ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ 
ದೇಶ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ Z ಕೆಟಗರಿ ಭದ್ರತೆ ಒದಗಿಸಿದ ಕೇಂದ್ರ ಸರ್ಕಾರ

ಜುಲೈ 2021 ರಲ್ಲಿ ಕರ್ನಾಟಕದ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಂಡ ಥಾವರ್ ಚಂದ್ ಗೆಹ್ಲೋಟ್ಅವರು ಕರ್ನಾಟಕದ 13 ನೇ ರಾಜ್ಯಪಾಲರಾಗಿದ್ದಾರೆ.

ನವದೆಹಲಿ: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿ ರಾಷ್ಟ್ರದಾದ್ಯಂತ ಸುದ್ದಿಯಲ್ಲಿರುವ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೇಂದ್ರ ಸರ್ಕಾರ 'Z' ಕೆಟಗರಿ ಭದ್ರತೆ ಒದಗಿಸಿದೆ.

ಈ ಸಂಬಂಧ ಕೇಂದ್ರ ಗೃಹ ಸಚಿವಾಲಯ ಲಿಖಿತ ಆದೇಶ ಹೊರಡಿಸಿದೆ. ಗುಪ್ತಚರ ಇಲಾಖೆಯ ಇತ್ತೀಚಿನ ಬೆದರಿಕೆ ವರದಿಯ ನಂತರ ಸರ್ಕಾರ ಈ ಆದೇಶ ಹೊರಡಿಸಿದ್ದು, ಸಿಆರ್ ಪಿಎಫ್ ಗೆ ತಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

CRPF ಸಿಬ್ಬಂದಿ ಭೌತಿಕವಾಗಿ ರಾಜ್ಯಪಾಲರ ಭದ್ರತೆ ವಹಿಸಿಕೊಂಡಿದ್ದು, ಇತರ ಕೆಲವು ಕಾರ್ಯವಿಧಾನಗಳು ಈ ವಾರದೊಳಗೆ ಪೂರ್ಣಗೊಳ್ಳಲಿವೆ. ಕರ್ನಾಟಕದಲ್ಲಿ ಮಾತ್ರ ಗೆಹ್ಲೋಟ್ ಅವರಿಗೆ Z ಕೆಟಗರಿ ಭದ್ರತೆಯನ್ನು ಒದಗಿಸಲಾಗುವುದು ಎಂದು ಮೂಲಗಳು ಹೇಳಿವೆ.

ಜುಲೈ 2021 ರಲ್ಲಿ ಕರ್ನಾಟಕದ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಂಡ ಥಾವರ್ ಚಂದ್ ಗೆಹ್ಲೋಟ್ಅವರು ಕರ್ನಾಟಕದ 13 ನೇ ರಾಜ್ಯಪಾಲರಾಗಿದ್ದಾರೆ. ಮಧ್ಯಪ್ರದೇಶದಿಂದ ಕರ್ನಾಟಕದ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿರುವ ಮೊದಲ ವ್ಯಕ್ತಿಯಾಗಿದ್ದಾರೆ.

ಗೆಹ್ಲೋಟ್ ಅವರು 2014 ರಿಂದ 2021 ರವರೆಗೆ ಕೇಂದ್ರ ಸರ್ಕಾರದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಸ್ಥಾನವನ್ನು ಹೊಂದಿದ್ದರು. ಅಲ್ಲದೇ ಅವರು, ರಾಜ್ಯಸಭೆಯಲ್ಲಿ ಸಭಾನಾಯಕರಾಗಿಯೂ ಸೇವೆ ಸಲ್ಲಿಸಿದ್ದು, ಬಿಜೆಪಿ ಸಂಸದೀಯ ಮಂಡಳಿ ಮತ್ತು ಕೇಂದ್ರ ಚುನಾವಣಾ ಸಮಿತಿಯ ಸದಸ್ಯರಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

SCROLL FOR NEXT