ಕೇಂದ್ರ ಗೃಹ ಸಚಿವ ಅಮಿತ್ ಶಾ. 
ದೇಶ

2026ರ ಮಾರ್ಚ್ ವೇಳೆಗೆ ಎಡಪಂಥೀಯ-ಉಗ್ರವಾದ ಸಂಪೂರ್ಣ ನಿರ್ಮೂಲನೆ: ಅಮಿತ್ ಶಾ

ಅಮಿತ್ ಶಾ ಅವರು ಇಂದು ನಕ್ಸಲ್ ಪೀಡಿತ ರಾಜ್ಯಗಳ ಎಂಟು ಮುಖ್ಯಮಂತ್ರಿಗಳೊಂದಿಗೆ ಭದ್ರತೆ ಮತ್ತು ಅಭಿವೃದ್ಧಿ ಪರಿಶೀಲನಾ ಸಭೆ ನಡೆಸಿದರು.

ನವದೆಹಲಿ: ಎಡಪಂಥೀಯ-ಉಗ್ರಗಾಮಿಗಳ(ಎಲ್‌ಡಬ್ಲ್ಯೂಇ) ವಿರುದ್ಧದ ಹೋರಾಟವು ಅಂತಿಮ ಹಂತದಲ್ಲಿದೆ ಮತ್ತು ಮಾರ್ಚ್ 2026ರ ವೇಳೆಗೆ ಎಡಪಂಥೀಯ-ಉಗ್ರವಾದವನ್ನು ಸಂಪೂರ್ಣ ನಿರ್ಮೂಲನೆ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ಹೇಳಿದ್ದಾರೆ.

ಇಂದು ನಕ್ಸಲ್ ಪೀಡಿತ ರಾಜ್ಯಗಳ ಎಂಟು ಮುಖ್ಯಮಂತ್ರಿಗಳೊಂದಿಗೆ ನಡೆದ ಭದ್ರತೆ ಮತ್ತು ಅಭಿವೃದ್ಧಿ ಪರಿಶೀಲನಾ ಸಭೆ ಬಳಿಕ ಮಾತನಾಡಿದ ಅಮಿತ್ ಶಾ, ಅಭಿವೃದ್ಧಿಯು ನಕ್ಸಲ್ ಪೀಡಿತ ಪ್ರದೇಶಗಳಲ್ಲಿನ ಕೊನೆಯ ವ್ಯಕ್ತಿಯನ್ನು ತಲುಪಬೇಕಾದರೆ, ಎಡ ಸಿದ್ಧಾಂತ ಪ್ರೇರಿತ ಹಿಂಸಾಚಾರವನ್ನು ಸಂಪೂರ್ಣವಾಗಿ ಕೊನೆಗೊಳಿಸಬೇಕು ಎಂದರು.

LWE ವಿರುದ್ಧ ಹೋರಾಡಲು, ನಕ್ಸಲ್ ಪೀಡಿತ ಪ್ರದೇಶಗಳಲ್ಲೂ ಕಾನೂನನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಬೇಕು. ಕಳೆದ 30 ವರ್ಷಗಳಲ್ಲಿ ಮೊದಲ ಬಾರಿಗೆ, ಎಡ ಸಿದ್ಧಾಂತ ಬೆಂಬಲಿತ ಉಗ್ರವಾದದಿಂದಾಗಿ ಮೃತಪಟ್ಟವರ ಸಂಖ್ಯೆ 100ಕ್ಕಿಂತ ಕಡಿಮೆಯಾಗಿದೆ ಎಂದು ಶಾ ಹೇಳಿದರು.

LWE ಹಿಂಸಾಚಾರದ ವಿರುದ್ಧದ ಹೋರಾಟವು ಈಗ ಅಂತಿಮ ಹಂತದಲ್ಲಿದೆ. ಮಾರ್ಚ್ 2026 ರ ವೇಳೆಗೆ, ದೇಶವು “ದಶಕಗಳ ಈ ಹಳೆಯ ಸಮಸ್ಯೆಯಿಂದ ಸ್ವಾತಂತ್ರ್ಯವನ್ನು ಪಡೆಯುತ್ತದೆ ಎಂದು ಕೇಂದ್ರ ಗೃಹ ಸಚಿವರು ಹೇಳಿದರು.

ಶೇಕಡಾ 80 ರಷ್ಟು LWEಯ ಕೇಡರ್ ಸಾಮರ್ಥ್ಯವು ಈಗ ಛತ್ತೀಸ್‌ಗಢಕ್ಕೆ ಮಾತ್ರ ಸೀಮಿತವಾಗಿದೆ. ಛತ್ತೀಸ್‌ಗಢದಲ್ಲಿ ಜನವರಿಯಿಂದ ಇಲ್ಲಿಯವರೆಗೆ 194 ಉಗ್ರರು ಹತರಾಗಿದ್ದಾರೆ. ಅವರಲ್ಲಿ 801 ಮಂದಿ ಶಸ್ತ್ರಾಸ್ತ್ರಗಳನ್ನು ತ್ಯಜಿಸಿದ್ದಾರೆ ಮತ್ತು 742 ಮಂದಿ ಶರಣಾಗಿದ್ದಾರೆ.

ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಮುಖ್ಯವಾಹಿನಿಗೆ ಸೇರುವಂತೆ ನಕ್ಸಲ್ ಕಾರ್ಯಕರ್ತರಿಗೆ ಅಮಿತ್ ಶಾ ಮನವಿ ಮಾಡಿದರು.

ನಾವು ನಕ್ಸ್ ಪೀಡಿತ ರಾಜ್ಯಗಳಲ್ಲಿ ರಾಜ್ಯ ಪೊಲೀಸ್ ಸಂಸ್ಥೆಗಳೊಂದಿಗೆ ಜಂಟಿ ಕಾರ್ಯಪಡೆಗಳನ್ನು ರಚಿಸಿದ್ದೇವೆ. ಇಂದು ನಕ್ಸಲ್ ವಿರೋಧಿ ಕಾರ್ಯಾಚರಣೆಗಾಗಿ 12 ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲಾಗಿದೆ. ಇದರಲ್ಲಿ ಆರು ಬಿಎಸ್‌ಎಫ್ ಮತ್ತು ಆರು ವಾಯುಪಡೆ ಸೇರಿವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT