ಮೃತಪಟ್ಟ ನವಿಲಿನ ಚಿತ್ರ 
ದೇಶ

ಉತ್ತರ ಪ್ರದೇಶ: ಏಳು ನವಿಲುಗಳು ಸಾವು, ವಿಷ ಪ್ರಾಶನದ ಶಂಕೆ!

ಭಿಕ್ಕವಾಲೆ ಗ್ರಾಮದ ಮೋರಿ ಬಳಿಯ ಹೊಲದಲ್ಲಿ ಶನಿವಾರ ಸಂಜೆ ಹೆಣ್ಣು ನವಿಲು ಸೇರಿದಂತೆ ಏಳು ನವಿಲುಗಳ ಮೃತದೇಹ ಪತ್ತೆಯಾಗಿದೆ ಎಂದು ವಿಭಾಗೀಯ ಅರಣ್ಯಾಧಿಕಾರಿ ಜ್ಞಾನ್ ಸಿಂಗ್ ತಿಳಿಸಿದ್ದಾರೆ.

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯ ಹೊಲವೊಂದರಲ್ಲಿ ಏಳು ನವಿಲುಗಳು ಸಾವನ್ನಪ್ಪಿವೆ. ವಿಷ ಪ್ರಾಶನದಿಂದ ಈ ನವಿಲುಗಳು ಸಾವನ್ನಪ್ಪಿರಬಹುದೆಂಬ ಅನುಮಾನ ಇರುವುದಾಗಿ ಅರಣ್ಯ ಇಲಾಖೆ ಭಾನುವಾರ ತಿಳಿಸಿದೆ.

ಭಿಕ್ಕವಾಲೆ ಗ್ರಾಮದ ಮೋರಿ ಬಳಿಯ ಹೊಲದಲ್ಲಿ ಶನಿವಾರ ಸಂಜೆ ಹೆಣ್ಣು ನವಿಲು ಸೇರಿದಂತೆ ಏಳು ನವಿಲುಗಳ ಮೃತದೇಹ ಪತ್ತೆಯಾಗಿದೆ ಎಂದು ವಿಭಾಗೀಯ ಅರಣ್ಯಾಧಿಕಾರಿ ಜ್ಞಾನ್ ಸಿಂಗ್ ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸಾವಿಗೆ ನಿಖರವಾದ ಕಾರಣವನ್ನು ಕಂಡು ಹಿಡಿಯಲಾಗುವುದು, ಇದು ವಿಷಪೂರಿತ ಪ್ರಕರಣವೆಂದು ತೋರುತ್ತದೆ ಎಂದು ಸಿಂಗ್ ಹೇಳಿದರು.

ಈ ಸಂಬಂಧ ಅನಾಮಧೇಯ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಉಪವಿಭಾಗಾಧಿಕಾರಿಗೆ ವಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT