ಯತಿ ನರಸಿಂಹಾನಂದ  
ದೇಶ

ಪ್ರವಾದಿ ಮೊಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಯತಿ ನರಸಿಂಹಾನಂದ ವಿರುದ್ಧ ಪ್ರಕರಣ ದಾಖಲು

ಐಟಿ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಓವೈಸಿ ಅವರು ದೂರಿನ ಪ್ರತಿ ಮತ್ತು ಎಫ್‌ಐಆರ್ ಅನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.

ಹೈದರಾಬಾದ್: ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಉತ್ತರ ಪ್ರದೇಶದ ದೇವಾಲಯವೊಂದರ ಪ್ರಧಾನ ಅರ್ಚಕ ಯತಿ ನರಸಿಂಹಾನಂದ ವಿರುದ್ಧ ಹೈದರಾಬಾದ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಈ ಸಂಬಂಧ ಎಐಎಂಇಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ದೂರು ನೀಡಿದ್ದರು.

ಐಟಿ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಓವೈಸಿ ಅವರು ದೂರಿನ ಪ್ರತಿ ಮತ್ತು ಎಫ್‌ಐಆರ್ ಅನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.

ಇದಕ್ಕೂ ಮುನ್ನ ಸ್ವಾಮೀಜಿ ವಿರುದ್ಧ ಪಕ್ಷದ ನಾಯಕರೊಂದಿಗೆ ಪ್ರತಿಭಟನೆ ನಡೆಸಿದ ಓವೈಸಿ, AIMIM ನ ದೂರನ್ನು ಕ್ರಮಕ್ಕಾಗಿ ಸೈಬರ್ ಸೆಲ್‌ಗೆ ರವಾನಿಸಲಾಗಿದೆ. ಯತಿ ನರಸಿಂಹಾನಂದ ಅವರು ದ್ವೇಷದ ಭಾಷಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜೈಲು ಪಾಲಾಗಿದ್ದರು. ಇಂತಹ ಹೇಳಿಕೆ ನೀಡದಂತೆ ಷರತ್ತಿನೊಂದಿಗೆ ಅವರಿಗೆ ಜಾಮೀನು ನೀಡಲಾಗಿತ್ತು. ಆದರೆ, ಈಗ ಮತ್ತೆ ಅದೇ ರೀತಿಯ ಹೇಳಿಕೆ ನೀಡುತ್ತಿರುವುದರಿಂದ ಯತಿ ನರಸಿಂಹಾನಂದ ಅವರ ಜಾಮೀನು ರದ್ದುಗೊಳಿಸಬೇಕು ಎಂದು ಎಐಎಂಐಎಂ ಆಗ್ರಹಿಸಿದೆ ಎಂದರು.

ಎಐಎಂಐಎಂ ತನ್ನ ಪೊಲೀಸ್ ದೂರಿನಲ್ಲಿ ಯತಿ ನರಸಿಂಗಾನಂದ ಮಾಡಿದ ಕೆಲವು ಹೇಳಿಕೆಗಳನ್ನು ಉಲ್ಲೇಖಿಸಿದೆ. ಅಂತಹ ಟೀಕೆಗಳು ಪ್ರಾಥಮಿಕವಾಗಿ ದ್ವೇಷದ ಮಾತು ಎಂದು ಹೇಳಿದೆ. ಹೈದರಾಬಾದ್ ಸಂಸದರೂ ಆಗಿರುವ ಓವೈಸಿ, ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿ, ಯಾರಾದರೂ ದ್ವೇಷಪೂರಿತ ಭಾಷಣ ಮಾಡಿದಾಗ ಸ್ವಯಂಪ್ರೇರಿತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಇದಲ್ಲದೆ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಕೋರಲಾಗಿದೆ. ರಸಿಂಹಾನಂದರಂತಹ ಜನರು ಇಸ್ಲಾಂ ಧರ್ಮವನ್ನು ಗುರಿಯಾಗಿಸಿಕೊಂಡು ಸುಳ್ಳು ಮತ್ತು ನಿಷ್ಪ್ರಯೋಜಕ ಹೇಳಿಕೆ ನೀಡುವುದು ಸಾಮಾನ್ಯ ಅಭ್ಯಾಸವಾಗಿದೆ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT