿರಿಯ ಅಧಿಕಾರಿಗಳು ಸಹ ಇರಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಂಚ ಪಡೆಯುತ್ತಿದ್ದ ಸಚಿವ ಕೆ.ಜೆ ಜಾರ್ಜ್‌ OSD ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ

Russian strike: ಉಕ್ರೇನ್‌ ರೈಲು ನಿಲ್ದಾಣದಲ್ಲಿ ರಷ್ಯಾ 'ಡ್ರೋನ್' ದಾಳಿ; ಓರ್ವ ಸಾವು, 30 ಮಂದಿಗೆ ಗಾಯ! Video

ಬೆಂಗಳೂರು: ವಿವಾಹಿತರ ಅನೈತಿಕ ಸಂಬಂಧ ಸಾವಿನಲ್ಲಿ ಅಂತ್ಯ; Oyo ರೂಂನಲ್ಲಿ ಮಹಿಳೆ ಆತ್ಮಹತ್ಯೆ!

ಪ್ರಧಾನಿ ಮೋದಿ ಜೊತೆಗಿನ ವರ್ಚುವಲ್ ಸಭೆಯಲ್ಲಿ, ಕೈ ಮುಗಿದು ಕುಳಿತ ನಿತೀಶ್ ಕುಮಾರ್; ವ್ಯಾಪಕ ಟೀಕೆ!: Video

ಜಿಲ್ಲೆಗೊಂದು ಮೆಡಿಕಲ್ ಕಾಲೇಜು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ: ಸಿಎಂ ಸಿದ್ದರಾಮಯ್ಯ

SCROLL FOR NEXT