ನಿರ್ಮಾಣ ಸ್ಥಳದಲ್ಲಿ ಗೋಡೆ ಕುಸಿತ 
ದೇಶ

Gujarat: ಮೆಹ್ಸಾನಾದಲ್ಲಿ ನಿರ್ಮಾಣ ಸ್ಥಳದಲ್ಲಿ ಗೋಡೆ ಕುಸಿದು 9 ಕಾರ್ಮಿಕರು ಸಾವು, ಪ್ರಧಾನಿ ಮೋದಿ ಸಂತಾಪ!

ಅವಶೇಷಗಳ ಅಡಿಯಲ್ಲಿ ಸಿಲುಕಿರುವವರಿಗಾಗಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದ್ದು ರಕ್ಷಣಾ ತಂಡವು ಒಂಬತ್ತು ಮೃತದೇಹಗಳನ್ನು ಹೊರತೆಗೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ಮಧ್ಯಾಹ್ನ 1:45ರ ಸುಮಾರಿಗೆ ಘಟನೆ ಸಂಭವಿಸಿದೆ.

ಮೆಹ್ಸಾನಾ: ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಕಡಿ ತಾಲೂಕಿನ ಜಸಾಲ್‌ಪುರ ಗ್ರಾಮದ ಬಳಿ ಖಾಸಗಿ ನಿರ್ಮಾಣ ಸ್ಥಳದಲ್ಲಿ ಗೋಡೆ ಕುಸಿದು ಒಂಬತ್ತು ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಅವಶೇಷಗಳ ಅಡಿಯಲ್ಲಿ ಸಿಲುಕಿರುವವರಿಗಾಗಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದ್ದು ರಕ್ಷಣಾ ತಂಡವು ಒಂಬತ್ತು ಮೃತದೇಹಗಳನ್ನು ಹೊರತೆಗೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ಮಧ್ಯಾಹ್ನ 1:45ರ ಸುಮಾರಿಗೆ ಘಟನೆ ಸಂಭವಿಸಿದೆ ಎಂದು ಮೆಹ್ಸಾನಾ ಅವರ ಡಿಡಿಒ ಕಚೇರಿ ಖಚಿತಪಡಿಸಿದೆ.

ಮೆಹ್ಸಾನಾ ಜಿಲ್ಲಾ ಅಭಿವೃದ್ಧಿ ಅಧಿಕಾರಿ (ಡಿಡಿಒ) ಡಾ. ಹಸರತ್ ಜಾಸ್ಮಿನ್, ಇದು ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ಖಾಸಗಿ ಕಂಪನಿಯಾಗಿದೆ. ಘಟನೆ ಮಧ್ಯಾಹ್ನ 1.45ರ ಸುಮಾರಿಗೆ ನಡೆದಿದೆ. ನಮ್ಮ ಮಾಹಿತಿ ಪ್ರಕಾರ, 9-10 ಜನರು ಸಿಕ್ಕಿಬಿದ್ದಿದ್ದರು. ಎಂದು ತಿಳಿಸಿದ್ದಾರೆ.

ಮೆಹ್ಸಾನಾ ಜಿಲ್ಲಾ ಕೇಂದ್ರದಿಂದ ಸುಮಾರು 37 ಕಿಲೋಮೀಟರ್ ದೂರದಲ್ಲಿರುವ ಕಾಡಿ ಪಟ್ಟಣದ ಬಳಿ ಈ ಘಟನೆ ನಡೆದಿದೆ. ಜಸಾಲ್‌ಪುರ ಗ್ರಾಮದಲ್ಲಿ ಕಾರ್ಖಾನೆಯೊಂದಕ್ಕೆ ಸಂಪ್ ನಿರ್ಮಿಸಲು ಹಲವಾರು ಕಾರ್ಮಿಕರು ಹೊಂಡವನ್ನು ಅಗೆಯುತ್ತಿದ್ದಾಗ ಸಡಿಲವಾದ ಮಣ್ಣು ಅವರ ಮೇಲೆ ಕುಸಿದಿದೆ ಎಂದು ಕಡಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪ್ರಹ್ಲಾದ್ ಸಿಂಗ್ ವಘೇಲಾ ತಿಳಿಸಿದ್ದಾರೆ. ಘಟನೆಗೆ ಆಡಳಿತವು ತಕ್ಷಣವೇ ಸ್ಪಂದಿಸಿತ್ತು. ಆದರೆ ಮಣ್ಣಿನಲ್ಲಿ ಹೂತುಹೋದ ಹತ್ತು ಕಾರ್ಮಿಕರಲ್ಲಿ ಒಬ್ಬರು ಮಾತ್ರ ಬದುಕುಳಿದ್ದಾರೆ.

ಗೋಡೆ ಕುಸಿದು ಜನರು ಸಾವನ್ನಪ್ಪಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಗುಜರಾತಿನ ಮೆಹ್ಸಾನಾದಲ್ಲಿ ಗೋಡೆ ಕುಸಿತದಿಂದ ಸಂಭವಿಸಿದ ಅಪಘಾತವು ಅತ್ಯಂತ ದುಃಖಕರವಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ, ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಲ್ಲಿ ತೊಡಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT