ಕಿರಿಯ ವೈದ್ಯರ ಆಮರಣಾಂತ ಉಪವಾಸ 
ದೇಶ

ಪಶ್ಚಿಮ ಬಂಗಾಳ: ಕಿರಿಯ ವೈದ್ಯರ ಆಮರಣಾಂತ ಉಪವಾಸ 3ನೇ ದಿನಕ್ಕೆ

ರಾಜ್ಯ ಸರ್ಕಾರದಿಂದ ನಮಗೆ ಯಾವುದೇ ಸಂದೇಶ ಬಂದಿಲ್ಲ. ನಮ್ಮ ಎಲ್ಲಾ ಬೇಡಿಕೆಗಳು ಈಡೇರುವವರೆಗೂ ನಾವು ಇದನ್ನು ಧರಣಿ ಮುಂದುವರಿಸುತ್ತೇವೆ.

ಕೋಲ್ಕತ್ತಾ: ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯ ವೈದ್ಯೆ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಹಾಗೂ ಕೆಲಸದ ಸ್ಥಳದಲ್ಲಿ ಸುರಕ್ಷತೆಗೆ ಒತ್ತಾಯಿಸಿ ಪಶ್ಚಿಮ ಬಂಗಾಳ ಕಿರಿಯ ವೈದ್ಯರ ಆಮರಣಾಂತ ಉಪವಾಸ ಸೋಮವಾರ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಶನಿವಾರ ಸಂಜೆಯಿಂದ ಏಳು ಕಿರಿಯ ವೈದ್ಯಾಧಿಕಾರಿಗಳು ಆಮರಣಾಂತ ಉಪವಾಸ ಆರಂಭಿಸಿದ್ದು, “ನಮ್ಮ ಆಮರಣಾಂತ ಉಪವಾಸ ಸತ್ಯಾಗ್ರಹ ಮುಂದುವರೆದಿದೆ. ರಾಜ್ಯ ಸರ್ಕಾರದಿಂದ ನಮಗೆ ಯಾವುದೇ ಸಂದೇಶ ಬಂದಿಲ್ಲ. ನಮ್ಮ ಎಲ್ಲಾ ಬೇಡಿಕೆಗಳು ಈಡೇರುವವರೆಗೂ ನಾವು ಇದನ್ನು ಧರಣಿ ಮುಂದುವರಿಸುತ್ತೇವೆ. ಯಾವುದೇ ಒತ್ತಡಕ್ಕೆ ಮಣಿದು ನಮ್ಮ ಪ್ರತಿಭಟನೆಯ ಹಾದಿಯಿಂದ ದೂರ ಸರಿಯಲು ಸಾಧ್ಯವಿಲ್ಲ ಎಂದು ಕಿರಿಯ ವೈದ್ಯ ಅನಿಕೇತ್ ಮಹತೋ ಅವರು ಪಿಟಿಐಗೆ ತಿಳಿಸಿದ್ದಾರೆ.

ಆರ್‌ಜಿ ಕರ್ ಆಸ್ಪತ್ರೆಯ ಮಹತೋ ಅವರು ಸ್ನಿಗ್ಧಾ ಹಜ್ರಾ, ಕೋಲ್ಕತ್ತಾ ವೈದ್ಯಕೀಯ ಕಾಲೇಜಿನ ತನಯ ಪಂಜಾ ಮತ್ತು ಅನುಸ್ತುಪ್ ಮುಖೋಪಾಧ್ಯಾಯ, ಎಸ್‌ಎಸ್‌ಕೆಎಂ ಆಸ್ಪತ್ರೆಯ ಅರ್ನಾಬ್ ಮುಖೋಪಾಧ್ಯಾಯ, ಎನ್‌ಆರ್‌ಎಸ್ ವೈದ್ಯಕೀಯ ಕಾಲೇಜಿನ ಪುಲಸ್ತ ಆಚಾರ್ಯ ಮತ್ತು ಕೆಪಿಸಿ ವೈದ್ಯಕೀಯ ಕಾಲೇಜಿನ ಸಯಂತನಿ ಘೋಷ್ ಹಜ್ರಾ ಅವರು ಆಮರಣಾಂತ ಉಪವಾಸ ನಡೆಸುತ್ತಿದ್ದಾರೆ.

ನಗರದ ಧರ್ಮತಾಲಾ ಪ್ರದೇಶದ ಡೋರಿನಾ ಕ್ರಾಸಿಂಗ್‌ನಲ್ಲಿ ನಡೆಯುತ್ತಿರುವ ಪ್ರತಿಭಟನಾ ಸ್ಥಳದಲ್ಲಿ ಜೈವಿಕ ಶೌಚಾಲಯ ಸ್ಥಾಪಿಸಲು ಪೊಲೀಸರು ಅನುಮತಿ ನೀಡಿಲ್ಲ. ಕೋಲ್ಕತ್ತಾ ಪೊಲೀಸರು ಸಹಕಾರ ನೀಡುತ್ತಿಲ್ಲ ಎಂದು ಕಿರಿಯ ವೈದ್ಯಾಧಿಕಾರಿಗಳು ಆರೋಪಿಸಿದ್ದಾರೆ.

ಪಾರದರ್ಶಕತೆ ಕಾಯ್ದುಕೊಳ್ಳಲು ಕಿರಿಯ ವೈದ್ಯಾಧಿಕಾರಿಗಳು ತಮ್ಮ ಸಹೋದ್ಯೋಗಿಗಳು ಮುಷ್ಕರ ನಡೆಸುತ್ತಿರುವ ಸ್ಥಳದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ.

ಹೆಚ್ಚಿನ ಸಂಖ್ಯೆಯ ಜನರು ಮತ್ತು ಕೆಲವು ಗಣ್ಯರು ಪ್ರತಿಭಟನಾ ಸ್ಥಳದಲ್ಲಿ ಜಮಾಯಿಸಿ, ಧರಣಿ ನಿರತ ವೈದ್ಯರಿಗೆ ಬೆಂಬಲ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT