ಸಂಗ್ರಹ ಚಿತ್ರ TNIE
ದೇಶ

ಪ್ಯಾಲೆಸ್ತೀನ್, ಸಿರಿಯಾ ಮತ್ತು ಮ್ಯಾನ್ಮಾರ್ ಸೇರಿದಂತೆ ಬ್ರಿಕ್ಸ್ ಸದಸ್ಯತ್ವಕ್ಕಾಗಿ 34 ದೇಶಗಳು ಅರ್ಜಿ!

ಸಂಘರ್ಷ ಪೀಡಿತ ರಾಷ್ಟ್ರಗಳಾದ ಪ್ಯಾಲೆಸ್ತೀನ್, ಸಿರಿಯಾ ಮತ್ತು ಮ್ಯಾನ್ಮಾರ್ ಕೂಡ ಸದಸ್ಯತ್ವಕ್ಕಾಗಿ ಅರ್ಜಿ ಸಲ್ಲಿಸಿದ್ದು ಒಮ್ಮತದ ಅಭಿಪ್ರಾಯ ನಂತರ ಘೋಷಣೆ ಮಾಡಲಾಗುತ್ತದೆ.

ನವದೆಹಲಿ: ಬ್ರಿಕ್ಸ್ ಸದಸ್ಯತ್ವಕ್ಕಾಗಿ 34 ದೇಶಗಳು ಅಧಿಕೃತವಾಗಿ ಅರ್ಜಿ ಸಲ್ಲಿಸಿದ್ದು ಅಕ್ಟೋಬರ್ 22 ಮತ್ತು ಅಕ್ಟೋಬರ್ 24ರ ನಡುವೆ ಕಜಾನ್‌ನಲ್ಲಿ ನಡೆಯಲಿರುವ ಮುಂಬರುವ ಬ್ರಿಕ್ಸ್ ಶೃಂಗಸಭೆಯಲ್ಲಿ 10 ಹೊಸ ಸದಸ್ಯರು ಮತ್ತು 10 ಪಾಲುದಾರರನ್ನು ಘೋಷಿಸಲಾಗುತ್ತದೆ.

ಸಂಘರ್ಷ ಪೀಡಿತ ರಾಷ್ಟ್ರಗಳಾದ ಪ್ಯಾಲೆಸ್ತೀನ್, ಸಿರಿಯಾ ಮತ್ತು ಮ್ಯಾನ್ಮಾರ್ ಕೂಡ ಸದಸ್ಯತ್ವಕ್ಕಾಗಿ ಅರ್ಜಿ ಸಲ್ಲಿಸಿದ್ದು ಒಮ್ಮತದ ಅಭಿಪ್ರಾಯ ನಂತರ ಘೋಷಣೆ ಮಾಡಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಮೂರು ತಿಂಗಳ ಅವಧಿಯಲ್ಲಿ ರಷ್ಯಾಕ್ಕೆ ಅವರ ಎರಡನೇ ಭೇಟಿಯಾಗಲಿದೆ. ಮೋದಿ ಇತರ ಸದಸ್ಯರ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸುವ ಸಾಧ್ಯತೆಯಿದೆ. ಪ್ರಸ್ತುತ, ಟರ್ಕಿ ಮತ್ತು ಥೈಲ್ಯಾಂಡ್‌ ಸದಸ್ಯತ್ವಕ್ಕಾಗಿ ಅರ್ಜಿ ಸಲ್ಲಿಸಿದ್ದವು. ಆದಾಗ್ಯೂ, ಶೃಂಗಸಭೆಯ ಬದಿಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಪ್ರಧಾನಿ ಮೋದಿ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ ಎಂಬ ಊಹಾಪೋಹಗಳು ಹರಡಿವೆ.

ಹೊಸ ಸದಸ್ಯರಾಗಿ ಪರಿಗಣಿಸಲು ಸುಮಾರು 34 ದೇಶಗಳ ಜೊತೆ ಬ್ರಿಕ್ಸ್ ಚರ್ಚೆ ನಡೆಸಿವೆ. ಇವುಗಳಲ್ಲಿ ಅಲ್ಜೀರಿಯಾ, ಅಜೆರ್ಬೈಜಾನ್, ಬಹ್ರೇನ್, ಬಾಂಗ್ಲಾದೇಶ, ಬೆಲಾರಸ್, ಬೊಲಿವಿಯಾ, ಕ್ಯೂಬಾ, ಚಾಡ್, ರಿಪಬ್ಲಿಕ್ ಆಫ್ ಕಾಂಗೋ, ಈಕ್ವಟೋರಿಯಲ್ ಗಿನಿಯಾ, ಎರಿಟ್ರಿಯಾ, ಹೊಂಡುರಾಸ್, ಇಂಡೋನೇಷಿಯಾ, ಕಝಾಕಿಸ್ತಾನ್ ಸೇರಿವೆ. ಕುವೈತ್, ಲಾವೋಸ್, ಮಲೇಷ್ಯಾ, ಮ್ಯಾನ್ಮಾರ್, ಮೊರಾಕೊ, ನಿಕರಾಗುವಾ, ನೈಜೀರಿಯಾ, ಪಾಕಿಸ್ತಾನ, ಸೆನೆಗಲ್, ದಕ್ಷಿಣ ಸುಡಾನ್, ಶ್ರೀಲಂಕಾ, ಪ್ಯಾಲೆಸ್ಟೈನ್ ರಾಜ್ಯ, ಸಿರಿಯಾ, ಥೈಲ್ಯಾಂಡ್, ಟರ್ಕಿ, ಉಗಾಂಡಾ, ಉಜ್ಬೇಕಿಸ್ತಾನ್, ವೆನೆಜುವೆಲಾ, ವಿಯೆಟ್ನಾಂ ಮತ್ತು ಜಿಂಬಾಬ್ವೆ ಅರ್ಜಿ ಸಲ್ಲಿಸಿವೆ.

ಬ್ರಿಕ್ಸ್‌ನ ಪ್ರಸ್ತುತ ಹತ್ತು ಸದಸ್ಯ ರಾಷ್ಟ್ರಗಳು ಯಾವುವೆಂದರೆ ಬ್ರೆಜಿಲ್, ರಷ್ಯಾ, ಭಾರತ, ಚೀನಾ, ದಕ್ಷಿಣ ಆಫ್ರಿಕಾ, ಈಜಿಪ್ಟ್, ಇಥಿಯೋಪಿಯಾ, ಇರಾನ್, ಯುಎಇ ಮತ್ತು ಸೌದಿ ಅರೇಬಿಯಾ. ಏತನ್ಮಧ್ಯೆ, ಮುಂಬರುವ ಶೃಂಗಸಭೆಯಲ್ಲಿ ಸುಮಾರು 24 ರಾಷ್ಟ್ರಗಳ ನಾಯಕರು ಭಾಗವಹಿಸುವ ಸಾಧ್ಯತೆಯಿದೆ ಎಂದು ಕ್ರೆಮ್ಲಿನ್ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT