ಯತಿ ನರಸಿಂಹಾನಂದ  
ದೇಶ

ಪ್ರವಾದಿ ಮೊಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಯತಿ ನರಸಿಂಹಾನಂದ ವಿರುದ್ಧ ಪ್ರಕರಣ ದಾಖಲು

ಐಟಿ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಓವೈಸಿ ಅವರು ದೂರಿನ ಪ್ರತಿ ಮತ್ತು ಎಫ್‌ಐಆರ್ ಅನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.

ಹೈದರಾಬಾದ್: ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಉತ್ತರ ಪ್ರದೇಶದ ದೇವಾಲಯವೊಂದರ ಪ್ರಧಾನ ಅರ್ಚಕ ಯತಿ ನರಸಿಂಹಾನಂದ ವಿರುದ್ಧ ಹೈದರಾಬಾದ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಈ ಸಂಬಂಧ ಎಐಎಂಇಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ದೂರು ನೀಡಿದ್ದರು.

ಐಟಿ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಓವೈಸಿ ಅವರು ದೂರಿನ ಪ್ರತಿ ಮತ್ತು ಎಫ್‌ಐಆರ್ ಅನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.

ಇದಕ್ಕೂ ಮುನ್ನ ಸ್ವಾಮೀಜಿ ವಿರುದ್ಧ ಪಕ್ಷದ ನಾಯಕರೊಂದಿಗೆ ಪ್ರತಿಭಟನೆ ನಡೆಸಿದ ಓವೈಸಿ, AIMIM ನ ದೂರನ್ನು ಕ್ರಮಕ್ಕಾಗಿ ಸೈಬರ್ ಸೆಲ್‌ಗೆ ರವಾನಿಸಲಾಗಿದೆ. ಯತಿ ನರಸಿಂಹಾನಂದ ಅವರು ದ್ವೇಷದ ಭಾಷಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜೈಲು ಪಾಲಾಗಿದ್ದರು. ಇಂತಹ ಹೇಳಿಕೆ ನೀಡದಂತೆ ಷರತ್ತಿನೊಂದಿಗೆ ಅವರಿಗೆ ಜಾಮೀನು ನೀಡಲಾಗಿತ್ತು. ಆದರೆ, ಈಗ ಮತ್ತೆ ಅದೇ ರೀತಿಯ ಹೇಳಿಕೆ ನೀಡುತ್ತಿರುವುದರಿಂದ ಯತಿ ನರಸಿಂಹಾನಂದ ಅವರ ಜಾಮೀನು ರದ್ದುಗೊಳಿಸಬೇಕು ಎಂದು ಎಐಎಂಐಎಂ ಆಗ್ರಹಿಸಿದೆ ಎಂದರು.

ಎಐಎಂಐಎಂ ತನ್ನ ಪೊಲೀಸ್ ದೂರಿನಲ್ಲಿ ಯತಿ ನರಸಿಂಗಾನಂದ ಮಾಡಿದ ಕೆಲವು ಹೇಳಿಕೆಗಳನ್ನು ಉಲ್ಲೇಖಿಸಿದೆ. ಅಂತಹ ಟೀಕೆಗಳು ಪ್ರಾಥಮಿಕವಾಗಿ ದ್ವೇಷದ ಮಾತು ಎಂದು ಹೇಳಿದೆ. ಹೈದರಾಬಾದ್ ಸಂಸದರೂ ಆಗಿರುವ ಓವೈಸಿ, ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿ, ಯಾರಾದರೂ ದ್ವೇಷಪೂರಿತ ಭಾಷಣ ಮಾಡಿದಾಗ ಸ್ವಯಂಪ್ರೇರಿತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಇದಲ್ಲದೆ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಕೋರಲಾಗಿದೆ. ರಸಿಂಹಾನಂದರಂತಹ ಜನರು ಇಸ್ಲಾಂ ಧರ್ಮವನ್ನು ಗುರಿಯಾಗಿಸಿಕೊಂಡು ಸುಳ್ಳು ಮತ್ತು ನಿಷ್ಪ್ರಯೋಜಕ ಹೇಳಿಕೆ ನೀಡುವುದು ಸಾಮಾನ್ಯ ಅಭ್ಯಾಸವಾಗಿದೆ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT