ಮೋಹನ್ ಭಾಗವತ್ 
ದೇಶ

ಹಿಂದೂ ಸಮಾಜ ತನ್ನ ಸುರಕ್ಷತೆಗಾಗಿ ಒಂದಾಗಬೇಕು: ಮೋಹನ್ ಭಾಗವತ್

ಹಿಂದೂಗಳು ಪ್ರತಿಯೊಬ್ಬರನ್ನು ತಮ್ಮವರೆಂದು ಪರಿಗಣಿಸುತ್ತಾರೆ ಮತ್ತು ಎಲ್ಲರನ್ನೂ ಅಪ್ಪಿಕೊಳ್ಳುತ್ತಾರೆ. ಹಿಂದೂ ಎಂಬ ಪದ ನಂತರ ಬಂದರೂ ಪ್ರಾಚೀನ ಕಾಲದಿಂದಲೂ ನಾನು ಇಲ್ಲಿ ವಾಸಿಸುತ್ತಿದ್ದೇವೆ. ಹಿಂದೂಗಳು ಎಲ್ಲರನ್ನೂ ಅಪ್ಪಿಕೊಳ್ಳುತ್ತಾರೆ. ನಿರಂತರ ಸಂವಾದದ ಮೂಲಕ ಸೌಹಾರ್ದತೆಯಿಂದ ಬಾಳುತ್ತಾರೆ

ಬರಾನ್: ಭಾರತ ಹಿಂದೂ ರಾಷ್ಟ್ರ ಎಂದು ಪ್ರತಿಪಾದಿಸಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್, ಭಾಷೆ, ಜಾತಿ ಮತ್ತು ಪ್ರಾದೇಶಿಕ ವಿವಾದಗಳನ್ನು ತೊಡೆದುಹಾಕುವ ಮೂಲಕ ಹಿಂದೂ ಸಮಾಜ ತನ್ನ ಸುರಕ್ಷತೆಗಾಗಿ ಒಂದಾಗಬೇಕು ಎಂದು ಕರೆ ನೀಡಿದ್ದಾರೆ.

ರಾಜಸ್ಥಾನದ ಬರಾನ್‌ನಲ್ಲಿ ನಡೆದ 'ಸ್ವಯಂಸೇವಕ ಏಕತ್ರಿಕರಣ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಭಾಗವತ್ ' ಹಿಂದೂಗಳು ಪ್ರತಿಯೊಬ್ಬರನ್ನು ತಮ್ಮವರೆಂದು ಪರಿಗಣಿಸುತ್ತಾರೆ ಮತ್ತು ಎಲ್ಲರನ್ನೂ ಅಪ್ಪಿಕೊಳ್ಳುತ್ತಾರೆ. ಹಿಂದೂ ಎಂಬ ಪದ ನಂತರ ಬಂದರೂ ಪ್ರಾಚೀನ ಕಾಲದಿಂದಲೂ ನಾನು ಇಲ್ಲಿ ವಾಸಿಸುತ್ತಿದ್ದೇವೆ. ಹಿಂದೂಗಳು ಎಲ್ಲರನ್ನೂ ಅಪ್ಪಿಕೊಳ್ಳುತ್ತಾರೆ. ನಿರಂತರ ಸಂವಾದದ ಮೂಲಕ ಸೌಹಾರ್ದತೆಯಿಂದ ಬಾಳುತ್ತಾರೆ. ಭಾಷೆ, ಜಾತಿ ಮತ್ತು ಪ್ರಾದೇಶಿಕ ಭಿನ್ನತೆಗಳು, ವಿವಾದಗಳನ್ನು ತೊಡೆದುಹಾಕುವ ಮೂಲಕ ಹಿಂದೂ ಸಮಾಜ ತನ್ನ ಭದ್ರತೆಗಾಗಿ ಒಂದಾಗಬೇಕು ಎಂದು ಒತ್ತಿ ಹೇಳಿದರು.

ಶಿಸ್ತು, ಕರ್ತವ್ಯ ಮತ್ತು ಗುರಿಗಳ ಕಡೆಗೆ ಸಮರ್ಪಣೆ ಅತ್ಯಗತ್ಯವಾಗಿದೆ. ಸಮಾಜವು ಕೇವಲ ವ್ಯಕ್ತಿಗಳು, ಅವರ ಕುಟುಂಬಗಳಿಂದ ರೂಪುಗೊಂಡಿಲ್ಲ, ಆದರೆ ಸಮಗ್ರ ಕಾಳಜಿಯನ್ನು ಪರಿಗಣಿಸುವ ಮೂಲಕ ಆಧ್ಯಾತ್ಮಿಕ ಸಾಧನೆಯನ್ನು ಸಾಧಿಸಬಹುದು ಎಂದು ಭಾಗವತ್ ಹೇಳಿದರು.

ಆರ್‌ಎಸ್‌ಎಸ್‌ನ ಕಾರ್ಯಚಟುವಟಿಕೆಯು ಯಾಂತ್ರಿಕವಲ್ಲ ಆದರೆ ಕಲ್ಪನೆ ಆಧಾರಿತವಾಗಿದೆ. ಇದು ಅಪ್ರತಿಮ ಸಂಸ್ಥೆಯಾಗಿದ್ದು, ಅದರ ಮೌಲ್ಯಗಳು ಗುಂಪಿನ ನಾಯಕರಿಂದ ಸ್ವಯಂಸೇವಕರು, ಅವರ ಕುಟುಂಬಗಳು ಮತ್ತು ಸಮಾಜದಲ್ಲಿ ದೊಡ್ಡ ಪ್ರಮಾಣದಲ್ಲಿ ಹರಡಿದೆ. ಸಮುದಾಯಗಳಲ್ಲಿ ವ್ಯಾಪಕ ಸಂಪರ್ಕವನ್ನು ಕಾಪಾಡಿಕೊಳ್ಳಲು ಸ್ವಯಂಸೇವಕರನ್ನು ಒತ್ತಾಯಿಸಿದ ಮೋಹನ್ ಭಾಗವತ್, ಸಮಾಜವನ್ನು ಸಶಕ್ತಗೊಳಿಸುವ ಮೂಲಕ ಸಮುದಾಯದ ಕೊರತೆಗಳನ್ನು ನಿವಾರಿಸಲು ಪ್ರಯತ್ನಿಸಬೇಕು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT