ಜಾನಿ ಮಾಸ್ಟರ್ 
ದೇಶ

ಲೈಂಗಿಕ ಕಿರುಕುಳ ಆರೋಪ: ಜಾನಿ ಮಾಸ್ಟರ್ ಗೆ ಘೋಷಣೆಯಾಗಿದ್ದ ರಾಷ್ಟ್ರೀಯ ಪ್ರಶಸ್ತಿ ಅಮಾನತು

ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಅವರ ನಿಜವಾದ ಹೆಸರು ಶೇಕ್ ಜಾನಿ ಬಾಷಾ. ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ ಪ್ರಕರಣದಡಿ ಅವರನ್ನು ಸೈಬರಾಬಾದ್ ಪೊಲೀಸರು ಸೆಪ್ಟೆಂಬರ್ 19 ರಂದು ಗೋವಾದಲ್ಲಿ ಬಂಧಿಸಿದ ನಂತರ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ನವದೆಹಲಿ: ಅತ್ಯಾಚಾರ ಆರೋಪ ಎದುರಿಸುತ್ತಿರುವ ಹೆಸರಾಂತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಅವರಿಗೆ ಘೋಷಿಸಲಾಗಿದ್ದ ರಾಷ್ಟ್ರೀಯ ಪ್ರಶಸ್ತಿಯನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಅಮಾನತು ಮಾಡಿದೆ ಎಂದು ವರದಿಯಾಗಿದೆ.

ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಅವರ ನಿಜವಾದ ಹೆಸರು ಶೇಕ್ ಜಾನಿ ಬಾಷಾ. ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ ಪ್ರಕರಣದಡಿ ಅವರನ್ನು ಸೈಬರಾಬಾದ್ ಪೊಲೀಸರು ಸೆಪ್ಟೆಂಬರ್ 19 ರಂದು ಗೋವಾದಲ್ಲಿ ಬಂಧಿಸಿದ ನಂತರ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಆದರೆ, ಅಕ್ಟೋಬರ್ 3 ರಂದು ರಾಷ್ಟ್ರೀಯ ಪ್ರಶಸ್ತಿ ಬಂದಿದ್ದರಿಂದ ಅದರ ಸ್ವೀಕಾರ ಸಮಾರಂಭಕ್ಕೆ ತೆರಳಲು ಇತ್ತೀಚಿಗೆ ಮಧ್ಯಂತರ ಜಾಮೀನು ಪಡೆದಿದ್ದರು.

'ತಿರುಚಿತ್ರಂಬಲಂ' ಚಿತ್ರದ ಮೇಘಮ್ ಕರುಕ್ಕಥಾ ಹಾಡಿಗೆ ಅತ್ಯುತ್ತಮ ನೃತ್ಯ ಸಂಯೋಜನೆಗಾಗಿ ಅವರು ರಾಷ್ಟ್ರೀಯ ಪ್ರಶಸ್ತಿ ಗೆದ್ದಿದ್ದರು. ಇದೀಗ ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಇದೀಗ ಅವರ ರಾಷ್ಟ್ರೀಯ ಪ್ರಶಸ್ತಿಯನ್ನು ಅಮಾನತುಗೊಳಿಸಿದೆ.

ಅಕ್ಟೋಬರ್ 8 ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳಲು ಜಾನಿ ಮಾಸ್ಟರ್ ಅವರಿಗೆ ನೀಡಿದ್ದ ಆಹ್ವಾನವನ್ನೂ ಹಿಂತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

SCROLL FOR NEXT