ಒಮರ್ ಅಬ್ದುಲ್ಲಾ, ಕೇಜ್ರಿವಾಲ್ 
ದೇಶ

ಜಮ್ಮು-ಕಾಶ್ಮೀರ: ನ್ಯಾಷನಲ್ ಕಾನ್ಫರೆನ್ಸ್‌ಗೆ ಬೆಂಬಲ ಘೋಷಿಸಿದ AAP

AAP ಪಕ್ಷದಿಂದ ಲೆಫ್ಟಿನೆಂಟ್ ಗವರ್ನರ್ ಅವರಿಗೆ ಬೆಂಬಲದ ಔಪಚಾರಿಕ ಪತ್ರವನ್ನು ಸಲ್ಲಿಸಲಾಗಿದೆ.

ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ NC-ಕಾಂಗ್ರೆಸ್ ಮೈತ್ರಿಕೂಟ ಜಯಗಳಿಸಿದ ನಂತರ ನ್ಯಾಷನಲ್ ಕಾನ್ಫರೆನ್ಸ್‌ಗೆ ಬೆಂಬಲ ನೀಡುವುದಾಗಿ ಆಮ್ ಆದ್ಮಿ ಪಕ್ಷ ಶುಕ್ರವಾರ ಹೇಳಿದೆ.

ಈ ಸಂಬಂಧ AAP ಪಕ್ಷದಿಂದ ಲೆಫ್ಟಿನೆಂಟ್ ಗವರ್ನರ್ ಅವರಿಗೆ ಬೆಂಬಲದ ಔಪಚಾರಿಕ ಪತ್ರವನ್ನು ಸಲ್ಲಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಎಎಪಿಯ ಒಬ್ಬ ಶಾಸಕರಿದ್ದಾರೆ. ದೋಡಾ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಮೆಹರಾಜ್ ಮಲಿಕ್ ಬಿಜೆಪಿಯ ಗಜಯ್ ಸಿಂಗ್ ರಾಣಾ ವಿರುದ್ಧ 4, 538 ಮತಗಳಿಂದ ಗೆಲುವು ಸಾಧಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟ 49 ಸ್ಥಾನಗಳನ್ನು ಗೆಲ್ಲುವ ಮೂಲಕ ಸಂಪೂರ್ಣ ಬಹುಮತವನ್ನು ಪಡೆದುಕೊಂಡಿದೆ. ಗುರುವಾರ ಜಮ್ಮ-ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಶಾಸಕಾಂಗ ಪಕ್ಷದ ನಾಯಕನಾಗಿ

ಒಮರ್ ಅಬ್ದುಲ್ಲಾ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT