ಕಾಂಗ್ರೆಸ್ ನಾಯಕರಿಂದ ಚುನಾವಣಾ ಆಯೋಗದ ಭೇಟಿ online desk
ದೇಶ

ಹರ್ಯಾಣ ಸೋಲು: ಇವಿಎಂಗಳಲ್ಲಿನ ವ್ಯತ್ಯಾಸಗಳ ಬಗ್ಗೆ ತನಿಖೆಗೆ ಕಾಂಗ್ರೆಸ್ ಆಗ್ರಹ

ಕೆಲವು ಇವಿಎಂಗಳಲ್ಲಿ ವ್ಯತ್ಯಾಸ ಕಂಡುಬಂದಿದ್ದು, ಅಂತಹ ಇವಿಎಂಗಳನ್ನು ತನಿಖೆಯಾಗುವವರೆಗೂ ಸೀಲ್ ಮಾಡಿ ಸುರಕ್ಷಿತ ಪ್ರದೇಶದಲ್ಲಿರಿಸಬೇಕು ಎಂದು ಕಾಂಗ್ರೆಸ್ ಆಯೋಗಕ್ಕೆ ಮನವಿ ಮಾಡಿದೆ.

ನವದೆಹಲಿ: ಹರ್ಯಾಣ ಸೋಲಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಚುನಾವಣಾ ಆಯೋಗವನ್ನು ಭೇಟಿ ಮಾಡಿದ್ದು, ಇವಿಎಂಗಳಲ್ಲಿನ ವ್ಯತ್ಯಾಸಗಳ ಬಗ್ಗೆ ತನಿಖೆಗೆ ಆಗ್ರಹಿಸಿದೆ.

ಕೆಲವು ಇವಿಎಂಗಳಲ್ಲಿ ವ್ಯತ್ಯಾಸ ಕಂಡುಬಂದಿದ್ದು, ಅಂತಹ ಇವಿಎಂಗಳನ್ನು ತನಿಖೆಯಾಗುವವರೆಗೂ ಸೀಲ್ ಮಾಡಿ ಸುರಕ್ಷಿತ ಪ್ರದೇಶದಲ್ಲಿರಿಸಬೇಕು ಎಂದು ಕಾಂಗ್ರೆಸ್ ಆಯೋಗಕ್ಕೆ ಮನವಿ ಮಾಡಿದೆ.

ಮಾಜಿ ಮುಖ್ಯಮಂತ್ರಿಗಳಾದ ಭೂಪಿಂದರ್ ಸಿಂಗ್ ಹೂಡಾ ಮತ್ತು ಅಶೋಕ್ ಗೆಹ್ಲೋಟ್ ಮತ್ತು ಎಐಸಿಸಿ ನಾಯಕರಾದ ಕೆಸಿ ವೇಣುಗೋಪಾಲ್, ಜೈರಾಮ್ ರಮೇಶ್, ಅಜಯ್ ಮಾಕೆನ್ ಮತ್ತು ಪವನ್ ಖೇರಾ ಅವರನ್ನು ಒಳಗೊಂಡ ಕಾಂಗ್ರೆಸ್ ಉನ್ನತ ನಾಯಕರ ನಿಯೋಗ ಹರಿಯಾಣ ಕಾಂಗ್ರೆಸ್ ಮುಖ್ಯಸ್ಥ ಉದಯ್ ಭಾನ್ ಜೊತೆಗೆ ಚುನಾವಣಾ ಆಯೋಗದ ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ನಿಯೋಗ ಹರ್ಯಾಣದ ವಿವಿಧ ಕ್ಷೇತ್ರಗಳಿಂದ ನಿರ್ದಿಷ್ಟ ದೂರುಗಳ ಜೊತೆಗೆ ಅಧಿಕಾರಿಗಳಿಗೆ ಜ್ಞಾಪಕ ಪತ್ರವನ್ನು ಹಸ್ತಾಂತರಿಸಿದೆ.

ಪಕ್ಷದ ಹಿರಿಯ ನಾಯಕ ಅಭಿಷೇಕ್ ಸಿಂಘ್ವಿ ಆನ್‌ಲೈನ್‌ನಲ್ಲಿ ಸಭೆ ಸೇರಿದರು. ಹಲವು ವಿಧಾನಸಭಾ ಕ್ಷೇತ್ರಗಳಿಂದ ಬರವಣಿಗೆಯಲ್ಲಿ ಏಳು ಸೇರಿದಂತೆ ಕನಿಷ್ಠ 20 ದೂರುಗಳಿವೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಇವಿಎಂಗಳು 99 ಪ್ರತಿಶತ ಬ್ಯಾಟರಿ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಉಲ್ಲೇಖಿಸಿದ್ದಾರೆ ಆದರೆ ಎಣಿಕೆಯ ಸಮಯದಲ್ಲಿ ಸರಾಸರಿ ಇವಿಎಂಗಳು 60 ರಿಂದ 70 ರಷ್ಟು ಬ್ಯಾಟರಿಯಲ್ಲಿ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಿದ್ದು ಕಂಡುಬಂದಿದೆ ಎಂದು ಕಾಂಗ್ರೆಸ್ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT