ಮೇಘಾಲಯದಲ್ಲಿ ಪ್ರವಾಹ 
ದೇಶ

ಮೇಘಾಲಯದಲ್ಲಿ ಪ್ರವಾಹ, ಭೂಕುಸಿತ; 10 ಮಂದಿ ಸಾವು: ಪರಿಸ್ಥಿತಿ ಪರಿಶೀಲಿಸಿದ ಸಿಎಂ ಸಂಗ್ಮಾ

ಗಾರೋ ಹಿಲ್ಸ್‌ನ ಎಲ್ಲಾ ಐದು ಜಿಲ್ಲೆಗಳು ಪ್ರವಾಹ ಪೀಡಿತವಾಗಿದ್ದು, ಪಶ್ಚಿಮ ಗಾರೋ ಹಿಲ್ಸ್(ಮೂರು) ಮತ್ತು ದಕ್ಷಿಣ ಗ್ಯಾರೋ ಹಿಲ್ಸ್(ಏಳು)ನಲ್ಲಿ ಸಾವುಗಳು ವರದಿಯಾಗಿವೆ.

ಗುವಾಹಟಿ: ಮೇಘಾಲಯದ ಗಾರೋ ಹಿಲ್ಸ್ ಪ್ರದೇಶದಲ್ಲಿ ಭಾರೀ ಮಳೆಯಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತದಲ್ಲಿ ಶನಿವಾರ ಕನಿಷ್ಠ 10 ಜನ ಮೃತಪಟ್ಟಿದ್ದಾರೆ.

ಗಾರೋ ಹಿಲ್ಸ್‌ನ ಎಲ್ಲಾ ಐದು ಜಿಲ್ಲೆಗಳು ಪ್ರವಾಹ ಪೀಡಿತವಾಗಿದ್ದು, ಪಶ್ಚಿಮ ಗಾರೋ ಹಿಲ್ಸ್(ಮೂರು) ಮತ್ತು ದಕ್ಷಿಣ ಗ್ಯಾರೋ ಹಿಲ್ಸ್(ಏಳು)ನಲ್ಲಿ ಸಾವುಗಳು ವರದಿಯಾಗಿವೆ.

ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ಅವರು ಇಂದು ಬೆಳಗ್ಗೆ ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಿದರು.

ಶುಕ್ರವಾರ ಮಧ್ಯರಾತ್ರಿಯಿಂದ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ದಲು ಪ್ರದೇಶ ಹಾಗೂ ಪಶ್ಚಿಮ ಗಾರೋ ಬೆಟ್ಟಗಳ ಬಯಲು ಸೀಮೆಯಲ್ಲಿ ಪ್ರವಾಹ ಉಂಟಾಗಿದೆ ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ದಕ್ಷಿಣ ಗಾರೋ ಹಿಲ್ಸ್‌ನಲ್ಲಿರುವ ಗಾಸುಪಾರಾದಲ್ಲೂ ಪ್ರವಾಹ ಅತ್ಯಂತ ಕೆಟ್ಟ ಪರಿಣಾಮ ಬೀರಿದೆ. ಅಲ್ಲಿ ಸೇತುವೆಯೊಂದು ಕೊಚ್ಚಿಹೋಗಿದೆ ಎಂದು ಮುಖ್ಯಮಂತ್ರಿಗಳ ಕಚೇರಿ ಹೇಳಿದೆ.

“ದಲುವಿನಲ್ಲಿ ಮೂವರು ನಾಗರಿಕರು ಪ್ರಾಣ ಕಳೆದುಕೊಂಡಿದ್ದು, ಮೃತರ ಸಂಬಂಧಿಕರಿಗೆ(ಮೃತರ) ಸೂಕ್ತ ಪರಿಹಾರ ಬಿಡುಗಡೆ ಮಾಡಲು ಮುಖ್ಯಮಂತ್ರಿಗಳು, ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ” ಎಂದು ಪ್ರಕಟಣೆ ತಿಳಿಸಿದೆ.

“ಗಸುವಾಪಾರ ಪೊಲೀಸ್ ಠಾಣೆ ವ್ಯಾಪ್ತಿಯ ಹತಿಯಾಸಿಯಾ ಸಂಗ್ಮಾ ಎಂಬ ಗ್ರಾಮದಲ್ಲಿ ಏಳು ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ ” ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT