ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ 
ದೇಶ

ಜಮ್ಮು-ಕಾಶ್ಮೀರ: ವಿಧಾನಸಭೆಗೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾರಿಂದ ಐವರು ನಾಮನಿರ್ದೇಶನ; ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ!

ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆ 2019 ರ ಪ್ರಕಾರ ಇಬ್ಬರು ಮಹಿಳೆಯರನ್ನು ರಾಜ್ಯಪಾಲರು ವಿಧಾನಸಭೆಗೆ ನಾಮನಿರ್ದೇಶನ ಮಾಡಬಹುದು.

ಶ್ರೀನಗರ: ಜಮ್ಮು-ಕಾಶ್ಮೀರ ಚುನಾವಣಾ ವಿಧಾನಸಭೆಗೆ ಮತದಾನದ ಹಕ್ಕುಗಳೊಂದಿಗೆ ಐವರನ್ನು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ನಾಮನಿರ್ದೇಶನ ಮಾಡಬಹುದು. ಈ ಮೂಲಕ ಒಂದು ವೇಳೆ ಅತಂತ್ರ ವಿಧಾನಸಭೆ ರಚನೆಯಾದರೆ ಸರ್ಕಾರದ ಮಾಹಿತಿ ಪಡೆಯುವಲ್ಲಿ ಲೆಫ್ಟಿನೆಂಟ್ ಗವರ್ನರ್ ಪ್ರಮುಖ ಪಾತ್ರ ವಹಿಸಲಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆ 2019 ರ ಪ್ರಕಾರ ಇಬ್ಬರು ಮಹಿಳೆಯರನ್ನು ರಾಜ್ಯಪಾಲರು ವಿಧಾನಸಭೆಗೆ ನಾಮನಿರ್ದೇಶನ ಮಾಡಬಹುದು. 2013ರಲ್ಲಿ ಈ ಕಾಯ್ದೆಗೆ ಮಾಡಲಾದ ತಿದ್ದುಪಡಿ ಪ್ರಕಾರ ಇಬ್ಬರು ವಲಸಿಗ ಕಾಶ್ಮೀರಿ ಪಂಡಿತರು ಸೇರಿದಂತೆ ಮೂವರು ಸದಸ್ಯರನ್ನು ಅಸೆಂಬ್ಲಿಗೆ ನಾಮನಿರ್ದೇಶನ ಮಾಡಲು ಲೆಫ್ಟಿನೆಂಟ್ ಗವರ್ನರ್ ಅವರಿಗೆ ಅಧಿಕಾರ ನೀಡಲಾಯಿತು. ಅವರಲ್ಲಿ ಒಬ್ಬರು ಮಹಿಳೆಯಾಗಿರಬೇಕು,ಇನ್ನೋಬ್ಬರು ಪಾಕ್ ಆಕ್ರಮಿತ ಕಾಶ್ಮೀರದಿಂದ ಬಂದ ವ್ಯಕ್ತಿಗೆ ಆದ್ಯತೆ ನೀಡಲಾಗುತ್ತದೆ.

ಕಾನೂನು ತಜ್ಞರ ಪ್ರಕಾರ, ಪುದುಚೇರಿ ಅಸೆಂಬ್ಲಿಯಲ್ಲಿರುವಂತೆ ಲೆಫ್ಟಿನೆಂಟ್ ಗವರ್ನರ್ ನಾಮನಿರ್ದೇಶನ ಮಾಡಿದ ಎಲ್ಲಾ ಐದು ಸದಸ್ಯರು ಮತದಾನದ ಹಕ್ಕುಗಳನ್ನು ಹೊಂದಬಹುದು ಮತ್ತು ವಿಶ್ವಾಸ ಮತದಲ್ಲಿ ಭಾಗವಹಿಸಬಹುದು.

ಲೆಫ್ಟಿನೆಂಟ್ ಗವರ್ನರ್ ಐದು ಸದಸ್ಯರನ್ನು ನಾಮನಿರ್ದೇಶನ ಮಾಡಿದ ನಂತರ ಜಮ್ಮು-ಕಾಶ್ಮೀರ ವಿಧಾನಸಭೆ ಸದಸ್ಯರ ಬಲ 95 ಕ್ಕೆ ಏರುತ್ತದೆ. ಬಹುಮತದ ಸಂಖ್ಯೆ 48 ಆಗಿರುತ್ತದೆ. ಸಂವಿಧಾನದ 370ನೇ ವಿಧಿ ರದ್ದತಿ ನಂತರ ಜಮ್ಮು-ಕಾಶ್ಮೀರದಲ್ಲಿ ಯಾವುದೇ ಪಕ್ಷ ಅಥವಾ ಮೈತ್ರಿ ಮೊದಲ ಸರ್ಕಾರ ರಚಿಸಲು ಸದಸ್ಯರ ಬಲ ಅಗತ್ಯವಾಗಿದೆ.

ಅಕ್ಟೋಬರ್ 8 ರಂದು ಮತ ಎಣಿಕೆ ಮುಗಿದ ನಂತರ ಲೆಫ್ಟಿನೆಂಟ್ ಗವರ್ನರ್ ಅಸೆಂಬ್ಲಿಗೆ ಸದಸ್ಯರನ್ನು ನಾಮ ನಿರ್ದೇಶನ ಮಾಡಬಹುದು. ಅವರು ಯಾರನ್ನು ವಿಧಾನಸಭೆಯ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡುತ್ತಾರೆ ಎಂಬುದು ಅವರ ವಿವೇಚನೆಯಾಗಿದೆ.

ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬಿಜೆಪಿ ನಾಯಕರಾಗಿದ್ದು, ಅವರು ನಾಮನಿರ್ದೇಶನ ಮಾಡುವ ಐದು ಸದಸ್ಯರ ಬೆಂಬಲ ಪಡೆಯಲು ಕೇಸರಿ ಪಕ್ಷ ಸಜ್ಜಾಗಿರುವುದು ರಾಜಕೀಯ ಪಕ್ಷಗಳಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಾಂಗ್ರೆಸ್-ಎನ್‌ಸಿ ಮೈತ್ರಿಕೂಟಕ್ಕೆ ಸಂಪೂರ್ಣ ಬಹುಮತ ಸಿಗಲಿದೆಯಾದರೂ, ಸರ್ಕಾರ ರಚನೆಗೆ ಮುನ್ನ ಐವರು ಶಾಸಕರನ್ನು ನಾಮನಿರ್ದೇಶನ ಮಾಡುವ ಲೆಫ್ಟಿನೆಂಟ್ ಗವರ್ನರ್ ಕ್ರಮ ಪ್ರಜಾಪ್ರಭುತ್ವ ವಿರೋಧಿ ಮತ್ತು ಸಾರ್ವಜನಿಕ ಆದೇಶದ ದ್ರೋಹ ಎಂದು ಕಾಂಗ್ರೆಸ್ ವಕ್ತಾರ ರವೀಂದ್ರ ಶರ್ಮಾ ಹೇಳಿದ್ದಾರೆ.

ಲೆಫ್ಟಿನೆಂಟ್ ಗವರ್ನರ್ ಐವರು ಶಾಸಕರನ್ನು ನಾಮನಿರ್ದೇಶನ ಮಾಡುವ ನಿಬಂಧನೆಯ ವಿರುದ್ಧ ಎನ್‌ಸಿ ಪ್ರಾಂತೀಯ ಮುಖ್ಯಸ್ಥ ರತ್ತನ್ ಲಾಲ್ ಗುಪ್ತಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಚುನಾಯಿತ ಸರ್ಕಾರವು ಈ ನಾಮನಿರ್ದೇಶನಗಳನ್ನು ಮಾಡುವ ಅಧಿಕಾರವನ್ನು ಹೊಂದಿರಬೇಕು. ಅಂತಹ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಂವಿಧಾನಿಕ ಹಕ್ಕು ಲೆಫ್ಟಿನೆಂಟ್ ಗವರ್ನರ್ ಗೆ ಇಲ್ಲ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

SCROLL FOR NEXT