ಅರವಿಂದ ಕೇಜ್ರಿವಾಲ್  
ದೇಶ

ಹರಿಯಾಣದ ಸೋಲು ಅತಿಯಾದ ಆತ್ಮವಿಶ್ವಾಸಕ್ಕೆ ದೊಡ್ಡ ಪಾಠ: ಕೇಜ್ರಿವಾಲ್

ಚುನಾವಣೆಯಲ್ಲಿ "ಅತಿಯಾದ ಆತ್ಮವಿಶ್ವಾಸ" ಇರಬಾರದು. ಚುನಾವಣೆಯಲ್ಲಿ ಯಾರೊಬ್ಬರೂ ಯಾವತ್ತೂ ಅತಿಯಾದ ಆತ್ಮವಿಶ್ವಾಸವನ್ನು ಹೊಂದಿರಬಾರದು ಎಂಬುದಕ್ಕೆ ಹರಿಯಾಣದ ಫಲಿತಾಂಶ ದೊಡ್ಡ ಪಾಠ".

ನವದೆಹಲಿ: ಹರಿಯಾಣದಲ್ಲಿ ಆಡಳಿತರೂಢ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದು, ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಈ ಚುನಾವಣೆ ಫಲಿತಾಂಶ "ದೊಡ್ಡ ಪಾಠ" ಎಂದು ಮಂಗಳವಾರ ಹೇಳಿದ್ದಾರೆ.

ಚುನಾವಣೆಯಲ್ಲಿ "ಅತಿಯಾದ ಆತ್ಮವಿಶ್ವಾಸ" ಇರಬಾರದು. ಚುನಾವಣೆಯಲ್ಲಿ ಯಾರೊಬ್ಬರೂ ಯಾವತ್ತೂ ಅತಿಯಾದ ಆತ್ಮವಿಶ್ವಾಸವನ್ನು ಹೊಂದಿರಬಾರದು ಎಂಬುದಕ್ಕೆ ಹರಿಯಾಣದ ಫಲಿತಾಂಶ ದೊಡ್ಡ ಪಾಠ" ಎಂದು ದೆಹಲಿ ಮಾಜಿ ಸಿಎಂ ಕೇಜ್ರಿವಾಲ್ ಪರೋಕ್ಷವಾಗಿ ಕಾಂಗ್ರೆಸ್ ಗೆ ಟಾಂಗ್ ನೀಡಿದ್ದಾರೆ.

ಎಎಪಿ ಪುರಸಭೆ ಕೌನ್ಸಿಲರ್‌ಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, "ಯಾವುದೇ ಚುನಾವಣೆಯನ್ನು ಲಘುವಾಗಿ ಪರಿಗಣಿಸಬಾರದು. ಪ್ರತಿ ಚುನಾವಣೆ ಮತ್ತು ಪ್ರತಿ ಸ್ಥಾನವು ಕಠಿಣವಾಗಿರುತ್ತದೆ" ಎಂದು ಹೇಳಿದರು.

ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಹೆಚ್ಚು ಶ್ರಮಿಸಬೇಕು ಎಂದು ಪಕ್ಷದ ಕೌನ್ಸಿಲರ್‌ಗಳು ಕರೆ ನೀಡಿದ ಕೇಜ್ರಿವಾಲ್ ಅವರು, ತಮ್ಮ ವಾರ್ಡ್‌ಗಳಿಂದ ಕಸವನ್ನು ಸರಿಯಾಗಿ ಸಂಗ್ರಹಿಸಿ ವಿಲೇವಾರಿ ಮಾಡಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳುವಂತೆ ಸೂಚಿಸಿದರು.

ಎಎಪಿಯು ಸ್ಪರ್ಧಿಸಲಿರುವ ಸ್ಥಾನಗಳ ಸಂಖ್ಯೆಯ ಬಗ್ಗೆ ಭಿನ್ನಾಭಿಪ್ರಾಯದಿಂದಾಗಿ ಹರಿಯಾಣದಲ್ಲಿ ಕಾಂಗ್ರೆಸ್‌ನೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. 9 ಸ್ಥಾನಗಳನ್ನು ನೀಡಬೇಕೆಂಬ ಎಎಪಿ ಬೇಡಿಕೆಯನ್ನು ಕಾಂಗ್ರೆಸ್ ತಿರಸ್ಕರಿಸಿದ ನಂತರ ರಾಜ್ಯದ ಒಟ್ಟು 90 ಸ್ಥಾನಗಳಲ್ಲಿ 89 ರಲ್ಲಿ ಆಪ್ ಸ್ವತಂತ್ರವಾಗಿ ಸ್ಪರ್ಧಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT