ತಾರೀಕ್ ಹಮೀದ್ ಕರ್ರಾ  
ದೇಶ

ಜಮ್ಮು ಕಾಶ್ಮೀರದಲ್ಲಿ ಸರ್ಕಾರ ರಚನೆಗೆ ವೇದಿಕೆ ಸಜ್ಜು: ಸಮಾನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿಗೆ ಕಾಂಗ್ರೆಸ್ ಮುಕ್ತ!

ಒಂದು ವೇಳೆ ಕೇಂದ್ರಾಡಳಿತ ಪ್ರದೇಶದಲ್ಲಿ ಸರಕಾರ ರಚಿಸಲು ಸಮಾನ ಮನಸ್ಕ ಪಕ್ಷಗಳು ಹಾಗೂ ವ್ಯಕ್ತಿಗಳ ಬೆಂಬಲದ ಅಗತ್ಯ ಬಿದ್ದರೆ, ನ್ಯಾಷನಲ್ ಕಾನ್ಫರೆನ್ಸ್‌ -ಕಾಂಗ್ರೆಸ್ ಮೈತ್ರಿಕೂಟವು ಅಂಥವರ ಬೆಂಬಲ ಪಡೆಯಲು ಮುಕ್ತವಾಗಿದೆ.

ಶ್ರೀನಗರ: ದಶಕಗಳ ಬಳಿಕ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ ನಡೆದಿದ್ದು, ಸರ್ಕಾರ ರಚನೆಯಾಗಲು ವೇದಿಕೆ ಸಜ್ಜಾಗಿದೆ. ಮೂರು ಹಂತಗಳಲ್ಲಿ ಚುನಾವಣೆ ನಡೆದಿದ್ದು ಶಾಂತಿಯುತವಾಗಿ ಮತದಾನ ನಡೆದಿದೆ. ಸೆಪ್ಟೆಂಬರ್ 18 ರಂದು ಮೊದಲ ಹಂತದಲ್ಲಿ ಚುನಾವಣೆ ನಡೆದಿದ್ದರೆ, ಸೆಪ್ಟೆಂಬರ್ 25ರಂದು ಎರಡನೇ ಹಂತದಲ್ಲಿ ಮತ್ತು ಅಕ್ಟೋಬರ್ 1ರಂದು ಮೂರನೇ ಹಂತದಲ್ಲಿ ಚುನಾವಣೆ ನಡೆದಿದೆ.

ಒಂದು ವೇಳೆ ಕೇಂದ್ರಾಡಳಿತ ಪ್ರದೇಶದಲ್ಲಿ ಸರಕಾರ ರಚಿಸಲು ಸಮಾನ ಮನಸ್ಕ ಪಕ್ಷಗಳು ಹಾಗೂ ವ್ಯಕ್ತಿಗಳ ಬೆಂಬಲದ ಅಗತ್ಯ ಬಿದ್ದರೆ, ನ್ಯಾಷನಲ್ ಕಾನ್ಫರೆನ್ಸ್‌ -ಕಾಂಗ್ರೆಸ್ ಮೈತ್ರಿಕೂಟವು ಅಂಥವರ ಬೆಂಬಲ ಪಡೆಯಲು ಮುಕ್ತವಾಗಿದೆ ಎಂದು ಬುಧವಾರ ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ಘಟಕದ ಮುಖ್ಯಸ್ಥ ತಾರೀಕ್ ಹಮೀದ್ ಕರ್ರಾ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಹಂತದ ಮತದಾನ ಮುಕ್ತಾಯಗೊಂಡ ಮರುದಿನ ಸುದ್ದಿಗಾರರೊಂದಿಗೆ ಮಾತನಾಡಿದ ಕರ್ರಾ, “ಜನರು ಮೈತ್ರಿಕೂಟದ ಪರವಾಗಿ ಅಥವಾ ಬಿಜೆಪಿಯನ್ನು ಅಧಿಕಾರ ಕೇಂದ್ರದಿಂದ ದೂರ ಇಡಲು ಮತ ಚಲಾಯಿಸಿದ್ದು, ಇದು ಉತ್ತಮ ಸಂಗತಿಯಾಗಿದೆ” ಎಂದು ತಿಳಿಸಿದ್ದಾರೆ.

ಒಂದು ವೇಳೆ ಅಗತ್ಯ ಬಿದ್ದರೆ, ನಮ್ಮ ಬಾಗಿಲು ಸಮಾನ ಮನಸ್ಕ ವ್ಯಕ್ತಿಗಳು, ಶಕ್ತಿಗಳು ಹಾಗೂ ಪಕ್ಷಗಳಿಗೆ ಮುಕ್ತವಾಗಿದೆಅಂತಹ ವ್ಯಕ್ತಿಗಳೊಂದಿಗೆ ಮಾತುಕತೆ ನಡೆಸುವ ಕುರಿತು ಮೈತ್ರಿ ಕೂಟದ ಪಾಲುದಾರ ಪಕ್ಷಗಳೊಂದಿಗೆ ನಾವು ಚರ್ಚೆ ನಡೆಸಲಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಪಿಡಿಪಿ ಸಮಾನ ಮನಸ್ಕ ಪಕ್ಷವೆ?” ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಕರ್ರಾ, ನಾನು ಯಾರ ಅರ್ಹತೆಯ ಕುರಿತೂ ಮಾತನಾಡಲು ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ನಾನು ಬಿಜೆಪಿಯ ಪ್ರತಿಗಾಮಿ, ದೌರ್ಜನ್ಯಕಾರಿ ನೀತಿಗಳ ವಿರುದ್ಧವಿರುವ ಸಮಾನ ಮನಸ್ಕರು ಎಂದಷ್ಟೆ ಹೇಳಿದ್ದೇನೆ” ಎಂದೂ ಅವರು ತಿಳಿಸಿದ್ದಾರೆ.

ಯಾವುದೇ ಜಾತ್ಯತೀತ ಸರ್ಕಾರಕ್ಕೆ ತಮ್ಮ ಪಕ್ಷ ಬೆಂಬಲ ನೀಡಲಿದೆ ಎಂದು ಪಿಡಿಪಿ ಮುಖ್ಯಸ್ಥೆ ಹಾಗೂ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಹೇಳಿದ್ದಾರೆ. ಮೆಹಬೂಬಾ ಅವರ ಪಿಡಿಪಿ ಎನ್‌ಸಿ-ಕಾಂಗ್ರೆಸ್ ಮೈತ್ರಿಕೂಟದ ಭಾಗವಾಗಲು ಬಯಸಿತು. ಆದರೆ ಎನ್‌ಸಿ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರ ಬಲವಾದ ವಿರೋಧದ ನಂತರ, ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಪಕ್ಷವನ್ನು ಮೈತ್ರಿಯಿಂದ ಹೊರಗಿಡಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT