ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕರು ಬಲಚಿತ್ರದಲ್ಲಿ(ಸಂಗ್ರಹ ಚಿತ್ರ) online desk
ದೇಶ

ನಗರ ನಕ್ಸಲರ ಗ್ಯಾಂಗ್ ನಿಂದ ಕಾಂಗ್ರೆಸ್ ನಡೆಯುತ್ತಿದೆ: ನರೇಂದ್ರ ಮೋದಿ

"ಭಾರತಕ್ಕಾಗಿ ಒಳ್ಳೆಯ ಉದ್ದೇಶವನ್ನು ಹೊಂದಿರದ ಜನರೊಂದಿಗೆ ಕಾಂಗ್ರೆಸ್ ಎಷ್ಟು ನಿಕಟವಾಗಿ ನಿಂತಿದೆ ಎಂಬುದನ್ನು ಎಲ್ಲರೂ ನೋಡಬಹುದು" ಎಂದು ಮೋದಿ ವ್ಯಂಗ್ಯವಾಡಿದ್ದಾರೆ.

ಮುಂಬೈ: ಕಾಂಗ್ರೆಸ್ ಪಕ್ಷ ನಗರ ನಕ್ಸಲರ ಗ್ಯಾಂಗ್ ನಿಂದ ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಅಪಾಯಕಾರಿ ಅಜೆಂಡಾವನ್ನು ಮಣಿಸುವುದಕ್ಕಾಗಿ ಒಟ್ಟಾಗುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

"ನಾವೆಲ್ಲರೂ ಒಗ್ಗೂಡಿದರೆ, ದೇಶವನ್ನು ವಿಭಜಿಸುವ ಅವರ ಕಾರ್ಯಸೂಚಿ ವಿಫಲಗೊಳ್ಳುತ್ತದೆ ಎಂದು ಅವರು (ಕಾಂಗ್ರೆಸ್ ನವರು) ಭಾವಿಸಿದ್ದಾರೆ" ಎಂದು ಮೋದಿ ಮಹಾರಾಷ್ಟ್ರದ ವಾಶಿಮ್ ಜಿಲ್ಲೆಯಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ನಂತರ ಸಭೆಯನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಆರೋಪಿಸಿದ್ದಾರೆ.

"ಭಾರತಕ್ಕಾಗಿ ಒಳ್ಳೆಯ ಉದ್ದೇಶವನ್ನು ಹೊಂದಿರದ ಜನರೊಂದಿಗೆ ಕಾಂಗ್ರೆಸ್ ಎಷ್ಟು ನಿಕಟವಾಗಿ ನಿಂತಿದೆ ಎಂಬುದನ್ನು ಎಲ್ಲರೂ ನೋಡಬಹುದು" ಎಂದು ಮೋದಿ ವ್ಯಂಗ್ಯವಾಡಿದ್ದಾರೆ.

ಇತ್ತೀಚೆಗಷ್ಟೇ ದೆಹಲಿಯಲ್ಲಿ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದ್ದು, ಕಾಂಗ್ರೆಸ್ ಮುಖಂಡರೊಬ್ಬರು ಕಿಂಗ್ ಪಿನ್ ಆಗಿರುವ ಶಂಕೆ ವ್ಯಕ್ತವಾಗಿದೆ. ಯುವಕರನ್ನು ಡ್ರಗ್ಸ್ ಕಡೆಗೆ ತಳ್ಳಿ ಬರುವ ಹಣದಿಂದ ಚುನಾವಣೆ ಎದುರಿಸಲು ಕಾಂಗ್ರೆಸ್ ಬಯಸಿದೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್‌ನ ಚಿಂತನೆ ಮೊದಲಿನಿಂದಲೂ ಪರಕೀಯವಾಗಿದೆ ಎಂದು ಮೋದಿ ಹೇಳಿದ್ದು, ಬ್ರಿಟಿಷರ ಆಡಳಿತದಂತೆ ಈ ಕಾಂಗ್ರೆಸ್ ಕುಟುಂಬವೂ ದಲಿತರು, ಹಿಂದುಳಿದವರು, ಆದಿವಾಸಿಗಳನ್ನು ಸಮಾನರೆಂದು ಪರಿಗಣಿಸುವುದಿಲ್ಲ ಎಂದು ಆರೋಪಿಸಿದ್ದಾರೆ.

ಭಾರತವನ್ನು ಒಂದೇ ಕುಟುಂಬ ಆಳಬೇಕು ಎಂದು ಕಾಂಗ್ರೆಸ್ ನವರು ಭಾವಿಸುತ್ತಾರೆ. ಆದ್ದರಿಂದಲೇ ಅವರು ಬಂಜಾರ ಸಮುದಾಯದ ಬಗ್ಗೆ ಯಾವಾಗಲೂ ಅವಹೇಳನಕಾರಿ ಧೋರಣೆ ತಾಳಿದ್ದಾರೆ'' ಎಂದು ಮೋದಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ