ದೆಹಲಿಯಲ್ಲಿ ಅಪಾರ ಪ್ರಮಾಣದ ಡ್ರಗ್ಸ್ ಪತ್ತೆ 
ದೇಶ

Delhi: Snack packet ಗಳಲ್ಲಿ ಅಡಗಿಸಿಟ್ಟಿದ್ದ 2 ಸಾವಿರ ಕೋಟಿ ರೂ ಮೌಲ್ಯದ ಡ್ರಗ್ಸ್ ವಶಕ್ಕೆ!

ದೆಹಲಿ ಪೊಲೀಸ್ ವಿಶೇಷ ಘಟಕವು ಗುರುವಾರ ಮತ್ತೊಂದು ಬೃಹತ್ ಮಾದಕವಸ್ತು ಕಳ್ಳಸಾಗಣೆ ಜಾಲ ಭೇದಿಸಿದ್ದು, ದೆಹಲಿಯ ರಮೇಶ್ ನಗರ ಪ್ರದೇಶದಲ್ಲಿರುವ ಗೋದಾಮಿನಿಂದ 2000 ಕೋಟಿ ರೂ. ಮೌಲ್ಯದ ಸುಮಾರು 200 ಕೆಜಿಗಳಷ್ಟು ಕೊಕೇನ್ ಅನ್ನು ವಶಪಡಿಸಿಕೊಂಡಿದೆ.

ನವದೆಹಲಿ: ಮಾದಕವಸ್ತು ಕಳ್ಳಸಾಗಣೆ ವಿರುದ್ಧ ದಾಳಿ ಮುಂದುವರೆಸಿರುವ ದೆಹಲಿ ಪೊಲೀಸರು 2ನೇ ಬಾರಿಗೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೊಬ್ಬರಿ 2 ಸಾವಿರ ಕೋಟಿ ರೂ ಮೌಲ್ಯದ ಮಾದಕವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ದೆಹಲಿ ಪೊಲೀಸ್ ವಿಶೇಷ ಘಟಕವು ಗುರುವಾರ ಮತ್ತೊಂದು ಬೃಹತ್ ಮಾದಕವಸ್ತು ಕಳ್ಳಸಾಗಣೆ ಜಾಲ ಭೇದಿಸಿದ್ದು, ದೆಹಲಿಯ ರಮೇಶ್ ನಗರ ಪ್ರದೇಶದಲ್ಲಿರುವ ಗೋದಾಮಿನಿಂದ 2000 ಕೋಟಿ ರೂ. ಮೌಲ್ಯದ ಸುಮಾರು 200 ಕೆಜಿಗಳಷ್ಟು ಕೊಕೇನ್ ಅನ್ನು ವಶಪಡಿಸಿಕೊಂಡಿದೆ.

ಅಲ್ಲದೆ ತುಷಾರ್ ಗೋಯಲ್ (40), ಹಿಮಾಂಶು ಕುಮಾರ್ (27) ಮತ್ತು ಔರಂಗಜೇಬ್ ಸಿದ್ದಿಕಿ (23) ಮತ್ತು ಭರತ್ ಕುಮಾರ್ ಜೈನ್ (48) ಎಂದು ಗುರುತಿಸಲಾದ ನಾಲ್ವರನ್ನು ಸ್ಥಳದಲ್ಲೇ ಬಂಧಿಸಲಾಗಿದ್ದು, ಇಬ್ಬರನ್ನು ಅಮೃತಸರ ಮತ್ತು ಚೆನ್ನೈನಲ್ಲಿ ಬಂಧಿಸಲಾಗಿದೆ. ಉತ್ತರ ಪ್ರದೇಶದ ಹಾಪುರ್‌ನಲ್ಲಿ ಅಖ್ಲಾಕ್ ಎಂಬ ಮತ್ತೊಬ್ಬ ವ್ಯಕ್ತಿಯನ್ನು ಬೆಳಗ್ಗೆ ಬಂಧಿಸಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ, ಬಂಧಿತ ಅಖ್ಲಾಕ್ ಉತ್ತರ ಭಾರತದಲ್ಲಿ ಡ್ರಗ್ಸ್ ಸಾಗಿಸಲು ಪ್ರಮುಖ ಪಾತ್ರ ವಹಿಸಿದ್ದ. 5,620 ಕೋಟಿ ರೂಪಾಯಿಗಳ ಡ್ರಗ್ ಕಾರ್ಟೆಲ್‌ನಲ್ಲಿ ಭಾಗಿಯಾಗಿರುವ ಶಂಕಿತ ಭಾರತೀಯ ಮೂಲದ ದುಬೈ ಮೂಲದ ಉದ್ಯಮಿ ವೀರೇಂದ್ರ ಬಸೋಯಾ ವಿರುದ್ಧ ದೆಹಲಿ ಪೊಲೀಸರು ಲುಕ್‌ಔಟ್ ಸುತ್ತೋಲೆ ಹೊರಡಿಸಿದ್ದಾರೆ.

ಜಿಪಿಎಸ್ ಆಧರಿಸಿ ಕಾರ್ಯಾಚರಣೆ

ಇನ್ನು ಇಂದಿನ ಕಾರ್ಯಾಚರಣೆಯಲ್ಲಿ ಕೊಕೇನ್ ಸಾಗಿಸಲು ಬಳಸಿದ ಕಾರಿನಲ್ಲಿ ಜಿಪಿಎಸ್ ಅಳವಡಿಸಲಾಗಿತ್ತು. ಪೊಲೀಸರು ತಮ್ಮ ಕಾರ್ಯಾಚರಣೆಯನ್ನು ಕೈಗೊಳ್ಳಲು ಜಿಪಿಎಸ್ ಮೂಲಕ ಸ್ಥಳವನ್ನು ಟ್ರ್ಯಾಕ್ ಮಾಡಿ ಡ್ರಗ್ಸ್ ಅನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. 'ಕೊಕೇನ್ ಅನ್ನು ದೆಹಲಿಗೆ ತಂದಿದ್ದ ಆರೋಪಿ ಲಂಡನ್‌ಗೆ ಪರಾರಿಯಾಗಿದ್ದು, ದಕ್ಷಿಣ ದೆಹಲಿಯ ಮಹಿಪಾಲ್‌ಪುರದ ಗೋಡೌನ್‌ನಿಂದ ಅಕ್ಟೋಬರ್ 2 ರಂದು 5,620 ಕೋಟಿ ಮೌಲ್ಯದ ಅಂದಾಜು 560 ಕೆಜಿ ಕೊಕೇನ್ ಮತ್ತು 40 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡ ಬೆನ್ನಲ್ಲೇ ಈ ಕಾರ್ಯಾಚರಣೆ ನಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT