ಎಎಪಿ ಸಂಸದ ಸಂಜೀವ್ ಅರೋರಾ 
ದೇಶ

ಪಂಜಾಬ್: ಅಕ್ರಮ ಹಣ ವರ್ಗಾವಣೆ ಪ್ರಕರಣ, AAP ಸಂಸದ ಸಂಜೀವ್ ಅರೋರಾ ಮನೆ ಮೇಲೆ ಇಡಿ ದಾಳಿ

ಜಲಂಧರ್‌ನಲ್ಲಿರುವ ರಿಯಲ್ ಎಸ್ಟೇಟ್ ಉದ್ಯಮಿ ಹೇಮಂತ್ ಸೂದ್ ಮತ್ತು ಮತ್ತೊಬ್ಬ ವ್ಯಕ್ತಿ ಚಂದ್ರಶೇಖರ್ ಅಗರವಾಲ್‌ಗೆ ಸಂಬಂಧಿಸಿದ ಮನೆಗಳಲ್ಲಿಯೂ ಶೋಧ ಕಾರ್ಯ ನಡೆಸಲಾಗುತ್ತಿದೆ ಎನ್ನಲಾಗಿದೆ.

ಗುರುಗ್ರಾಮ್: AAP ರಾಜ್ಯಸಭಾ ಸದಸ್ಯ ಸಂಜೀವ್ ಅರೋರಾ ಮತ್ತಿತರರ ವಿರುದ್ಧದ ಭೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸೋಮವಾರ ಜಲಂಧರ್, ಲೂಧಿಯಾನ, ಗುರುಗ್ರಾಮ್ ಮತ್ತು ದೆಹಲಿಯ ಅನೇಕ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಲೂಧಿಯಾನ (ಪಂಜಾಬ್) ಮತ್ತು ಗುರುಗ್ರಾಮ್ ದಲ್ಲಿರುವ (ಹರಿಯಾಣ) 61 ವರ್ಷದ ಅರೋರಾ ಅವರ ಮನೆ ಸೇರಿದಂತೆ ಸುಮಾರು 16-17 ಕಡೆಗಳಲ್ಲಿ ಶೋಧಿಸಲಾಗುತ್ತಿದೆ. ಜಲಂಧರ್‌ನಲ್ಲಿರುವ ರಿಯಲ್ ಎಸ್ಟೇಟ್ ಉದ್ಯಮಿ ಹೇಮಂತ್ ಸೂದ್ ಮತ್ತು ಮತ್ತೊಬ್ಬ ವ್ಯಕ್ತಿ ಚಂದ್ರಶೇಖರ್ ಅಗರವಾಲ್‌ಗೆ ಸಂಬಂಧಿಸಿದ ಮನೆಗಳಲ್ಲಿಯೂ ಶೋಧ ಕಾರ್ಯ ನಡೆಸಲಾಗುತ್ತಿದೆ ಎನ್ನಲಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಸಂಜೀವ್ ಅರೋರಾ, ಶೋಧ ಕಾರ್ಯಾಚರಣೆಗೆ ನಿಖರ ಕಾರಣ ತಿಳಿದುಬಂದಿಲ್ಲ. ನಾನು ಕಾನೂನು ಪಾಲಿಸುವ ನಾಗರಿಕನಾಗಿದ್ದೇನೆ, ಶೋಧ ಕಾರ್ಯಾಚರಣೆಯ ಕಾರಣದ ಬಗ್ಗೆ ನನಗೆ ಖಚಿತ ಮಾಹಿತಿ ಇಲ್ಲ. ಏಜೆನ್ಸಿಗಳೊಂದಿಗೆ ಸಂಪೂರ್ಣವಾಗಿ ಸಹಕರಿಸುತ್ತೇನೆ ಮತ್ತು ಅವರ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ನಮ್ಮ ಪಕ್ಷದ ಸಂಸದ, ಉದ್ಯಮಿ ವಿರುದ್ಧದ ದಾಳಿ ಪಕ್ಷವನ್ನು ಒಡೆಯುವ ಪ್ರಯತ್ನವಾಗಿದೆ. ಆದರೆ ಎಎಪಿ ಸದಸ್ಯರು ನಿಲ್ಲುವುದಿಲ್ಲ, ಮಾರಾಟವಾಗುವುದಿಲ್ಲ ಮತ್ತು ಹೆದರುವುದಿಲ್ಲ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಫೋಸ್ಟ್ ಮಾಡಿದ್ದಾರೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ಶೋಧ ನಡೆಸಲಾಗುತ್ತಿದ್ದು, ಭೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೂಲಗಳ ಪ್ರಕಾರ, ಅರೋರಾ ತನ್ನ ಕಂಪನಿಯ ಹೆಸರಿಗೆ ಕಾನೂನು ಬಾಹಿರವಾಗಿ ಕೈಗಾರಿಕಾ ಪ್ಲಾಟ್ ಅನ್ನು ವರ್ಗಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಪ್ರವಾಹದಿಂದ ಬೆಳೆಹಾನಿ: ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ 8,500 ರೂ ಪರಿಹಾರ- ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮಳೆ ಹಾನಿಯಿಂದ 52 ಮಂದಿ ಸಾವು; ವಾರಸುದಾರರಿಗೆ ಪರಿಹಾರ ವಿತರಣೆ: ಸಿಎಂ ಸಿದ್ದರಾಮಯ್ಯ

Gaza peace deal: ಹಮಾಸ್‌ಗೆ ಮೂರ್ನಾಲ್ಕು ದಿನಗಳ ಗಡುವು, ನಕಾರ ಮಾಡಿದ್ರೆ 'ನರಕ'ಕ್ಕೆ ದಾರಿ ತೋರಿಸ್ತಿವಿ! ಟ್ರಂಪ್ ಗುಡುಗು

Rahul Security: ರಾಹುಲ್, ಸೋನಿಯಾ, ಪ್ರಿಯಾಂಕಾ ಜೀವಕ್ಕೆ ಅಪಾಯ; ಭದ್ರತೆ ಹೆಚ್ಚಳಕ್ಕೆ ಕಾಂಗ್ರೆಸ್ ಒತ್ತಾಯ

ನಾನು ಜೋಕರ್ ರೀತಿ ನಿಂತಿದ್ದೆ: ಏಷ್ಯಾಕಪ್ ಟ್ರೋಫಿ ಖಾಸಗಿ ವ್ಯಕ್ತಿಯ ಆಸ್ತಿಯಲ್ಲ; BCCI ಉಪಾಧ್ಯಕ್ಷರ ಪ್ರಶ್ನೆಗೆ ನಖ್ವಿ ತತ್ತರ!

SCROLL FOR NEXT